ಒಳ ಮೀಸಲಾತಿ ಕಗ್ಗಂಟು: ಸೌಹಾರ್ದಯುತವಾಗಿ ಸಮಸ್ಯೆ ಬಗೆಹರಿಸಿಕೊಳ್ಳಿ ಎಂದ Mallikarjun Kharge

ದಶಕಗಳಿಂದ ಒಳ ಮೀಸಲಾತಿಗಾಗಿ ಹೋರಾಟ ನಡೆಸುತ್ತಿರುವ ಎಸ್‌ಸಿ (ಎಡ)/ಮಾದಿಗ ಸಮುದಾಯವು, ಒಳ ಮೀಸಲಾತಿ ನೀಡದೇ 56,432 ಹುದ್ದೆಗಳ ನೇಮಕಾತಿ ಮಾಡುವ ರಾಜ್ಯ ಸರ್ಕಾರದ ನಿರ್ಧಾರವನ್ನು ತೀವ್ರವಾಗಿ ವಿರೋಧಿಸಿದೆ.
Delegation met AICC president Mallikarjun Kharge
ಮಲ್ಲಿಕಾರ್ಜುನ ಖರ್ಗೆ ಅವರನ್ನು ನನ್ನ ಹಾಗೂ ಅಬಕಾರಿ ಸಚಿವರಾದ ಆರ್. ಬಿ. ತಿಮ್ಮಪುರ ರವರ ನೇತೃತ್ವದಲ್ಲಿ ಸಮುದಾಯದ ಸಚಿವರು, ನಿಯೋಗದ ಶಾಸಕರು, ಮಾಜಿ ಸಚಿವರು ಹಾಗೂ ಮಾಜಿ ಸಂಸದರು ಭೇಟಿಯಾಗಿ, ನೇಮಕಾತಿಯಲ್ಲಿ ಒಳ ಮೀಸಲಾತಿ ಅನುಷ್ಠಾನ ಕುರಿತು ಸಮಗ್ರ ಚರ್ಚೆ ನಡೆಸಿದರು.
Updated on

ಬೆಂಗಳೂರು: ಒಳ ಮೀಸಲಾತಿ ಅನುಷ್ಠಾನ ವಿಷಯದಲ್ಲಿ ಆಡಳಿತಾರೂಢ ಕಾಂಗ್ರೆಸ್ ಪಕ್ಷದೊಳಗೆ ಎಸ್‌ಸಿ (ಬಲ) ಮತ್ತು ಎಸ್‌ಸಿ (ಎಡ) ಗುಂಪುಗಳ ನಡುವಿನ ಭಿನ್ನಾಭಿಪ್ರಾಯ ತೀವ್ರಗೊಳ್ಳುತ್ತಿರುವ ಹಿನ್ನೆಲೆಯಲ್ಲಿ, ಎಸ್‌ಸಿ (ಎಡ) ಹಿರಿಯ ನಾಯಕರ ಪ್ರತಿನಿಧಿ ಮಂಡಳಿ ನಿನ್ನೆ ಬುಧವಾರ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿಯಾಗಿ ಸಮಸ್ಯೆ ಪರಿಹರಿಸುವಂತೆ ಮನವಿ ಮಾಡಿತು.

ಈ ಪ್ರತಿನಿಧಿ ಮಂಡಳಿಯಲ್ಲಿ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಕೆ ಹೆಚ್ ಮುನಿಯಪ್ಪ ಹಾಗೂ ಅಬಕಾರಿ ಸಚಿವ ಆರ್ ಬಿ ತಿಮ್ಮಾಪುರ್ ಒಳಗೊಂಡಿದ್ದಾರೆ. ದಶಕಗಳಿಂದ ಒಳ ಮೀಸಲಾತಿಗಾಗಿ ಹೋರಾಟ ನಡೆಸುತ್ತಿರುವ ಎಸ್‌ಸಿ (ಎಡ)/ಮಾದಿಗ ಸಮುದಾಯವು, ಒಳ ಮೀಸಲಾತಿ ನೀಡದೇ 56,432 ಹುದ್ದೆಗಳ ನೇಮಕಾತಿ ಮಾಡುವ ರಾಜ್ಯ ಸರ್ಕಾರದ ನಿರ್ಧಾರವನ್ನು ತೀವ್ರವಾಗಿ ವಿರೋಧಿಸಿದೆ.

