ಕರಾವಳಿ ಪ್ರವಾಸೋದ್ಯಮ ರಾಯಭಾರಿಯಾಗಿ ರಿಷಭ್ ಶೆಟ್ಟಿ: ಸರ್ಕಾರದ ಪ್ರಸ್ತಾವನೆಗೆ ಪ್ರಗತಿಪರರಿಂದ ವಿರೋಧ?

ರಿಷಬ್ ಶೆಟ್ಟಿ ಅವರನ್ನು ಕರಾವಳಿ ಪ್ರವಾಸೋದ್ಯಮ ರಾಯಬಾರಿಯನ್ನಾಗಿಸುವ ಸರ್ಕಾರದ ಚಿಂತನೆಗೆ ಸಾಮಾಜಿಕ ಜಾಲತಾಣಗಳಲ್ಲಿ ಕರಾವಳಿ ಭಾಗದ ಪ್ರಗತಿಪರರು ಈ ವಿಚಾರವಾಗಿ ವಿರೋಧ ವ್ಯಕ್ತಪಡಿಸಿದ್ದಾರೆ.
Rishabh shetty- DK Shivakumar
ರಿಷಭ್ ಶೆಟ್ಟಿ- ಡಿಕೆ ಶಿವಕುಮಾರ್online desk
Updated on

ಬೆಂಗಳೂರು: ಖ್ಯಾತ ನಟ ರಿಷಬ್ ಶೆಟ್ಟಿಯನ್ನು ಕರಾವಳಿ ಪ್ರವಾಸೋದ್ಯಮ ದ ರಾಯಭಾರಿಯನ್ನಾಗಿ ಮಾಡಲು ಸರ್ಕಾರ ಚಿಂತನೆ ನಡೆಸಿದೆ.

ಕಾಂಗ್ರೆಸ್ ಸರ್ಕಾರದ ಈ ನಡೆಯ ಬಗ್ಗೆ ಪ್ರಗತಿಪರರು ಅಸಮಾಧಾನ ವ್ಯಕ್ತಪಡಿಸುತ್ತಿದ್ದಾರೆ. ಶುಕ್ರವಾರ ವಿಧಾನಸೌಧದಲ್ಲಿ ನಡೆದ ವಿಧಾನಸೌಧದ ಸಮಿತಿ ಕೊಠಡಿಯಲ್ಲಿ ನಡೆದ ಕರಾವಳಿ ಪ್ರವಾಸೋದ್ಯಮ ಸಭೆಯಲ್ಲಿ ಸಚಿವರು, ಅಧಿಕಾರಿಗಳ ಜೊತೆಗೆ ರಿಷಬ್ ಶೆಟ್ಟಿ ಕೂಡಾ ಭಾಗಿಯಾಗಿದ್ದರು. ಈ ಬೆನ್ನಲ್ಲೇ ಪ್ರಗತಿಪರರಿಂದ ಸಾಮಾಜಿಕ ಜಾಲತಾಣದಲ್ಲಿ ವಿರೋಧ ವ್ಯಕ್ತವಾಗತೊಡಗಿದೆ.

Rishabh shetty- DK Shivakumar
ಶೀಘ್ರದಲ್ಲೇ ಬಸ್ ಪ್ರಯಾಣ ದರ ಹೆಚ್ಚಳ? ರಾಜ್ಯದ ಹಿತಕ್ಕಾಗಿ ಕ್ರಮ ಎಂದ CM ಡಿಕೆ ಶಿವಕುಮಾರ್

ವಿರೋಧ ಏಕೆ?

ರಿಷಬ್ ಶೆಟ್ಟಿ ಅವರನ್ನು ಕರಾವಳಿ ಪ್ರವಾಸೋದ್ಯಮ ರಾಯಬಾರಿಯನ್ನಾಗಿಸುವ ಸರ್ಕಾರದ ಚಿಂತನೆಗೆ ಸಾಮಾಜಿಕ ಜಾಲತಾಣಗಳಲ್ಲಿ ಕರಾವಳಿ ಭಾಗದ ಪ್ರಗತಿಪರರು ಈ ವಿಚಾರವಾಗಿ ವಿರೋಧ ವ್ಯಕ್ತಪಡಿಸಿದ್ದಾರೆ.

ರಿಷಬ್ ಶೆಟ್ಟಿ ಬಲ ಪಂಥೀಯ ಒಲವು ಇರುವ ನಟ ಎಂದು ಅವರು ದೂರಿದ್ದಾರೆ. ಹಾಗಾಗಿ ರಾಯಬಾರಿಯನ್ನಾಗಿ ಮಾಡಬಾರದು, ಸರ್ಕಾರದ ಚಿಂತನೆ ಸರಿಯಾಗಿಲ್ಲ ಎಂದು ಅಭಿಪ್ರಾಯಪಟ್ಟಿದ್ದಾರೆ.

ಕರಾವಳಿಯ ಜನಪದ ಕಲೆ, ಸಂಗೀತಕ್ಕೆ ಪ್ರೋತ್ಸಾಹ ನೀಡಬೇಕು ಎಂದು ಸಭೆಯಲ್ಲಿ ಭಾಗಿಯಾಗಿದ್ದ ರಿಷಬ್‌ ಶೆಟ್ಟಿ ಮನವಿ ಮಾಡಿದ್ದರು. ಸಿನಿಮಾ ಚಿತ್ರೀಕರಣಕ್ಕೆ ಹೆಚ್ಚಿನ ಅನುಕೂಲ ಕಲ್ಪಿಸುವುದರಿಂದ ಕೇರಳ-ಗೋವಾ-ಕರ್ನಾಟಕದ ಸಿನಿಮಾ ಜಗತ್ತಿಗೆ ಹೆಚ್ಚು ಅನುಕೂಲ ಆಗುತ್ತಿದೆ ಎಂದು ಗಮನ ಸೆಳೆದಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

X

Advertisement

X
Kannada Prabha
www.kannadaprabha.com