MLA ಪ್ರದೀಪ್ ಈಶ್ವರ್ ಮೇಲೆ ಚಪ್ಪಲಿ ಎಸೆತ: ಹೇಯ, ಹೇಡಿತನದ ಕೃತ್ಯ- ಬಿಕೆ ಹರಿಪ್ರಸಾದ್ ಖಂಡನೆ!

ಹೊರಗಡೆ ಪ್ರದೀಪ್ ಈಶ್ವರ್ ಮೇಲೆ ಚಪ್ಪಲಿ ಎಸೆತ ಪ್ರಯತ್ನ ನಡೆಸಲಾಗಿದೆ. ಆದರೆ ಅದು ಪೊಲೀಸ್ ಅಧಿಕಾರಿ ಮೇಲೆ ಬಿದ್ದಿದೆ. ಈ ಘಟನೆಯನ್ನು ಕೆಪಿಸಿಸಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಖಂಡಿಸಿದ್ದಾರೆ.
BK Hariprasad, Pradeep Eshwar
ಬಿಕೆ ಹರಿಪ್ರಸಾದ್, ಪ್ರದೀಪ್ ಈಶ್ವರ್ ಸಾಂದರ್ಭಿಕ ಚಿತ್ರ
Updated on

ಬೆಂಗಳೂರು: ಚಿಕ್ಕಬಳ್ಳಾಪುರದಲ್ಲಿ ಶನಿವಾರ ನಡೆದ ಕೆಂಪೇಗೌಡ ಜಯಂತಿ ಆಚರಣೆ ವೇಳೆ ಶಾಸಕ ಪ್ರದೀಪ್ ಈಶ್ವರ್ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಜೆಡಿಎಸ್ ಹಾಗೂ ಸುಧಾಕರ್ ಬೆಂಬಲಿಗರು ಬಿಟ್ಟಿಲ್ಲ. ವೇದಿಕೆ ಒಳಗೆ ಹಾಗೂ ಹೊರಗೆ ಗಲಾಟೆ ಮಾಡುವ ಮೂಲಕ ಪ್ರದೀಪ್ ಈಶ್ವರ್ ಅವರನ್ನು ಅಲ್ಲಿಂದ ಕಳುಹಿಸಿದ್ದಾರೆ.

ಹೊರಗಡೆ ಪ್ರದೀಪ್ ಈಶ್ವರ್ ಮೇಲೆ ಚಪ್ಪಲಿ ಎಸೆತ ಪ್ರಯತ್ನ ನಡೆಸಲಾಗಿದೆ. ಆದರೆ ಅದು ಪೊಲೀಸ್ ಅಧಿಕಾರಿ ಮೇಲೆ ಬಿದ್ದಿದೆ. ಈ ಘಟನೆಯನ್ನು ಕೆಪಿಸಿಸಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಖಂಡಿಸಿದ್ದಾರೆ.

ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಅವರು ಪೋಸ್ಟ್ ಮಾಡಿದ್ದು, ಸಾರ್ವಜನಿಕವಾಗಿ ವಿರೋಧ ಪಕ್ಷದವರು ಚಪ್ಪಲಿ ಎಸೆದು ನಡೆಸಿರುವ ಕೃತ್ಯವನ್ನು ತೀವ್ರವಾಗಿ ಖಂಡಿಸುತ್ತೇನೆ ಎಂದಿದ್ದಾರೆ.

ರಾಜಕೀಯದಲ್ಲಿ ಭಿನ್ನಾಭಿಪ್ರಾಯಗಳು ಸಹಜ. ಆದರೆ ವಾದದಿಂದ ಎದುರಿಸಲಾಗದವರು, ಪ್ರಜಾಪ್ರಭುತ್ವದ ಭಾಷೆಯಲ್ಲಿ ಉತ್ತರಿಸಲು ಸಾಧ್ಯವಾಗದವರು ಮಾತ್ರ ಇಂತಹ ಹೇಯ ಮತ್ತು ಹೇಡಿತನದ ಕೃತ್ಯಗಳಿಗೆ ಇಳಿಯುತ್ತಾರೆ ಎಂದಿದ್ದಾರೆ.

ಭಿನ್ನಮತವನ್ನು ಹಿಂಸೆ, ಬೆದರಿಕೆ ಮತ್ತು ಅವಮಾನದಿಂದ ಹತ್ತಿಕ್ಕಲು ಹೊರಟಿರುವ ರಾಜಕೀಯ ಸಂಸ್ಕೃತಿಗೆ ಕರ್ನಾಟಕದಲ್ಲಿ ಯಾವುದೇ ಸ್ಥಾನವಿಲ್ಲ. ಜನರ ತೀರ್ಪಿಗೆ ಗೌರವ ಕೊಡುವ ಪ್ರಜಾಪ್ರಭುತ್ವದಲ್ಲಿ ಇಂತಹ ದುಷ್ಕೃತ್ಯಗಳಿಗೆ ಯಾವುದೇ ಸಮರ್ಥನೆ ಇಲ್ಲ ಎಂದು ಕಿಡಿಕಾರಿದ್ದಾರೆ.

BK Hariprasad, Pradeep Eshwar
Video: ಕೆಂಪೇಗೌಡ ಜಯಂತಿ ಆಚರಣೆ ವೇಳೆ ಹೈಡ್ರಾಮಾ, ಚಪ್ಪಲಿ ಎಸೆತ, ಕುಮಾರಣ್ಣ ನಿನ್ನ ಚೇಲಾಗಳಿಗೆ ಹೆದರಲ್ಲ! ತಾಕತ್ ಇದ್ರೆ ಬಾ... ಪ್ರದೀಪ್ ಈಶ್ವರ್ ಸವಾಲು

ಪ್ರದೀಪ್ ಈಶ್ವರ್ ಅವರು ಎದೆಗುಂದಬೇಕಿಲ್ಲ. ಕಾಂಗ್ರೆಸ್ ಪಕ್ಷ ನಿಮ್ಮೊಂದಿಗೆ ದೃಢವಾಗಿ ನಿಂತಿದೆ. ಸತ್ಯ, ಪ್ರಜಾಪ್ರಭುತ್ವ ಮತ್ತು ಜನರ ಪರವಾದ ಧ್ವನಿಯನ್ನು ಇಂತಹ ಕೃತ್ಯಗಳಿಂದ ಯಾರೂ ಮೌನಗೊಳಿಸಲು ಸಾಧ್ಯವಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

X
Kannada Prabha
www.kannadaprabha.com