ಬಳ್ಳಾರಿಯಲ್ಲಿ ಜಂಟಿ ಕಾರ್ಯಾಚರಣೆ; 12ಕ್ಕೂ ಹೆಚ್ಚು ಬಾಲ ಕಾರ್ಮಿಕರ ರಕ್ಷಣೆ, ಮಾಲೀಕರ ವಿರುದ್ಧ ಪ್ರಕರಣ ದಾಖಲು..!

ಅಪ್ರಾಪ್ತರನ್ನು ಕೆಲಸಕ್ಕೆ ಬಳಸುತ್ತಿದ್ದ ಅನುಮಾನದ ಮೇರೆಗೆ ಹಲವು ವಾಣಿಜ್ಯ ಸಂಸ್ಥೆಗಳು ಹಾಗೂ ಕೈಗಾರಿಕಾ ಘಟಕಗಳ ಮೇಲೆ ಅಧಿಕಾರಿಗಳು ದಿಢೀರ್ ದಾಳಿ ನಡೆಸಿದರು.
Members of the joint task force rescue child labourers and adolescents during a raid in Ballari district on Sunday.
ಬಳ್ಳಾರಿ ಜಿಲ್ಲೆಯಲ್ಲಿ ಭಾನುವಾರ ನಡೆದ ದಾಳಿಯಲ್ಲಿ ಜಂಟಿ ಕಾರ್ಯಪಡೆಯ ಸದಸ್ಯರು ಬಾಲಕಾರ್ಮಿಕರು ಮತ್ತು ಹದಿಹರೆಯದವರನ್ನು ರಕ್ಷಿಸಿದರು.
Updated on

ಬಳ್ಳಾರಿ: ಬಾಲ ಮತ್ತು ಹದಿಹರೆಯದ ಕಾರ್ಮಿಕರನ್ನು ನಿರ್ಮೂಲನೆ ಮಾಡುವ ನಿಟ್ಟಿನಲ್ಲಿ ಜಿಲ್ಲಾಡಳಿತ ನಡೆಸಿದ ಜಂಟಿ ಕಾರ್ಯಾಚರಣೆಯಲ್ಲಿ ಬಳ್ಳಾರಿ ಜಿಲ್ಲೆಯ ವಿವಿಧ ಭಾಗಗಳಿಂದ 12ಕ್ಕೂ ಹೆಚ್ಚು ಬಾಲ ಕಾರ್ಮಿಕರನ್ನು ರಕ್ಷಣೆ ಮಾಡಲಾಗಿದೆ.

ಅಪ್ರಾಪ್ತರನ್ನು ಕೆಲಸಕ್ಕೆ ಬಳಸುತ್ತಿದ್ದ ಅನುಮಾನದ ಮೇರೆಗೆ ಹಲವು ವಾಣಿಜ್ಯ ಸಂಸ್ಥೆಗಳು ಹಾಗೂ ಕೈಗಾರಿಕಾ ಘಟಕಗಳ ಮೇಲೆ ಅಧಿಕಾರಿಗಳು ದಿಢೀರ್ ದಾಳಿ ನಡೆಸಿದರು.

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ (DLSA), ಜಿಲ್ಲಾ ಬಾಲ ಕಾರ್ಮಿಕ ಯೋಜನೆ, ಕಂದಾಯ ಇಲಾಖೆ, ಕಾರ್ಮಿಕ ಇಲಾಖೆ, ಶಿಕ್ಷಣ ಇಲಾಖೆ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ (DCPU) ಹಾಗೂ ಪೊಲೀಸ್ ಇಲಾಖೆಯ ಅಧಿಕಾರಿಗಳು ಜಂಟಿಯಾಗಿ ಈ ಕಾರ್ಯಾಚರಣೆ ನಡೆಸಿದರು.

ಬಳ್ಳಾರಿ ನಗರ ಸೇರಿದಂತೆ ಜಿಲ್ಲೆಯ ವಿವಿಧ ಭಾಗಗಳಲ್ಲಿರುವ 20ಕ್ಕೂ ಹೆಚ್ಚು ವಾಣಿಜ್ಯ ಸಂಸ್ಥೆಗಳು ಮತ್ತು ಕೈಗಾರಿಕಾ ಘಟಕಗಳನ್ನು ಪರಿಶೀಲಿಸಲಾಯಿತು.

ಪರಿಶೀಲನೆ ವೇಳೆ ಬಾಲ ಮತ್ತು ಹದಿಹರೆಯದ ಕಾರ್ಮಿಕ (ನಿಷೇಧ ಮತ್ತು ನಿಯಂತ್ರಣ) ಕಾಯ್ದೆ ಉಲ್ಲಂಘಿಸಿ ವಿವಿಧ ಕೆಲಸಗಳಲ್ಲಿ ತೊಡಗಿಸಲಾಗಿದ್ದ 12ಕ್ಕೂ ಹೆಚ್ಚು ಬಾಲ ಕಾರ್ಮಿಕರನ್ನು ಅಧಿಕಾರಿಗಳು ಪತ್ತೆಹಚ್ಚಿ ರಕ್ಷಿಸಿದರು.

