ಧಾರವಾಡ ಕೋರ್ಟ್ ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ: ಕಲಾಪ ಸ್ಥಗಿತ, ಪರಿಶೀಲನೆ

ಧಾರವಾಡ ಉಪನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿರುವ ಜಿಲ್ಲಾ ನ್ಯಾಯಾಲಯಕ್ಕೆ ಅನುಮಾನಾಸ್ಪದ ಇ-ಮೇಲ್ ಬಂದಿದ್ದು, ಅದರಲ್ಲಿ ಬಾಂಬ್ ಸ್ಫೋಟದ ಬಗ್ಗೆ ಬೆದರಿಕೆ ಹಾಕಲಾಗಿದೆ.
Representational image
ಸಾಂದರ್ಭಿಕ ಚಿತ್ರ
Updated on

ಧಾರವಾಡ: ಇಲ್ಲಿನ ಆವರಣದಲ್ಲಿ ‘ಸೈನೈಡ್ ಗ್ಯಾಸ್ ಬಾಂಬ್‘ ಸ್ಫೋಟವಾಗಲಿದೆ ಎಂಬ ಬೆದರಿಕೆ ಸಂದೇಶ ಜಿಲ್ಲಾ ಮತ್ತು ಪ್ರಧಾನ ನ್ಯಾಯಾಧೀಶರ ಇಮೇಲ್‌ಗೆ ಬಂದಿದ್ದು, ಪೋಲೀಸರು ಕೋರ್ಟ್ ಪರಿಶೀಲನೆಯಲ್ಲಿ ತೊಡಗಿದ್ದಾರೆ.

ನ್ಯಾಯಾಲಯದ ಕಲಾಪಗಳನ್ನು ಸ್ಥಗಿತಗೊಳಿಸಿ, ಎಲ್ಲರನ್ನೂ ಹೊರಗೆ ಕಳಿಸಲಾಗಿದೆ. ಶ್ವಾನ ದಳ ಮತ್ತು ವಿಧ್ವಂಸಕ ಕೃತ್ಯ ತಪಾಸಣೆ ತಂಡದವರು ತಪಾಸಣೆ ನಡೆಸುತ್ತಿದ್ದಾರೆ. karunanidhi.kundi@underworld.dog ಇಮೇಲ್ ನಿಂದ ಸಂದೇಶ ಬಂದಿದೆ. ಸಂದೇಶದ ಕೊನೆಯಲ್ಲಿ 'ಜೈ ಕನಿಮೊಳಿ' ಎಂದು ಬರೆಯಲಾಗಿದೆ.

ಧಾರವಾಡ ಉಪನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿರುವ ಜಿಲ್ಲಾ ನ್ಯಾಯಾಲಯಕ್ಕೆ ಅನುಮಾನಾಸ್ಪದ ಇ-ಮೇಲ್ ಬಂದಿದ್ದು, ಅದರಲ್ಲಿ ಬಾಂಬ್ ಸ್ಫೋಟದ ಬಗ್ಗೆ ಬೆದರಿಕೆ ಹಾಕಲಾಗಿದೆ.

ನಿನ್ನೆ ಮಧ್ಯಾಹ್ನ 2 ಗಂಟೆಗೆ ನಿಮ್ಮ ನ್ಯಾಯಾಲಯದಲ್ಲಿ 23 ಸರಣಿ ಗುಂಡುಗಳು ಸ್ಫೋಟಗೊಂಡಿವೆ. ನಿನ್ನೆ ನಡೆದಿದ್ದು ಸ್ಯಾಂಪಲ್ ಪರೀಕ್ಷೆ. ಇಂದು ನಡೆಯುವುದು ನಿಜ ಎಂದು ಉಲ್ಲೇಖಿಸಲಾಗಿದೆ. ಬೆದರಿಕೆ ಮೇಲ್ ಬಂದ ತಕ್ಷಣ ಪೊಲೀಸರು ಅಲರ್ಟ್ ಆಗಿದ್ದಾರೆ. ಮುಂಜಾಗ್ರತಾ ಕ್ರಮವಾಗಿ ನ್ಯಾಯಾಲಯದೊಳಗಿದ್ದ ಸಿಬ್ಬಂದಿ, ವಕೀಲರು ಹಾಗೂ ಸಾರ್ವಜನಿಕರನ್ನು ಸುರಕ್ಷಿತವಾಗಿ ಹೊರಗೆ ಕಳುಹಿಸಲಾಗಿದೆ.

Representational image
CM ಕಚೇರಿ ಸೇರಿದಂತೆ ಮುಂಬೈನ ಹಲವು ಕಡೆ ಬಾಂಬ್ ಸ್ಫೋಟಿಸುವುದಾಗಿ ಖಲಿಸ್ತಾನ್ ಬೆದರಿಕೆ!

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com