ಬೆಂಗಳೂರು: ಬೆಳ್ಳಂಬೆಳಗ್ಗೆ ಆಘಾತಕಾರಿ ಘಟನೆ; ಚಾಕುವಿನಿಂದ ಕುತ್ತಿಗೆ ಸೀಳಿ ಸಿಕ್ಕಿಂ ಮೂಲದ ಯುವತಿಯನ್ನು ಕೊಂದ ಬಾಯ್‌ಫ್ರೆಂಡ್!

ಬೆಳ್ಳಂದೂರು ಪೊಲೀಸ್ ಠಾಣೆ ವ್ಯಾಪ್ತಿಯ ಬಾಡಿಗೆ ಮನೆಯೊಂದರಲ್ಲಿ ಈ ಘಟನೆ ವರದಿಯಾಗಿದ್ದು, ಭಾನುವಾರ ಆರೋಪಿಯನ್ನು ಬಂಧಿಸಲಾಗಿದೆ.
Representative Image
ಪ್ರಾತಿನಿಧಿಕ ಚಿತ್ರ
Updated on

ಬೆಂಗಳೂರು: ನಗರದ ದೊಡ್ಡಕನಹಳ್ಳಿ ಪ್ರದೇಶದಲ್ಲಿ ಭಾನುವಾರ ಬೆಳಿಗ್ಗೆ ನಡೆದ ಜಗಳದಲ್ಲಿ ಸಿಕ್ಕಿಂ ಮೂಲದ 22 ವರ್ಷದ ಯುವತಿಯನ್ನು ಆಕೆಯ ಗೆಳೆಯನೇ ಅಡುಗೆಮನೆಯಲ್ಲಿ ಬಳಸುವ ಚಾಕುವಿನಿಂದ ಕತ್ತು ಸೀಳಿ ಕೊಲೆ ಮಾಡಿರುವ ಆಘಾತಕಾರಿ ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಬೆಳ್ಳಂದೂರು ಪೊಲೀಸ್ ಠಾಣೆ ವ್ಯಾಪ್ತಿಯ ಬಾಡಿಗೆ ಮನೆಯೊಂದರಲ್ಲಿ ಈ ಘಟನೆ ವರದಿಯಾಗಿದ್ದು, ಭಾನುವಾರ ಆರೋಪಿಯನ್ನು ಬಂಧಿಸಲಾಗಿದೆ.

ಮೃತರನ್ನು ಸಿಕ್ಕಿಂ ಮೂಲದ ಅತಿ ಹಂಗ್ಮಾ ಸುಬ್ಬಾ (22) ಎಂದು ಗುರುತಿಸಲಾಗಿದ್ದು, ಬೆಂಗಳೂರಿನ ಸಲೂನ್‌ನಲ್ಲಿ ರಿಸಪ್ಶನಿಸ್ಟ್ ಆಗಿ ಕೆಲಸ ಮಾಡುತ್ತಿದ್ದರು.

ಆರೋಪಿಯನ್ನು ಡಾರ್ಜಿಲಿಂಗ್ ಮೂಲದ ಪುರ್ಬಾ ಲೆಪ್ಚಾ ಎಂದು ಗುರುತಿಸಲಾಗಿದ್ದು, ಹೋಟೆಲ್‌ನಲ್ಲಿ ವೇಟರ್ ಆಗಿ ಕೆಲಸ ಮಾಡುತ್ತಿದ್ದನು ಎಂದು ಪೊಲೀಸರು ತಿಳಿಸಿದ್ದಾರೆ.

ಪೊಲೀಸರ ಪ್ರಕಾರ, ದಂಪತಿ ರಿಲೇಷನ್‌ಶಿಪ್‌ನಲ್ಲಿದ್ದರು ಮತ್ತು ಸುಮಾರು ಒಂದು ತಿಂಗಳ ಹಿಂದಷ್ಟೇ ಬೆಂಗಳೂರಿಗೆ ಬಂದಿದ್ದರು. ನಂತರ ಅವರು ದೊಡ್ಡಕನಹಳ್ಳಿಯಲ್ಲಿ ಒಟ್ಟಿಗೆ ವಾಸಿಸುತ್ತಿದ್ದರು.

Representative Image
ಬೆಂಗಳೂರು: Ice cream ಕೇಳಿದ್ದಕ್ಕಾಗಿ ಬಾಲಕಿ ಕೊಲೆ? ತಲೆಮರೆಸಿಕೊಂಡಿದ್ದ ವಕೀಲೆ ಬಂಧನ; ಲಿವ್ ಇನ್ ಪಾರ್ಟ್ನರ್ ಬಿಚ್ಚಿಟ್ಟ ರಹಸ್ಯ!

ಗುರುವಾರ ಬೆಳಿಗ್ಗೆ ಆರೋಪಿ ಮಹಿಳೆಗೆ ಮತ್ತೊಬ್ಬ ಸ್ನೇಹಿತನೊಂದಿಗೆ ಸಂಬಂಧ ಇದೆ ಎಂದು ಶಂಕಿಸಿದ ನಂತರ ಇಬ್ಬರ ನಡುವೆ ಜಗಳ ನಡೆದಿದೆ ಎಂದು ಪ್ರಾಥಮಿಕ ತನಿಖೆಯಲ್ಲಿ ತಿಳಿದುಬಂದಿದೆ.

ಜಗಳದ ಸಮಯದಲ್ಲಿ, ಲೆಪ್ಚಾ ಅಡುಗೆಮನೆಯಲ್ಲಿ ಬಳಸುವ ಚಾಕುವಿನಿಂದ ಸುಬ್ಬಾಳ ಮೇಲೆ ಹಲ್ಲೆ ನಡೆಸಿದ್ದಾನೆ ಮತ್ತು ಕತ್ತು ಸೀಳಿದ್ದಾನೆ. ಇದುವೇ ಆಕೆಯ ಸಾವಿಗೆ ಕಾರಣ ಎಂದು ಪೊಲೀಸರು ತಿಳಿಸಿದ್ದಾರೆ.

ಈ ಸಂಬಂಧ ಹೆಚ್ಚಿನ ತನಿಖೆ ನಡೆಯುತ್ತಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

X

Advertisement

X
Kannada Prabha
www.kannadaprabha.com