ದಾವಣಗೆರೆ: ಜಿಮ್ ಮುಗಿಸಿ ಮನೆಗೆ ಬಂದ ಬಾಡಿ ಬಿಲ್ಡರ್ ಕುಸಿದು ಬಿದ್ದು ಸಾವು!

ಕೂಡಲೇ ಕುಟುಂಬಸ್ಥರು ಆಸ್ಪತ್ರೆಗೆ ಸಾಗಿಸಿದ್ದಾರೆ. ಆದರೆ, ಮಾರ್ಗ ಮಧ್ಯದಲ್ಲೇ ಸುಶೀಲ್ ಸಾವನ್ನಪ್ಪಿದ್ದಾನೆ. ಲೋ ಬಿಪಿಯಾಗಿ ಹೃದಯಾಘಾತದಿಂದ ಸಾವನ್ನಪ್ಪಿರಬಹುದು ಎಂದು ಹೇಳಲಾಗುತ್ತಿದೆ.
SuShil kumar
ಸುಶೀಲ್ ಕುಮಾರ್
Updated on

ದಾವಣಗೆರೆ: ಜಿಮ್ ಮುಗಿಸಿ ಮನೆಗೆ ಮರಳಿದ್ದ ಬಾಡಿ ಬಿಲ್ಡರ್‌ ಹೃದಯಾಘಾತದಿಂದ ಮೃತಪಟ್ಟಿದ್ದಾರೆ.

ಕೆಟಿಜೆ ನಗರದ ನಿವಾಸಿ ಸುಶೀಲಕುಮಾರ್ (26) ಮೃತ ಯುವಕ. ಬಾಡಿ ಬಿಲ್ಡಿಂಗ್‌‌ ಪಟುವಾಗಿದ್ದ ಇವರು ರಾಜ್ಯ ಮತ್ತು ರಾಷ್ಟ್ರೀಯ ಮಟ್ಟದ ಪ್ರಶಸ್ತಿ ಗಳಿಸಿದ್ದರು. ಅಂತರರಾಷ್ಟ್ರೀಯ ಮಟ್ಟದ ಬಾಡಿ ಬಿಲ್ಡಂಗ್ ಕಾಂಪಿಟೇಷನ್‌ಗೆ ರೆಡಿಯಾಗುತ್ತಿದ್ದರು.ರಾತ್ರಿ 8:30 ರ ಸುಮಾರಿಗೆ ಜಿಮ್ ಮುಗಿಸಿಕೊಂಡು ಮನೆಗೆ ಬಂದಿದ್ದ. ತಲೆ ಸುತ್ತುವುದಾಗಿ ಹೇಳಿ, ಕೆಲ ಕ್ಷಣದಲ್ಲೇ ಕುಸಿದು ಬಿದ್ದಿದ್ದಾ‌ನೆ.

ಕೂಡಲೇ ಕುಟುಂಬಸ್ಥರು ಆಸ್ಪತ್ರೆಗೆ ಸಾಗಿಸಿದ್ದಾರೆ. ಆದರೆ, ಮಾರ್ಗ ಮಧ್ಯದಲ್ಲೇ ಸುಶೀಲ್ ಸಾವನ್ನಪ್ಪಿದ್ದಾನೆ. ಲೋ ಬಿಪಿಯಾಗಿ ಹೃದಯಾಘಾತದಿಂದ ಸಾವನ್ನಪ್ಪಿರಬಹುದು ಎಂದು ಹೇಳಲಾಗುತ್ತಿದೆ.

ಮಂಗಳವಾರ ರಾತ್ರಿ ಜಿಮ್ ಮುಗಿಸಿ ಮನೆಗೆ ಬಂದ ಸುಶೀಲ ಕುಮಾರ್ ಊಟ ಮಾಡಿದ ಕೆಲ ಕ್ಷಣದಲ್ಲೇ ಕುಸಿದು ಬಿದ್ದಿದ್ದಾರೆ. ತಕ್ಷಣ ಅವರನ್ನು ಸಮೀಪದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಚಿಕಿತ್ಸೆಗೆ ಸ್ಪಂದಿಸದೇ ಮೃತಪಟ್ಟಿದ್ದಾರೆ ಎಂದು ಕುಟುಂಬದ ಮೂಲಗಳು ತಿಳಿಸಿವೆ

SuShil kumar
ಎದೆ ಉರಿ ಎಂದು ಹೇಳಿದ್ದ 4 ವರ್ಷದ ಬಾಲಕ ಹಠಾತ್ ಸಾವು; ಹೃದಯಾಘಾತ ಶಂಕೆ

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com