

ಹಾಸನ: ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ-2026 (SIR) ಪ್ರಕ್ರಿಯೆಯು ಆರಂಭವಾಗಿದ್ದು, ಹಾಸನದಲ್ಲಿ ಬೂಕರ್ ಪ್ರಶಸ್ತಿ ವಿಜೇತೆ ಬಾನು ಮುಷ್ತಾಕ್ ಅವರ ಮನೆಯಿಂದಲೇ ಇದಕ್ಕೆ ಚಾಲನೆ ಸಿಕ್ಕಿದೆ. ಇನ್ನು ಅಧಿಕಾರಿಗಳಿಗೆ ಸೂಕ್ತ ದಾಖಲೆಗಳನ್ನು ನೀಡಿದ ಬಾನು ಮುಷ್ತಾಕ್, ಆರಂಭದಲ್ಲಿ SIR ಬಗ್ಗೆ ನನಗೂ ಆತಂಕವಿತ್ತು ಎಂದು ಹೇಳಿದ್ದಾರೆ. ರಾಜಕೀಯ ನಾಯಕರ ಮಾತಿನಿಂದಾಗಿ ಸಾರ್ವಜನಿಕರಲ್ಲಿ ಸೃಷ್ಟಿಯಾಗಿದೆ. ಆದರೆ ಪ್ರಕ್ರಿಯೆಗೆ ಒಳಗಾದ ನಂತರ ತಮ್ಮ ಭಯ ನಿವಾರಣೆಯಾಗಿದೆ ಎಂದು ಬಾನು ಮುಷ್ತಾಕ್ ಹೇಳಿದರು. ನಾನು ಆಧಾರ್ ಕಾರ್ಡ್ ಮತ್ತು ಹಳೆಯ ಮತದಾರರ ಗುರುತಿನ ಚೀಟಿ ಮಾತ್ರ ನೀಡಿದೆ. ಈ ಪ್ರಕ್ರಿಯೆ ಬಹಳ ಸುಲಭ ಮತ್ತು ಸರಳವಾಗಿತ್ತು ಎಂದರು.