

ಬೆಂಗಳೂರು: ಹಾಲು ಪ್ರೋತ್ಸಾಹ ಧನ ಮತ್ತು ಸಬ್ಸಿಡಿ ಯೋಜನೆಗಳ ಬಗ್ಗೆ ಫಲಾನುಭವಿಗಳಿಗೆ ನೆರವು ಬಿಡುಗಡೆಯಾದ ತಕ್ಷಣ SMS ಅಧಿಸೂಚನೆಗಳ ಮೂಲಕ ತಿಳಿಸುವಂತೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಪಶುಸಂಗೋಪನಾ ಇಲಾಖೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ.
ಪಶುಸಂಗೋಪನಾ ಖಾತೆಯನ್ನು ಯಾವುದೇ ಸಚಿವರಿಗೆ ಹಂಚಿಕೆ ಮಾಡಲಾಗಿಲ್ಲ ಹೀಗಾಗಿ ಸ್ವತಃ ಮುಖ್ಯಮಂತ್ರಿಗಳೇ ನಿರ್ವಹಿಸುತ್ತಿದ್ದಾರೆ.
ರಾಷ್ಟ್ರೀಯ ಜಾನುವಾರು ಮಿಷನ್ ಅಡಿಯಲ್ಲಿ ಫಲಾನುಭವಿಗಳು ಹೇಗೆ ಕಾರ್ಯನಿರ್ವಹಿಸಿದ್ದಾರೆ ಎಂಬುದರ ವಿವರವಾದ ಮೌಲ್ಯಮಾಪನ ಕೋರಿದ್ದಾರೆ. ಬರ ಮತ್ತು ಮೇವಿನ ಕೊರತೆಯ ಸಾಧ್ಯತೆಯನ್ನು ಗಮನದಲ್ಲಿಟ್ಟುಕೊಂಡು ಸಮಗ್ರ ಮೇವು ನಿರ್ವಹಣಾ ಯೋಜನೆಯನ್ನು ಸಿದ್ಧಪಡಿಸುವಂತೆ ಮುಖ್ಯಮಂತ್ರಿ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಕೃಷಿ ಇಲಾಖೆಯೊಂದಿಗೆ ನಡೆದ ಸಭೆಯಲ್ಲಿ, ಸಮತೋಲಿತ ಪೋಷಕಾಂಶಗಳ ಅನ್ವಯವನ್ನು ಉತ್ತೇಜಿಸಲು ಮತ್ತು ಕೃಷಿ ಉತ್ಪಾದಕತೆಯನ್ನು ಸುಧಾರಿಸಲು ಭಾರತ ಸರ್ಕಾರದಿಂದ ಸಂಕೀರ್ಣ ರಸಗೊಬ್ಬರಗಳ ಹೆಚ್ಚುವರಿ ಹಂಚಿಕೆಯನ್ನು ಮುಂದುವರಿಸಲು ಮುಖ್ಯಮಂತ್ರಿ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. ಆಹಾರ ಸಂಸ್ಕರಣಾ ಪಾರ್ಕ್ ಗಳನ್ನು ಪರಿಶೀಲಿಸಿದ ಅವರು, ಖಾಸಗಿ ಸಂಸ್ಥೆಗಳಿಗೆ ಹಂಚಿಕೆಯಾದ ಭೂಮಿ, ಮಾಡಿದ ಹೂಡಿಕೆ ಮತ್ತು ಸಾಧಿಸಿದ ಫಲಿತಾಂಶದ ಕುರಿತು ವಿವರವಾದ ವರದಿ ನೀಡುವಂತೆ ಸೂಚಿಸಿದ್ದಾರೆ.
Advertisement