ಅಯ್ಯಪ್ಪ ಮಾಲೆ ಧರಿಸಿ ಶಬರಿಮಲೆ ಯಾತ್ರೆ ಕೈಗೊಂಡ ಹೆಚ್.ಡಿ. ಕುಮಾರಸ್ವಾಮಿ

ಮಧ್ಯಾಹ್ನದ ಹೊತ್ತಿಗೆ ಪಂಪಾ ನದಿ ತೀರವನ್ನು ಸೇರಿಕೊಳ್ಳುವ ಸಚಿವರು ತದನಂತರ ಪುಣ್ಯ ಸ್ನಾನ ಮಾಡಿ ಶಬರಿಮಲೆ ಹತ್ತಿರ ಸಾಗಲಿದ್ದಾರೆ.
ಶಬರಿಮಲೈ ಯಾತ್ರೆ ಕೈಗೊಂಡ HDK
ಶಬರಿಮಲೈ ಯಾತ್ರೆ ಕೈಗೊಂಡ HDK
Updated on

ಬೆಂಗಳೂರು: ಕೇಂದ್ರ ಸರ್ಕಾರದ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವರಾದ ಹೆಚ್.ಡಿ.ಕುಮಾರಸ್ವಾಮಿ ಅವರು ಶಬರಿಮಲೆ ಯಾತ್ರೆ ಕೈಗೊಂಡಿದ್ದಾರೆ.

ಇಂದು ಬೆಳಗಿನ ಜಾವವೇ ಕೊಚ್ಚಿನ್ ನಗರದ ಶ್ರೀ ಸುಬ್ರಮಣ್ಯ ಸ್ವಾಮಿ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿ ಶ್ರೀ ಅಯ್ಯಪ್ಪ ಸ್ವಾಮಿ ಮಾಲೆ ಧರಿಸಿ ನಂತರ ದೇಗುಲದಲ್ಲಿಯೇ ಇರುಮುಡಿ ಹೊತ್ತು ಶಬರಿಮಲೆಗೆ ಯಾತ್ರೆ ಹೊರಟರು.

ಮಧ್ಯಾಹ್ನದ ಹೊತ್ತಿಗೆ ಪಂಪಾ ನದಿ ತೀರವನ್ನು ಸೇರಿಕೊಳ್ಳುವ ಸಚಿವರು ತದನಂತರ ಪುಣ್ಯ ಸ್ನಾನ ಮಾಡಿ ಶಬರಿಮಲೆ ಹತ್ತಿರ ಸಾಗಲಿದ್ದಾರೆ.

ಸಂಜೆ ಅಯ್ಯಪ್ಪ ಸನ್ನಿಧಿಯಲ್ಲಿ ಪಡಿ ಪೂಜೆಯಲ್ಲಿ ಪಾಲ್ಗೊಳಿರುವ ಸಚಿವರು ನಂತರ ಅಯ್ಯಪ್ಪ ಸ್ವಾಮಿಗೆ ಪುಷ್ಪ ಅಭಿಷೇಕ ದಲ್ಲಿ ಭಾಗಿಯಾಗಲಿದ್ದಾರೆ. ಕುಮಾರಸ್ವಾಮಿಯವರು ಕೇಂದ್ರ ಸಚಿವರಾದ ನಂತರ ಶಬರಿಮಲೆಗೆ ಕೈಗೊಂಡ ಮೊದಲ ಯಾತ್ರೆ ಇದಾಗಿದೆ. ಇದಕ್ಕೂ ಮೊದಲು ಅವರು ಹಲವಾರು ಬಾರಿ ಅಯ್ಯಪ್ಪನ ಸನ್ನಿಧಿಗೆ ಯಾತ್ರೆ ಕೈಗೊಂಡಿದ್ದಾರೆ.

ಶಬರಿಮಲೈ ಯಾತ್ರೆ ಕೈಗೊಂಡ HDK
1993ರಲ್ಲಿ 3 ಎಕರೆ ಇದ್ದ ಆಸ್ತಿ 2018ಕ್ಕೆ 1,400 ಕೋಟಿ ಹೇಗಾಯ್ತು?: ರೈತರಿಗೂ ಶ್ರೀಮಂತರಾಗುವ ಮಾರ್ಗ ಹೇಳಿಕೊಡಿ; ಕುಮಾರಸ್ವಾಮಿ

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

X

Advertisement

X
Kannada Prabha
www.kannadaprabha.com