ಬೀದರ್‌ನಲ್ಲಿ ಶಾಕಿಂಗ್ ಘಟನೆ: ಮಾವಿನ ಹಣ್ಣು ಸೇವಿಸಿದ ಬಳಿಕ ಅಸ್ವಸ್ಥ; ಇಬ್ಬರು ಸಹೋದರಿಯರು ಅನುಮಾನಾಸ್ಪದ ಸಾವು!

ಮೃತ ಸಹೋದರಿಯರಿನ್ನು 17 ವರ್ಷದ ಭವಾನಿ ವೈಜಿನಾಥ ಮೇತ್ರೆ ಮತ್ತು 14 ವರ್ಷದ ಸಂಧ್ಯಾರಾಣಿ ಮೇತ್ರೆ ಎಂದು ಗುರುತಿಸಲಾಗಿದೆ.
Two sisters die after eating Mango in Bidar
ಇಬ್ಬರು ಸಹೋದರಿಯರು ಅನುಮಾನಾಸ್ಪದ ಸಾವು
Updated on

ಬೀದರ್: ಬೀದರ್ ಜಿಲ್ಲೆಯ ಔರಾದ್ ತಾಲೂಕಿನ ಶೆಂಬೆಳ್ಳಿ ಗ್ರಾಮದಲ್ಲಿ ಆಘಾತಕಾರಿ ಘಟನೆ ನಡೆದಿದ್ದು, ಮಾವಿನ ಹಣ್ಣು ಸೇವಿಸಿದ ಬಳಿಕ ಅಸ್ವಸ್ಥಗೊಂಡ ಇಬ್ಬರು ಸಹೋದರಿಯರು ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾರೆ.

ಮೃತ ಸಹೋದರಿಯರಿನ್ನು 17 ವರ್ಷದ ಭವಾನಿ ವೈಜಿನಾಥ ಮೇತ್ರೆ ಮತ್ತು 14 ವರ್ಷದ ಸಂಧ್ಯಾರಾಣಿ ಮೇತ್ರೆ ಎಂದು ಗುರುತಿಸಲಾಗಿದೆ.

ಮೃತ ಯುವತಿಯರು ಸೇರಿದಂತೆ ಕುಟುಬಂದ ಹಲವು ಸದಸ್ಯರು ಜೂನ್ 9ರಂದು ಮನೆಯಲ್ಲಿ ಊಟ ಮಾಡಿದ ಬಳಿಕ ಮಾವಿನ ಹಣ್ಣು ಸೇವಿಸಿದ್ದಾರೆ. ಬಳಿಕ ಹಲವರ ಆರೋಗ್ಯದಲ್ಲಿ ಏರುಪೇರಾಗಿದೆ. ತಾಯಿ ಇಂದುಮತಿ ಹಾಗೂ ಐವರು ಪುತ್ರಿಯರು ಮಾವಿನ ಹಣ್ಣು ಸೇವಿಸಿದ ಬಳಿಕ ವಾಂತಿ ಮತ್ತು ಭೇದಿಯಿಂದ ಅಸ್ವಸ್ಥಗೊಂಡಿದ್ದಾರೆ.

Two sisters die after eating Mango in Bidar
ಚಿಕ್ಕಮಗಳೂರು: ಮಹಿಳೆ ನಿಗೂಢ ಸಾವು; ರಿವಾಲ್ವರ್‌ನಿಂದ ಶೂಟ್ ಮಾಡಿಕೊಂಡ ಸ್ಥಿತಿಯಲ್ಲಿ ಶವ ಪತ್ತೆ

ತಕ್ಷಣ ಕುಟುಂಬದ ಎಲ್ಲಾ ಸದಸ್ಯರನ್ನು ಹೈದರಾಬಾದ್‌ನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗೆ. ಆದರೆ ಚಿಕಿತ್ಸೆ ಫಲಕಾರಿಯಾಗದೆ ಭವಾನಿ ಮತ್ತು ಸಂಧ್ಯಾರಾಣಿ ಮೃತಪಟ್ಟಿದ್ದಾರೆ. ಇನ್ನೊಬ್ಬ ಸಹೋದರಿ ವಿಜಯಶ್ರೀ(19) ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ತಾಯಿ ಹಾಗೂ ಮತ್ತೊಬ್ಬ ಸಹೋದರಿ ಚೇತರಿಸಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.

ಸಾವಿಗೆ ನಿಖರ ಕಾರಣ ಏನು ಎಂಬುದು ಮರಣೋತ್ತರ ಪರೀಕ್ಷೆ ವರದಿ ಬಂದ ಬಳಿಕವೇ ತಿಳಿಯಲಿದೆ.

ಈ ಸಂಬಂಧ ಹೈದರಾಬಾದ್‌ನ ನಾರಾಯಣಗುಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

X

Advertisement

X
Kannada Prabha
www.kannadaprabha.com