ಮೈಸೂರು: ಮಗನ ನೆನೆದು ವೇದಿಕೆಯಲ್ಲೇ ಬಿಕ್ಕಿ ಬಿಕ್ಕಿ ಅತ್ತ ಶಾಸಕ ಜಿಟಿ ದೇವೇಗೌಡ

ಮೈಸೂರಿನ ಕೆಎಸ್‌ಒಯು ಘಟಿಕೋತ್ಸವ ಭವನದಲ್ಲಿ ಶಾಸಕ ಜಿ.ಟಿ ದೇವೇಗೌಡ ಪತ್ನಿ ಲಲಿತಾ ಜಿ.ಟಿ ದೇವೇಗೌಡ ಅವರಿಗೆ ʻಸಹಕಾರ ಸೇವಾ ರತ್ನ’ ಪ್ರಶಸ್ತಿ ನೀಡಿದ್ದ ಬೆನ್ನಲ್ಲೇ ಅಭಿನಂದನಾ ಸಮಾರಂಭ ಆಯೋಜಿಸಲಾಗಿತ್ತು.
ಜಿ.ಟಿ ದೇವೇಗೌಡ ಕಣ್ಣೀರು
ಜಿ.ಟಿ ದೇವೇಗೌಡ ಕಣ್ಣೀರು
Updated on

ಮೈಸೂರು: ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರದ ಶಾಸಕ ಹಾಗೂ ಮಾಜಿ ಸಚಿವ ಜಿ.ಟಿ ದೇವೇಗೌಡ ಮಗನನ್ನು ನೆನೆದು ಕಣ್ಣೀರು ಹಾಕಿದ್ದಾರೆ.

ಮೈಸೂರಿನ ಕೆಎಸ್‌ಒಯು ಘಟಿಕೋತ್ಸವ ಭವನದಲ್ಲಿ ಶಾಸಕ ಜಿ.ಟಿ ದೇವೇಗೌಡ ಪತ್ನಿ ಲಲಿತಾ ಜಿ.ಟಿ ದೇವೇಗೌಡ ಅವರಿಗೆ ʻಸಹಕಾರ ಸೇವಾ ರತ್ನ’ ಪ್ರಶಸ್ತಿ ನೀಡಿದ್ದ ಬೆನ್ನಲ್ಲೇ ಅಭಿನಂದನಾ ಸಮಾರಂಭ ಆಯೋಜಿಸಲಾಗಿತ್ತು.

ಈ ವೇಳೆ ಭಾಷಣಕ್ಕೆ ನಿಂತ ಕೂಡಲೇ ಶಾಸಕ ಜಿ.ಟಿ ದೇವೇಗೌಡರು ಗಳಗಳನೆ ಅತ್ತರು. ಕಾರ್ಯಕ್ರಮದಲ್ಲಿ ಪುತ್ರ ಶಾಸಕ ಹರೀಶ್ ಗೌಡ ಹೊರತುಪಡಿಸಿ ಕುಟುಂಬದ ಪ್ರತಿಯೊಬ್ಬ ಸದಸ್ಯರು ಭಾಗಿಯಾಗಿದ್ದರು. ಸಭಾಂಗಣದಲ್ಲಿ ನೆರೆದಿದ್ದವರ ಕಣ್ಣಂಚು ಒದ್ದೆಯಾಯಿತು. ಬೆಂಬಲಿಗರು

‘ಸದಾ ಕಾಲ ನಿಮ್ಮ ಜೊತೆಗಿರುತ್ತೇವೆ ವಿ ಅಣ್ಣಾ, ಅಳಬೇಡಿ’ ಎಂದು ಕೂಗಿದರು. ದೇವೇಗೌಡರ ಇಬ್ಬರು ಪುತ್ರಿಯರು ಕಾರ್ಯಕ್ರಮದಲ್ಲಿ ಹಾಜರಿದ್ದರು. ಈ ವೇಳೆ ಪುತ್ರನನ್ನು ನೆನೆದು ಜಿಟಿ ದೇವೇಗೌಡ ಭಾವುಕರಾದರು. ಪುತ್ರ ಹರೀಶ್ ಗೌಡ ಕೆಲಕಾಲ ತಂದೆ ಜಿಟಿ ದೇವೇಗೌಡರಿಂದ ದೂರವಿದ್ದು, ಅಂತರ ಕಾಯ್ದುಕೊಂಡಿದ್ದಾರೆ.

ಜಿ.ಟಿ ದೇವೇಗೌಡ ಕಣ್ಣೀರು
2028 ಚುನಾವಣೆಯಲ್ಲಿ ಜೆಡಿಎಸ್ ನಿಂದಲೇ ಸ್ಪರ್ಧೆ: ಜಿ.ಟಿ ದೇವೇಗೌಡ ಅಚ್ಚರಿ ನಡೆ!

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

X

Advertisement

X
Kannada Prabha
www.kannadaprabha.com