ರಕ್ಷಿಸಲಾದ ಮಕ್ಕಳನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಲಾಗಿದ್ದು, ಅವರಿಗೆ ಕೌನ್ಸೆಲಿಂಗ್ ಹಾಗೂ ಪುನರ್ವಸತಿ ಪ್ರಕ್ರಿಯೆ ಆರಂಭಿಸಲಾಗಿದೆ. ಬಳಿಕ ಸಂಬಂಧಿತ ಪ್ರಾಧಿಕಾರದ ಮುಂದೆ ಹಾಜರುಪಡಿಸಿ, ಕುಟುಂಬದವರೊಂದಿಗೆ ಮರುಸೇರ್ಪಡೆಗೊಳಿಸುವ ಹಾಗೂ ಶಿಕ್ಷಣ ಮುಂದುವರಿಸುವ ಕ್ರಮ ಕೈಗೊಳ್ಳಲಾಗುತ್ತಿದೆ.

Members of the joint task force rescue child labourers and adolescents during a raid in Ballari district on Sunday.
ತರಗತಿಯಲ್ಲಿ 10 ಅಡಿ ಉದ್ದದ ಕಾಳಿಂಗ ಸರ್ಪ: ಬುಸ್..ಬುಸ್.. ಶಬ್ಧ ಕೇಳಿ ಬೆಚ್ಚಿ ಬಿದ್ದ ಶಿಕ್ಷಕರು; ಮಕ್ಕಳ ಹೊರಗೆ ಕಳುಹಿಸಿ ರಕ್ಷಣೆ..!
Members of the joint task force rescue child labourers and adolescents during a raid in Ballari district on Sunday.
ಮೈಸೂರಿನಲ್ಲಿ ಜೀತಪದ್ಧತಿ ಇನ್ನೂ ಜೀವಂತ: 75 ಸಾವಿರ ರೂ ಸಾಲಕ್ಕಾಗಿ 8 ವರ್ಷಗಳಿಂದ ಜೀತ ಕೆಲಸ; ಬಾಲ ಕಾರ್ಮಿಕರೂ ಸೇರಿ 18 ಮಂದಿ ರಕ್ಷಣೆ..!

ಶಿಕ್ಷಣ ಇಲಾಖೆ ಅಧಿಕಾರಿಗಳು ಮಕ್ಕಳ ಶೈಕ್ಷಣಿಕ ಸ್ಥಿತಿಯನ್ನು ಪರಿಶೀಲಿಸಿ, ಸಮೀಪದ ಶಾಲೆಗಳಲ್ಲಿ ದಾಖಲಾತಿ ಮಾಡಿಸಲು ಕ್ರಮವಹಿಸಲಿದ್ದಾರೆ ಎಂದು ಜಿಲ್ಲಾಡಳಿತ ತಿಳಿಸಿದೆ.

ಬಾಲ ಕಾರ್ಮಿಕರನ್ನು ಕೆಲಸಕ್ಕೆ ನೇಮಿಸಿಕೊಂಡಿದ್ದ ಮಾಲೀಕರ ವಿರುದ್ಧ ಕಾರ್ಮಿಕ ಇಲಾಖೆ ಪ್ರಕರಣ ದಾಖಲಿಸಿ ಕಾನೂನು ಕ್ರಮ ಆರಂಭಿಸಿದೆ. ಅಪ್ರಾಪ್ತರನ್ನು ನಿಷೇಧಿತ ಉದ್ಯೋಗಗಳಲ್ಲಿ ತೊಡಗಿಸಿಕೊಂಡಿರುವುದು ದೃಢಪಟ್ಟರೆ ಸಂಬಂಧಪಟ್ಟವರಿಗೆ ದಂಡ ಹಾಗೂ ಕಠಿಣ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಅಧಿಕಾರಿಗಳು ಎಚ್ಚರಿಕೆ ನೀಡಿದ್ದಾರೆ.

ಜಿಲ್ಲೆಯಲ್ಲಿ ಬಾಲ ಕಾರ್ಮಿಕ ಪದ್ಧತಿಯನ್ನು ಸಂಪೂರ್ಣ ನಿರ್ಮೂಲನೆ ಮಾಡುವ ಉದ್ದೇಶದಿಂದ ಇಂತಹ ಜಂಟಿ ಕಾರ್ಯಾಚರಣೆಗಳನ್ನು ಮುಂದುವರಿಸಲಾಗುವುದು ಎಂದು ಜಿಲ್ಲಾಡಳಿತ ತಿಳಿಸಿದೆ.

ಸಾರ್ವಜನಿಕರು ಎಲ್ಲಿಯಾದರೂ ಬಾಲ ಕಾರ್ಮಿಕರನ್ನು ಕಂಡುಬಂದರೆ ಕೂಡಲೇ ಚೈಲ್ಡ್‌ಲೈನ್ ಅಥವಾ ಕಾರ್ಮಿಕ ಇಲಾಖೆಗೆ ಮಾಹಿತಿ ನೀಡಿ ಸಹಕರಿಸುವಂತೆ ಮನವಿ ಮಾಡಲಾಗಿದೆ.

ಅಲ್ಲದೆ, ಪ್ರತಿಯೊಬ್ಬ ಮಗುವೂ ಶಾಲೆಯಲ್ಲಿರಬೇಕೇ ಹೊರತು ದುಡಿಮೆಯಲ್ಲಿ ಅಲ್ಲ ಎಂಬ ಅರಿವು ಮೂಡಿಸುವಲ್ಲಿ ಪೋಷಕರು ಹಾಗೂ ಉದ್ಯೋಗದಾತರು ಸರ್ಕಾರದೊಂದಿಗೆ ಕೈಜೋಡಿಸಬೇಕು ಎಂದು ಅಧಿಕಾರಿಗಳು ಮನವಿ ಮಾಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

X
Kannada Prabha
www.kannadaprabha.com