

ಮಂಡ್ಯ: ಮುತ್ತತ್ತಿಯ ಮುತ್ತೆತ್ತರಾಯ ದೇವಸ್ಥಾನಕ್ಕೆ ಚನ್ನಪಟ್ಟಣ ಮೂಲದ ಕುಟುಂಬವೊಂದು ಬಂದಿದ್ದು ದೇವರ ದರ್ಶನ ಪಡೆದ ನಂತರ ಕಾವೇರಿ ನದಿಗಿಳಿದು ಫೋಟೋ ತೆಗೆದುಕೊಳ್ಳುವಾಗ ಐವರು ನೀರುಪಾಲಾಗಿರುವ ಘಟನೆ ನಡೆದಿದೆ. ಮೃತರನ್ನು 28 ವರ್ಷದ ಶ್ವೇತಾ, 20 ವರ್ಷದ ಚೈತ್ರ, 28 ವರ್ಷದ ಪ್ರಿಯಾಂಕಾ, 50 ವರ್ಷದ ವಿಜಯಮ್ಮ ಮತ್ತು ಮಹೇಶ್ ಎಂದು ಗುರುತಿಸಲಾಗಿದೆ. ಸದ್ಯ ಅಗ್ನಿಶಾಮಕದಳ ಸಿಬ್ಬಂದಿ ಐವರ ಮೃತದೇಹವನ್ನು ನದಿಯಿಂದ ಹೊರತೆಗೆದಿದ್ದಾರೆ.