ಸಮತೋಲನ ಆಹಾರದ ಪಾಠದಲ್ಲಿ ಮೊಟ್ಟೆ ಮಾಂಸಾಹಾರದ ಉಲ್ಲೇಖವಿಲ್ಲ: ಸ್ಥಳೀಯ ಸಂಸ್ಕೃತಿಗೆ ಆದ್ಯತೆಯಿಲ್ಲ; ಮಧು ಬಂಗಾರಪ್ಪ

ಪರಿಷ್ಕರಣೆಯಲ್ಲಿ ಅನೇಕ ತಪ್ಪುಗಳು ಕಂಡುಬಂದಿದ್ದವು ಎಂದು ಮಧು ಬಂಗಾರಪ್ಪ ನೆನಪಿಸಿಕೊಂಡಿದ್ದಾರೆ. ಈ ಪುಸ್ತಕಕ್ಕೆ “ಕೃಷ್ಣ” ಎಂದು ಹೆಸರಿಡಲಾಗಿದೆ. ಕನ್ನಡದ ವೈಚಾರಿಕ ಪರಂಪರೆ, ಸ್ಥಳೀಯ ಸಂಸ್ಕೃತಿ ಹಾಗೂ ಪ್ರಾದೇಶಿಕ ಜೀವನ ಶೈಲಿಗೆ ಪುಸ್ತಕದಲ್ಲಿ ಆದ್ಯತೆ ನೀಡಿಲ್ಲ.
Madhu Bangarappa
ಮಧು ಬಂಗಾರಪ್ಪ
Updated on

ಬೆಂಗಳೂರು: ಆರನೇ ತರಗತಿಗಾಗಿ NCERT ಬಿಡುಗಡೆ ಮಾಡಿರುವ ಕನ್ನಡ ಪಠ್ಯಪುಸ್ತಕಕ್ಕೆ ಮಾಜಿ ಶಿಕ್ಷಣ ಸಚಿವ ಮಧು ಬಂಗಾರಪ್ಪ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ರಾಜ್ಯದೊಂದಿಗೆ ಯಾವುದೇ ಚರ್ಚೆ ನಡೆಸದೇ ಪುಸ್ತಕ ಬಿಡುಗಡೆ ಮಾಡಲಾಗಿದೆ ಎಂದು ಅವರು ಆರೋಪಿಸಿದ್ದಾರೆ.

ಈ ಸಂಬಂಧ ಪ್ರತಿಕ್ರಿಯಿಸಿರುವ ಮಾಜಿ ಶಿಕ್ಷಣ ಸಚಿವ ಮಧು ಬಂಗಾರಪ್ಪ, ಬಿಜೆಪಿ ಸರ್ಕಾರವು ಮಕ್ಕಳ ಮನಸ್ಸಿನಲ್ಲಿ ಸೈದ್ಧಾಂತಿಕ ವಿಚಾರಗಳನ್ನು ಹೇರಿಕೆ ಮಾಡಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದ್ದಾರೆ. ಹಿಂದಿನ ಬಿಜೆಪಿ ಸರ್ಕಾರವು ಅವಧಿಯಲ್ಲಿಯೂ ಪಠ್ಯಪುಸ್ತಕ

ಪರಿಷ್ಕರಣೆಯಲ್ಲಿ ಅನೇಕ ತಪ್ಪುಗಳು ಕಂಡುಬಂದಿದ್ದವು ಎಂದು ಮಧು ಬಂಗಾರಪ್ಪ ನೆನಪಿಸಿಕೊಂಡಿದ್ದಾರೆ. ಈ ಪುಸ್ತಕಕ್ಕೆ “ಕೃಷ್ಣ” ಎಂದು ಹೆಸರಿಡಲಾಗಿದೆ. ಕನ್ನಡದ ವೈಚಾರಿಕ ಪರಂಪರೆ, ಸ್ಥಳೀಯ ಸಂಸ್ಕೃತಿ ಹಾಗೂ ಪ್ರಾದೇಶಿಕ ಜೀವನ ಶೈಲಿಗೆ ಪುಸ್ತಕದಲ್ಲಿ ಆದ್ಯತೆ ನೀಡಿಲ್ಲ ಎಂದು ಮಧು ಬಂಗಾರಪ್ಪ ಹೇಳಿದ್ದಾರೆ.

ಸಮತೋಲನ ಆಹಾರದ ಪಾಠದಲ್ಲಿ ಮೊಟ್ಟೆ, ಮೀನು ಮತ್ತು ಮಾಂಸಾಹಾರದ ಕುರಿತು ಯಾವುದೇ ಉಲ್ಲೇಖವಿಲ್ಲ. ಕೇವಲ ಸಸ್ಯಾಹಾರಕ್ಕೆ ಮಾತ್ರ ಪ್ರಾಮುಖ್ಯತೆ ನೀಡಲಾಗಿದೆ. ಇದು ಸಮತೋಲಿತ ನಿರೂಪಣೆ ಅಲ್ಲ ಎಂದು ಮಧು ಬಂಗಾರಪ್ಪ ಅಭಿಪ್ರಾಯಪಟ್ಟಿದ್ದಾರೆ. ಮಕ್ಕಳ ಶಿಕ್ಷಣವು ಯಾವಾಗಲೂ ಅವರ ಹಿತಾಸಕ್ತಿಗೆ ಪೂರಕವಾಗಿರಬೇಕು ಎಂದು ತಿಳಿಸಿದ್ದಾರೆ.

Madhu Bangarappa
ಮುಖ್ಯಮಂತ್ರಿಗಳೇ ಶಿಕ್ಷಣ ಖಾತೆ ನೋಡಿಕೊಳ್ಳುತ್ತಿದ್ದಾರೆ, ಸಚಿವ ಸ್ಥಾನ ನೀಡುವುದು ಹೈಕಮಾಂಡ್ ತೀರ್ಮಾನ: ಮಧು ಬಂಗಾರಪ್ಪ; Video

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

X
Kannada Prabha
www.kannadaprabha.com