PWD ಸಚಿವ ಸತೀಶ್ ಜಾರಕಿಹೊಳಿ ಬಾಮೈದನ ಮನೆಯಲ್ಲಿ 13 ಕೋಟಿ ಮೌಲ್ಯದ ಆಸ್ತಿ ಪತ್ತೆ!

ಸಚಿವ ಸತೀಶ ಜಾರಕಿಹೊಳಿ‌ ಭಾಮೈದ, ಅಬಕಾರಿ ಇಲಾಖೆ ಹೆಚ್ಚುವರಿ ಆಯುಕ್ತ ವೈ.ಮಂಜುನಾಥ ಮನೆ ಮೇಲೆ ಇಡಿ ಅಧಿಕಾರಿಗಳು ನಡೆಸಿದ್ದ ದಾಳಿ ಅಂತ್ಯವಾಗಿದ್ದು ಸುಮಾರು 13 ಕೋಟಿ ಮೌಲ್ಯದ ಆಸ್ತಿ ಪತ್ತೆಯಾಗಿದೆ.
Y Manjunath
ಅಬಕಾರಿ ಇಲಾಖೆ ಹೆಚ್ಚುವರಿ ಆಯುಕ್ತ ವೈ.ಮಂಜುನಾಥ
Updated on

ಬೆಂಗಳೂರು: ಸಚಿವ ಸತೀಶ ಜಾರಕಿಹೊಳಿ‌ ಭಾಮೈದ, ಅಬಕಾರಿ ಇಲಾಖೆ ಹೆಚ್ಚುವರಿ ಆಯುಕ್ತ ವೈ.ಮಂಜುನಾಥ ಮನೆ ಮೇಲೆ ಇಡಿ ಅಧಿಕಾರಿಗಳು ನಡೆಸಿದ್ದ ದಾಳಿ ಅಂತ್ಯವಾಗಿದ್ದು ಸುಮಾರು 13 ಕೋಟಿ ಮೌಲ್ಯದ ಆಸ್ತಿ ಪತ್ತೆಯಾಗಿದೆ. ಬೆಳಗಾವಿ, ಬೆಂಗಳೂರು, ಮೈಸೂರು ಸೇರಿದಂತೆ ವಿವಿಧೆಡೆ ದಾಳಿಯಲ್ಲಿ ಸಾಕಷ್ಟು ಮಹತ್ವದ ದಾಖಲೆ, ಚಿನ್ನಾಭರಣ ಪತ್ತೆಯಾಗಿದ್ದು, ಮಹತ್ವದ ದಾಖಲೆ, ಬೇನಾಮಿ ಬಾರ್ ಲೈಸೆನ್ಸ್, ಬೇನಾಮಿ ಆಸ್ತಿ ಪತ್ರಗಳನ್ನು ಅಧಿಕಾರಿಗಳು ವಶಕ್ಕೆ ಪಡೆದಿದ್ದರು. ಇದೀಗ ದಾಳಿಗೆ ಸಂಬಂಧಿಸಿದಂತೆ ಇಡಿ ಅಧಿಕಾರಿಗಳು ಮಾಹಿತಿ ಹಂಚಿಕೊಂಡಿದ್ದಾರೆ.

ಮಂಜುನಾಥ್ ಗೆ ಸೇರಿದ 13.3 ಕೋಟಿ ಮೌಲ್ಯದ ಆಸ್ತಿಯನ್ನು ಜಾರಿ ನಿರ್ದೇಶನಾಲಯ ವಶಪಡಿಸಿಕೊಂಡಿದೆ. ನಿನ್ನೆ ಇಡಿ ಅಧಿಕಾರಿಗಳು ಮಂಜುನಾಥ್ ಅವರಿಗೆ ಸೇರಿದ ಒಟ್ಟು 14 ಕಡೆ ದಾಳಿ ಮಾಡಿ ಪರಿಶೀಲನೆ ನಡೆಸಿದ್ದರು. ದಾಳಿ ವೇಳೆ 5.5 ಕೋಟಿ ನಗದು ಸೇರಿದಂತೆ 7.8 ಕೋಟಿ ಮೌಲ್ಯದ ಚಿನ್ನಾಭರಣವನ್ನು ಇಡಿ ವಶಪಡಿಸಿಕೊಂಡಿದೆ. ಇದರ ಜೊತೆಗೆ 3.3 ಲಕ್ಷ ಮೌಲ್ಯದ ವಿದೇಶಿ ಕರೆನ್ಸಿ, ಕ್ಯಾಶ್ ಬುಕ್, ಆಸ್ತಿ ಪತ್ರಗಳು ದಾಳಿಯಲ್ಲಿ ಪತ್ತೆಯಾಗಿರುವ ಮಾಹಿತಿ ಲಭ್ಯವಾಗಿದೆ.

Y Manjunath
'ಸ್ಪ್ಲೆಂಡರ್ ಸಿದ್ದಾ ರೆಡ್ಡಿ' ಬಂಧನ: ಖತರ್ನಾಕ್ ಕಳ್ಳ, 41 ಬೈಕ್ ಕಳ್ಳತನ ಪ್ರಕರಣ ಭೇದಿಸಿದ ಬಳ್ಳಾರಿ ಪೊಲೀಸರು, Video

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com