ಗೃಹ ಜ್ಯೋತಿ ಜುಲೈ 1 ರಿಂದ ಫಲಾನುಭವಿಗಳ ಪರಿಶೀಲನೆ; ಅಗತ್ಯವಿರುವ ದಾಖಲೆಗಳ ಬಗ್ಗೆ ಇಲ್ಲಿದೆ ಮಾಹಿತಿ...

ಈ ಪ್ರಕ್ರಿಯೆಗೆ ಮೀಟರ್ ರೀಡರ್ ಮೂಲಕ ಸ್ಥಳದಲ್ಲೇ ಪರಿಶೀಲನೆ ಮಾಡುವುದು ಏಕೈಕ ಮಾರ್ಗವಾಗಿದ್ದು, ಗ್ರಾಹಕರು ಮತ್ತು ಫಲಾನುಭವಿಗಳು ಮೀಟರ್ ರೀಡರ್ ಗಳಿಗೆ ಸಂಪೂರ್ಣ ಸಹಕಾರ ನೀಡಬೇಕೆಂದು ಇಂಧನ ಇಲಾಖೆ ಸಾರ್ವಜನಿಕರಿಗೆ ಮನವಿ ಮಾಡಿದೆ.
file photo
ಸಂಗ್ರಹ ಚಿತ್ರonline desk
Updated on

ಬೆಂಗಳೂರು: ರಾಜ್ಯ ಸರ್ಕಾರದ ಮಹಾತ್ವಕಾಂಕ್ಷಿ ಯೋಜನೆಗಳಲ್ಲೊಂದಾದ ಗೃಹ ಜ್ಯೋತಿ (GJY) ಯೋಜನೆಯ ಫಲಾನುಭವಿಗಳ ಮನೆ-ಮನೆ ಪರಿಶೀಲನೆ ಕಾರ್ಯವನ್ನು ಎಲ್ಲಾ ಎಸ್ಕಾಂಗಳ ಸಿಬ್ಬಂದಿ ಜುಲೈ 1 ರಿಂದ ಕೈಗೊಳ್ಳಲಿದ್ದಾರೆ.

2023ರ ಜುಲೈ ತಿಂಗಳಲ್ಲಿ ಜಾರಿಗೆ ಬಂದಿರುವ ಗೃಹ ಜ್ಯೋತಿ ಯೋಜನೆಯ ಪುನರ್ ಪರಿಶೀಲನಾ ಕಾರ್ಯ ನಡೆಯಲಿದ್ದು, ಎಸ್ಕಾಂಗಳ ಮೀಟರ್ ರೀಡರ್ ಗಳು ಹಾಗೂ ಎಸ್ಕಾಂ ಸಿಬ್ಬಂದಿಗಳು ಗ್ರಾಹಕರ ಮನೆಗಳಿಗೆ ಭೇಟಿ ನೀಡಿ, ಫಲಾನುಭವಿಗಳ ದಾಖಲೆ ಪರಿಶೀಲನೆ ನಡೆಸಿ ಅವರ ಮಾಹಿತಿ ಸಂಗ್ರಹಿಸಿ, ಮೊಬೈಲ್ ಆಪ್ ಹಾಗೂ ಘೋಷಣಾ ಪತ್ರ ಮೂಲಕ ಅರ್ಜಿ ಭರ್ತಿ ಪ್ರಕ್ರಿಯೆನ್ನು ಪೂರ್ಣಗೊಳಿಸಲಿದ್ದಾರೆ.

file photo
ಗೃಹಲಕ್ಷ್ಮಿ ದುರುಪಯೋಗಕ್ಕೆ ಬ್ರೇಕ್: ಅರ್ಜಿ ನಮೂನೆಯಲ್ಲಿ ಸರ್ಕಾರ ಮಹತ್ವದ ಬದಲಾವಣೆ; Voter ID, Aadhaar-Link ಮಾಹಿತಿ ಕಡ್ಡಾಯ ಸಾಧ್ಯತೆ..!

ಎಸ್ಕಾಂ ಸಿಬ್ಬಂದಿ ಮನೆ-ಮನೆ ಭೇಟಿ ಸಂದರ್ಭದಲ್ಲಿ ಈ ಕೆಳಗಿನ ದಾಖಲೆಗಳನ್ನು ಸಿಬ್ಬಂದಿಗೆ ತೋರಿಸಲು ಬೆಸ್ಕಾಂ ವಿನಂತಿಸಿದೆ. ಆಧಾರ್ ಕಾರ್ಡ್, ಫಲಾನುಭವಿಯ ಪಾಸ್ ಪೋರ್ಟ್ ಅಳತೆಯ ಭಾವಚಿತ್ರ, ಮತದಾರರ ಗುರುತಿನ ಚೀಟಿ (ವೋಟರ್ ಐಡಿ), ಪ್ಯಾನ್ ಕಾರ್ಡ್, ಬಾಡಿಗೆ ಒಪ್ಪಂದದ ಪತ್ರಗಳು (ಅನ್ವಯಿಸುವಲ್ಲಿ ಮಾತ್ರ) , ರೇಷನ್ ಕಾರ್ಡ್ ಹಾಗೂ ಜಾತಿ ಪ್ರಮಾಣ ಪತ್ರ ವನ್ನು ತೋರಿಸಲು ಕೋರಲಾಗಿದೆ.

ಈ ಪ್ರಕ್ರಿಯೆಗೆ ಮೀಟರ್ ರೀಡರ್ ಮೂಲಕ ಸ್ಥಳದಲ್ಲೇ ಪರಿಶೀಲನೆ ಮಾಡುವುದು ಏಕೈಕ ಮಾರ್ಗವಾಗಿದ್ದು, ಗ್ರಾಹಕರು ಮತ್ತು ಫಲಾನುಭವಿಗಳು ಮೀಟರ್ ರೀಡರ್ ಗಳಿಗೆ ಸಂಪೂರ್ಣ ಸಹಕಾರ ನೀಡಿ, ಪರಿಶೀಲನೆ ಪ್ರಕ್ರಿಯೆಯನ್ನು ಪೂರ್ಣಗೊಳಿಸಲು ಇಂಧನ ಇಲಾಖೆ ಮನವಿ ಮಾಡಿದೆ.

ರಾಜ್ಯದ ಐದು ಎಸ್ಕಾಂಗಳಾದ ಬೆಸ್ಕಾಂ, ಹೆಸ್ಕಾಂ, ಮೆಸ್ಕಾಂ, ಜೆಸ್ಕಾಂ ಹಾಗೂ ಸೆಸ್ಕ್ ಗಳ ವ್ಯಾಪ್ತಿಯಲ್ಲಿ ಪರಿಶೀಲನಾ ಕಾರ್ಯ ನಡೆಯಲಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com