ಬೆಂಗಳೂರಿನ ಗಾಯತ್ರಿ ನಗರದ ಮನೆಯಲ್ಲಿ ಬೆಂಕಿ ದುರಂತ: ಮಹಿಳೆ ಸಾವು, ಮೂವರ ರಕ್ಷಣೆ

ಅಗ್ನಿಶಾಮಕ ದಳದ ಸಿಬ್ಬಂದಿ ತಕ್ಷಣ ಸ್ಥಳಕ್ಕೆ ಧಾವಿಸಿ ರಮೇಶ್ ಬಾಬು, ಅವರ ತಾಯಿ ಸಣ್ಣಮ್ಮ ಹಾಗೂ ಮಗನನ್ನು ರಕ್ಷಿಸಿದ್ದಾರೆ. ಗಾಯಗೊಂಡವರನ್ನು ಮಣಿಪಾಲ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
Fire at house
ಮನೆಯೊಳಗೆ ಹತ್ತಿಕೊಂಡ ಬೆಂಕಿ
Updated on

ಬೆಂಗಳೂರು: ನಗರದ ಗಾಯತ್ರಿ ನಗರದಲ್ಲಿರುವ ಕಂಟ್ರ್ಯಾಕ್ಟರ್ ರಮೇಶ್ ಬಾಬು ಅವರ ನಾಲ್ಕು ಅಂತಸ್ತಿನ ಮನೆಯಲ್ಲಿ ಮೂರನೇ ಮಹಡಿಯ ಅಡುಗೆ ಮನೆಯಲ್ಲಿ ಬೆಂಕಿ ಕಾಣಿಸಿಕೊಂಡು ಹೊತ್ತಿ ಉರಿದ ಪರಿಣಾಮ ರಮೇಶ್ ಬಾಬು ಅವರ ಪತ್ನಿ 53 ವರ್ಷದ ಸವಿತಾ ಸಜೀವ ದಹನಗೊಂಡಿದ್ದಾರೆ.

ಅಗ್ನಿಶಾಮಕ ದಳದ ಸಿಬ್ಬಂದಿ ತಕ್ಷಣ ಸ್ಥಳಕ್ಕೆ ಧಾವಿಸಿ ರಮೇಶ್ ಬಾಬು, ಅವರ ತಾಯಿ ಸಣ್ಣಮ್ಮ ಹಾಗೂ ಮಗನನ್ನು ರಕ್ಷಿಸಿದ್ದಾರೆ. ಗಾಯಗೊಂಡವರನ್ನು ಮಣಿಪಾಲ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

Fire at house
ಮಾಕಳಿ ಪರಫ್ಯೂಮ್ ಗೋದಾಮಿನಲ್ಲಿ ಭಾರೀ ಅಗ್ನಿ ಅವಘಡ: ಐವರಿಗೆ ಗಾಯ; ಕೋಟ್ಯಂತರ ರೂ ನಷ್ಟ

ಘಟನಾ ಸ್ಥಳಕ್ಕೆ ಮಲ್ಲೇಶ್ವರಂ ಎಸಿಪಿ ವೇಣುಗೋಪಾಲ್ ಹಾಗೂ ಸುಬ್ರಹ್ಮಣ್ಯನಗರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬೆಂಕಿ ಅವಘಡಕ್ಕೆ ಕಾರಣವೇನು ಎಂಬುದನ್ನು ತಿಳಿಯಲು ತನಿಖೆ ಮುಂದುವರಿದಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com