Delegation met AICC president Mallikarjun Kharge
ಖಾಲಿ ಹುದ್ದೆಗಳ ಭರ್ತಿಗೆ SC ಒಳ ಮೀಸಲಾತಿ ಪರಿಗಣಿಸಿ: ಸರ್ಕಾರಕ್ಕೆ ಬಿಜೆಪಿ ಆಗ್ರಹ

ಇನ್ನೊಂದೆಡೆ, ಮಲ್ಲಿಕಾರ್ಜುನ ಖರ್ಗೆ ಅವರು ಎಸ್‌ಸಿ (ಬಲ) ಸಮುದಾಯಕ್ಕೆ ಸೇರಿದ್ದು, ಒಳ ಮೀಸಲಾತಿಯಿಲ್ಲದೆ ನೇಮಕಾತಿ ಮಾಡುವುದನ್ನು ಬೆಂಬಲಿಸುವವರಾಗಿ ಪರಿಗಣಿಸಲಾಗಿದೆ. ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿಯಾದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಮುನಿಯಪ್ಪ ಅವರು, ಮಲ್ಲಿಕಾರ್ಜುನ ಖರ್ಗೆಯವರು ಎಲ್ಲರೂ ಸೇರಿ ಸೌಹಾರ್ದಯುತವಾಗಿ ಸಮಸ್ಯೆ ಪರಿಹರಿಸಿಕೊಳ್ಳಬೇಕು ಎಂದು ಹೇಳಿದ್ದಾರೆ. ಯಾರಿಗೂ ಅನ್ಯಾಯವಾಗಬಾರದು, ಈ ವಿಷಯದಲ್ಲಿ ಅವರಿಗೆ ಯಾವುದೇ ವಿರೋಧವಿಲ್ಲ; ಅವರು ಸ್ವತಃ ಕೂಡ ಈ ಬಗ್ಗೆ ಮಾತನಾಡುವುದಾಗಿ ಹೇಳಿದ್ದಾರೆ. ಎಲ್ಲರೂ ಒಂದಾಗಿ ಸಮಾನವಾಗಿ ಹಂಚಿಕೊಳ್ಳಬೇಕು. ನಾವು ಅದಕ್ಕೆ ಒಪ್ಪಿಕೊಂಡಿದ್ದು, ಮುಖ್ಯಮಂತ್ರಿಗೆ ತಿಳಿಸುತ್ತೇವೆ ಎಂದು ಹೇಳಿದರು.

ಈ ವಿಷಯವನ್ನು ಗೃಹ ಸಚಿವ ಡಾ ಪರಮೇಶ್ವರ್ ಹಾಗೂ ಸಮಾಜ ಕಲ್ಯಾಣ ಸಚಿವ ಹೆಚ್ ಸಿ ಮಹದೇವಪ್ಪ ಅವರ ಗಮನಕ್ಕೂ ತರಲಾಗುವುದು ಎಂದು ತಿಳಿಸಿದರು. ಈ ಇಬ್ಬರೂ ಸಿದ್ದರಾಮಯ್ಯ ಅವರ ಸಚಿವ ಸಂಪುಟದ ಎಸ್‌ಸಿ (ಬಲ) ಸಮುದಾಯದ ಹಿರಿಯ ಸಚಿವರಾಗಿದ್ದಾರೆ.

Delegation met AICC president Mallikarjun Kharge
ಖಾಲಿ ಹುದ್ದೆಗಳ ನೇಮಕಾತಿಗೂ ಮುನ್ನ ಒಳ ಮೀಸಲಾತಿ ಜಾರಿಗಾಗಿ ಎಲ್ಲರ ವಿಶ್ವಾಸ ತೆಗೆದುಕೊಳ್ಳಿ: ಬಸವರಾಜ ಬೊಮ್ಮಾಯಿ

ಆದರೆ ಪರಿಶಿಷ್ಠ ಜಾತಿಗಳಿಗೆ ಇರುವ 17% ಮೀಸಲಾತಿಯನ್ನು 15%ಕ್ಕೆ ಇಳಿಸಿದರೆ ಸಮಾನ ಹಂಚಿಕೆ ಹೇಗೆ ಮಾಡುವುದು ಎಂಬುದರ ಬಗ್ಗೆ ಮುನಿಯಪ್ಪ ಸ್ಪಷ್ಟ ಉತ್ತರ ನೀಡಲಿಲ್ಲ. ಮೂಲಗಳ ಪ್ರಕಾರ, ಈಗಿರುವ 6–6–5 ಸೂತ್ರವನ್ನು ಪ್ರಮಾಣಾನುಸಾರ ಕಡಿಮೆ ಮಾಡಿದರೆ ಅದು 5.5–5.5–4 ಆಗುವ ಸಾಧ್ಯತೆ ಇದೆ.

ಇದಕ್ಕೂ ನಡುವೆ Karnataka State Federation of Right Communities ಹೈಕೋರ್ಟ್ ತೀರ್ಪು ಬರುವವರೆಗೆ ಒಳ ಮೀಸಲಾತಿ ಇಲ್ಲದೆ ನೇಮಕಾತಿಯನ್ನು ಮುಂದುವರಿಸಬೇಕು ಎಂದು ರಾಜ್ಯ ಸರ್ಕಾರವನ್ನು ಮನವಿ ಮಾಡಿದೆ. ಈ ವಿಷಯವನ್ನು ಇಂದು ನಡೆಯುವ ಸಚಿವ ಸಂಪುಟ ಸಭೆಯಲ್ಲಿ ವಿವರವಾಗಿ ಚರ್ಚಿಸುವ ನಿರೀಕ್ಷೆ ಇದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com