50-50 ಒಪ್ಪಂದದಂತೆ ಸಿದ್ದರಾಮಯ್ಯ CM ಸ್ಥಾನ ಬಿಟ್ಟುಕೊಟ್ಟರು: ಡಿಕೆ.ಶಿವಕುಮಾರ್

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಸಮ್ಮುಖದಲ್ಲಿ ಒಪ್ಪಂದವಾಗಿತ್ತು. ನಂತರ ಯಾವುದೇ ಚರ್ಚೆಯೇ ನಡೆದಿಲ್ಲ. ಆ ಒಪ್ಪಂದದಂತೆ ಸಿದ್ದರಾಮಯ್ಯ ಅವರು ಅಧಿಕಾರ ಬಿಟ್ಟುಕೊಟ್ಟರು.
Siddaramaiah and DK Shivkumar
ಸಿದ್ದರಾಮಯ್ಯ ಹಾಗೂ ಡಿಕೆ.ಶಿವಕುಮಾರ್
Updated on

ಬೆಂಗಳೂರು: ಹೈಕಮಾಂಡ್ ಮಟ್ಟದಲ್ಲಿ ನಡೆದಿದ್ದ “50-50 ಒಪ್ಪಂದ”ದಂತೆ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಸ್ಥಾನ ಬಿಟ್ಟುಕೊಟ್ಟರು ಎಂದು ಡಿ.ಕೆ. ಶಿವಕುಮಾರ್ ಅವರು ಭಾನುವಾರ ಹೇಳಿದರು.

ಬಿ.ಕೆ. ಹರಿಪ್ರಸಾದ್ ಅವರು ಕೆಪಿಸಿಸಿ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ‘ಸಂಕಲ್ಪ’ ರ್ಯಾಲಿಯಲ್ಲಿ ಮಾತನಾಡಿದ ಅವರು, “ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಸಮ್ಮುಖದಲ್ಲಿ ಒಪ್ಪಂದವಾಗಿತ್ತು. ನಂತರ ಯಾವುದೇ ಚರ್ಚೆಯೇ ನಡೆದಿಲ್ಲ. ಆ ಒಪ್ಪಂದದಂತೆ ಸಿದ್ದರಾಮಯ್ಯ ಅವರು ಅಧಿಕಾರ ಬಿಟ್ಟುಕೊಟ್ಟರು ಎಂದು ಹೇಳಿದರು.

ಇದೇ ವೇಳೆ, ರಾಜ್ಯದ ಗ್ಯಾರಂಟಿ ಯೋಜನೆಗಳ ಫಲಾನುಭವಿಗಳ ದಾಖಲೆಗಳನ್ನು ಪರಿಶೀಲಿಸಲು ಮುಂದಿನ ದಿನಗಳಲ್ಲಿ ಪ್ರತಿ ಪಂಚಾಯಿತಿ ಮತ್ತು ವಾರ್ಡ್ ಮಟ್ಟದಲ್ಲಿ ಐದು ಸದಸ್ಯರ ಗ್ಯಾರಂಟಿ ಸಮಿತಿಗಳನ್ನು ರಚಿಸಲಾಗುವುದು ಎಂದು ಶಿವಕುಮಾರ್ ಅವರು ಘೋಷಿಸಿದರು.

ರಾಜ್ಯದ ಕಾಲೇಜುಗಳಲ್ಲಿ ವಿದ್ಯಾರ್ಥಿ ಸಂಘಗಳ ಚುನಾವಣೆಗಳನ್ನು ಮರುಪ್ರಾರಂಭಿಸುವ ಬಗ್ಗೆ ಸಚಿವ ಸಂಪುಟದಲ್ಲಿ ಶೀಘ್ರವೇ ತೀರ್ಮಾನ ಕೈಗೊಳ್ಳಲಾಗುವುದು ಎಂದೂ ಹೇಳಿದರು. “ಈ ವರ್ಷದಿಂದಲೇ ವಿದ್ಯಾರ್ಥಿ ಚುನಾವಣೆಗಳನ್ನು ನಡೆಸಲಾಗುವುದು,” ಎಂದು ತಿಳಿಸಿದರು.

Siddaramaiah and DK Shivkumar
ವಿಧಾನಸೌಧದ ಭವ್ಯ ಮೆಟ್ಟಿಲುಗಳ ಮೇಲೆ ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ಸೋಮವಾರ 8 ಸಚಿವರ ಜೊತೆ ಪ್ರಮಾಣವಚನ?
Siddaramaiah and DK Shivkumar
ಖರ್ಗೆಯವರಿಗೆ CM ಆಗುವ ಆಸೆ; ಕಾಂಗ್ರೆಸ್‌ನಲ್ಲಿ ನಾಯಕತ್ವ ಬಿಕ್ಕಟ್ಟು: D K ಶಿವಕುಮಾರ್ ಪರ ಘೋಷಣೆಗೆ ಕಾರ್ಯಕರ್ತರಿಗೆ ಎಚ್ಚರಿಕೆ ನೀಡಿದ್ದಕ್ಕೆ ಬಿಜೆಪಿ ನಾಯಕ ಟೀಕೆ-Video

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

X

Advertisement

X
Kannada Prabha
www.kannadaprabha.com