ಪಡಿತರ ಅಕ್ಕಿ ಅಕ್ರಮ ಸಾಗಾಟ: ಬಳ್ಳಾರಿಯಲ್ಲಿ ಪೊಲೀಸರ ಭರ್ಜರಿ ಕಾರ್ಯಾಚರಣೆ, 2 ತಿಂಗಳಲ್ಲಿ 50ಕ್ಕೂ ಹೆಚ್ಚು ಮಂದಿ ಬಂಧನ

ಮುಕ್ತ ಮಾರುಕಟ್ಟೆಯಲ್ಲಿ ಹೆಚ್ಚಿನ ಬೇಡಿಕೆ ಇರುವುದರಿಂದ, ಆರೋಪಿಗಳು ಈ ಅಕ್ಕಿಯನ್ನು ನೆರೆಯ ಆಂಧ್ರ ಪ್ರದೇಶ ಮತ್ತು ತೆಲಂಗಾಣ ರಾಜ್ಯಗಳಿಗೆ ಸಾಗಿಸುತ್ತಿದ್ದರು.
File photo
ಅಕ್ಕಿ (ಸಂಗ್ರಹ ಚಿತ್ರ)
Updated on

ಬಳ್ಳಾರಿ: ಸಾರ್ವಜನಿಕ ವಿತರಣೆ ವ್ಯವಸ್ಥೆ (PDS) ಅಕ್ಕಿಯನ್ನು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಪ್ರಕರಣಗಳ ವಿರುದ್ಧ ಕಠಿಣ ಕ್ರಮ ಕೈಗೊಂಡಿರುವ ಪೊಲೀಸರು, ಕಳೆದ ಎರಡು ತಿಂಗಳಲ್ಲಿ 50ಕ್ಕೂ ಹೆಚ್ಚು ಮಂದಿಯನ್ನು ಬಂಧನಕ್ಕೊಳಪಡಿಸಿದ್ದಾರೆ,

ಸರ್ಕಾರದ ಕಲ್ಯಾಣ ಯೋಜನೆಗಳ ಅಡಿಯಲ್ಲಿ ನೀಡಲಾಗುವ ಧಾನ್ಯಗಳನ್ನು ಅಕ್ರಮವಾಗಿ ಬೇರೆಡೆಗೆ ಸಾಗಿಸಲಾಗುತ್ತಿದೆ ಎಂಬ ಮಾಹಿತಿಯ ಮೇರೆಗೆ ಬಳ್ಳಾರಿ ಪೊಲೀಸರು ಈ ಕಾರ್ಯಾಚರಣೆ ನಡೆಸಿದ್ದು, ವಿವಿಧ ದಾಳಿಗಳ ವೇಳೆ ಸುಮಾರು 5 ಟನ್ ಅಕ್ಕಿಯನ್ನು ವಶಪಡಿಸಿಕೊಂಡಿದ್ದಾರೆಂದು ಮೂಲಗಳಿಂದ ತಿಳಿದುಬಂದಿದೆ.

ಮುಕ್ತ ಮಾರುಕಟ್ಟೆಯಲ್ಲಿ ಹೆಚ್ಚಿನ ಬೇಡಿಕೆ ಇರುವುದರಿಂದ, ಆರೋಪಿಗಳು ಈ ಅಕ್ಕಿಯನ್ನು ನೆರೆಯ ಆಂಧ್ರ ಪ್ರದೇಶ ಮತ್ತು ತೆಲಂಗಾಣ ರಾಜ್ಯಗಳಿಗೆ ಸಾಗಿಸುತ್ತಿದ್ದರು ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ.

ಪಡಿತರಅಕ್ಕಿ ಅಕ್ರಮ ಸಾಗಣೆ ಗಂಭೀರ ಅಪರಾಧವಾಗಿದೆ. ಇಂತಹ ಅಕ್ರಮಗಳು ಆರ್ಥಿಕವಾಗಿ ದುರ್ಬಲ ವರ್ಗಗಳ ಮೇಲೆ ನೇರ ಪರಿಣಾಮ ಬೀರುತ್ತದೆ. ಈ ಪ್ರಕರಣದಲ್ಲಿ ಭಾಗಿಯಾಗಿರುವವರ ವಿರುದ್ಧ ಕಠಿಣ ಕ್ರಮ ಮುಂದುವರಿಯಲಿದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಮಂದಿ ಬಂಧನ ಸಾಧ್ಯತೆ ಇದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

File photo
ಅಕ್ಕಿ ದರ ವ್ಯತ್ಯಾಸದಿಂದ 120 ಕೋಟಿ ರೂ ನಷ್ಟ: ಪಡಿತರ ಅಕ್ಕಿಗೂ, ಶಾಲೆಗೆ ನೀಡುವ ಅಕ್ಕಿಗೂ 5 ರೂ ವ್ಯತ್ಯಾಸ ಏಕೆ?

ಈ ಅಕ್ರಮದಲ್ಲಿ ಸಂಘಟಿತ ಜಾಲದ ಕೈವಾಡ ಇರುವ ಶಂಕೆ ವ್ಯಕ್ತವಾಗಿದ್ದು, ಆರೋಪಿಗಳ ಹಣಕಾಸು ವ್ಯವಹಾರಗಳು ಮತ್ತು ಸರಬರಾಜು ಸರಪಳಿಯ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಸಾರ್ವಜನಿಕರು ಇಂತಹ ಘಟನೆಗಳ ಬಗ್ಗೆ ಎಚ್ಚರಿಕೆಯಿಂದಿದ್ದು, ಯಾವುದೇ ಮಾಹಿತಿ ಇದ್ದರೆ 112 ಸಹಾಯವಾಣಿ ಸಂಖ್ಯೆಗೆ ಕರೆ ಮಾಡಿ ಪೊಲೀಸರಿಗೆ ತಿಳಿಸಲು ಅಧಿಕಾರಿಗಳು ಮನವಿ ಮಾಡಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com