

ದಾವಣಗೆರೆ: ಕಲ್ಪನಹಳ್ಳಿ ಗ್ರಾಮದ ಹೊರ ವಲಯದಲ್ಲಿರುವ ಸಿಲಿಂಡರ್ ಗೋದಾಮಿನಲ್ಲಿ 18ಕ್ಕೂ ಹೆಚ್ಚು ಸಿಲಿಂಡರ್ ಗಳು ಸ್ಫೋಟಗೊಂಡಿವೆ. ಈ ದುರ್ಘಟನೆಯಲ್ಲಿ ಗೋದಾಮಿನಲ್ಲಿದ್ದ ಅನಿಲ್ ಹಾಗೂ ಸಿಲಿಂಡರ್ ಏಜೆನ್ಸಿಯ ಸಿಬ್ಬಂದಿಗೆ ಗಂಭೀರ ಗಾಯಗಳಾಗಿವೆ. ಅನಿಲ್ ಸ್ಥಿತಿ ಚಿಂತಾಜನಕವಾಗಿದ್ದು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಒಂದರ ನಂತರ ಒಂದರಂತೆ 18ಕ್ಕೂ ಹೆಚ್ಚು ಸಿಲಿಂಡರ್ ಗಳು ಸ್ಫೋಟಗೊಂಡಿವೆ.
ಸ್ಫೋಟದ ರಭಸಕ್ಕೆ ಸಿಲಿಂಡರ್ಗಳು ನೂರಾರು ಅಡಿ ಎತ್ತರಕ್ಕೆ ಚಿಮ್ಮಿದ್ದವು. ದೊಗ್ಗಳ್ಳಿ ಶಿವಕುಮಾರ್ ಎಂಬುವರಿಗೆ ಸೇರಿದ ಗೋದಾಮಿನಲ್ಲಿ ಅನಿಲ್ ಸಿಲಿಂಡರ್ ಸಂಗ್ರಹಿಸಿ ವಿತರಿಸುತ್ತಿದ್ದರು ಎನ್ನಲಾಗಿದೆ. ಘಟನೆ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಸತತ ಕಾರ್ಯಾಚರಣೆ ನಡೆಸಿ ಬೆಂಕಿಯನ್ನು ನಂದಿಸಿದರು. ಎಸ್ ಪಿ ಶೇಖರ್ ಸೇರಿದಂತೆ ಇತರ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
Advertisement