

ಧಾರವಾಡ: ಅಪ್ರಾಪ್ತ ಬಾಲಕಿಯೊಬ್ಬಳು ಲವ್ ಜಿಹಾದ್ ಗೆ ಹೆದರಿ ಆತ್ಮಹತ್ಯೆಗೆ ಶರಣಾಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ತವ್ಯ ಲೋಪದ ಆರೋಪದಡಿ ಗರಗ ಸರ್ಕಲ್ ಸಿಪಿಐ ಶಿವಯೋಗಿ ಲೋಹಾರ್ ನನ್ನು ಅಮಾನತುಗೊಳಿಸಿ ಧಾರವಾಡ ಜಿಲ್ಲಾ ಪೊಲೀಸ್ ಎಸ್ಪಿ ಗುಂಜನ್ ಆರ್ಯ ಅವರು ಅಮಾನತು ಆದೇಶ ಹೊರಡಿಸಿದ್ದಾರೆ.
ಲವ್ ಜಿಹಾದ್ ಪ್ರಕರಣದಲ್ಲಿ ಪೊಲೀಸರು ರಾಜಿ ಸಂಧಾನ ಮಾಡಲು ಮುಂದಾಗಿದ್ದರು ಎಂಬ ಆರೋಪ ಕೇಳಿಬಂದಿತ್ತು. ಅಲ್ಲದೆ, ಈ ಪ್ರಕರಣದ ಹಿನ್ನೆಲೆಯಲ್ಲಿ ಅಪ್ರಾಪ್ತೆ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಪೋಷಕರು ಆರೋಪಿಸಿದ್ದರು. ಲವ್ ಜಿಹಾದ್ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಈಗಾಗಲೇ ಇಬ್ಬರು ಆರೋಪಿಗಳು ನಯೀಮ್ ಬೇಗ್ ಜೋರಮ್ಮನವರ್ (25) ಮತ್ತು ಸೊಹೈಲ್ ಮುಲ್ಲಾ (22) ನನ್ನು ಬಂಧಿಸಿದ್ದಾರೆ.
ಲವ್ ಜಿಹಾದ್ ಪ್ರಕರಣ ಹಿನ್ನಲೆ ಬಜರಂಗ ದಳ ಕಾರ್ಯಕರ್ತರು ಪೊಲೀಸ್ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಪ್ರತಿಭಟನೆ ನಡೆಸಿದ್ದರು.
Advertisement