ಪಂಚ ಪೀಠಗಳಿಂದ ದೇಶಕ್ಕೆ ಶಕ್ತಿ: ಚಿಕ್ಕೋಡಿ ಪ್ರತ್ಯೇಕ ಜಿಲ್ಲೆ ಕೂಗು; ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದೇನು?

ಈ ಭಾಗ ಅಭಿವೃದ್ಧಿಯಾಗಬೇಕು ಹಾಗೂ ಇಲ್ಲಿನ ರೈತರನ್ನು ಕಾಪಾಡುವ ಕೆಲಸ ಮಾಡಲಾಗುವುದು. ನಿಮ್ಮ ಆಶೀರ್ವಾದ ನನ್ನ ಮೇಲೆ, ನಮ್ಮ ಸರ್ಕಾರದ ಮೇಲೆ ಇರಲಿ" ಎಂದು ಮನವಿ ಮಾಡಿದರು.
ಪಂಚ ಪೀಠಗಳಿಂದ ದೇಶಕ್ಕೆ ಶಕ್ತಿ: ಚಿಕ್ಕೋಡಿ ಪ್ರತ್ಯೇಕ ಜಿಲ್ಲೆ ಕೂಗು; ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದೇನು?
Updated on

ಚಿಕ್ಕೋಡಿ: ಚಿಕ್ಕೋಡಿ ಜಿಲ್ಲೆ ಆಗಬೇಕು ಎಂಬ ಆಸೆ ನನಗೂ ಇದೆ. ಆದಷ್ಟು ಬೇಗ ನಾವು ತೀರ್ಮಾನ ಮಾಡುತ್ತೇವೆ. ಪ್ರಕಾಶ್ ಹುಕ್ಕೇರಿ ಹಾಗೂ ಗಣೇಶ್ ಹುಕ್ಕೇರಿ ಅವರು ಈ ಭಾಗದ ನೀರಾವರಿ ಯೋಜನೆಗಳಿಗೆ ಸಂಬಂಧಿಸಿದಂತೆ ಇಟ್ಟಿರುವ ಎಲ್ಲಾ ಬೇಡಿಕೆ ಈಡೇರಿಸಲು ನಾನು ಬದ್ಧನಾಗಿದ್ದೇನೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು.

ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲ್ಲೂಕಿನಲ್ಲಿ ಗುರುವಾರ ನಡೆದ ವೀರಶೈವ ಲಿಂಗಾಯತ ಧರ್ಮೋತ್ಥಾನ ಸಮ್ಮೇಳನ ಹಾಗೂ ರಾಜಗೋಪುರ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಶಿವಕುಮಾರ್ ಅವರು ಮಾತನಾಡಿದರು. ಈ ಭಾಗ ಅಭಿವೃದ್ಧಿಯಾಗಬೇಕು ಹಾಗೂ ಇಲ್ಲಿನ ರೈತರನ್ನು ಕಾಪಾಡುವ ಕೆಲಸ ಮಾಡಲಾಗುವುದು. ನಿಮ್ಮ ಆಶೀರ್ವಾದ ನನ್ನ ಮೇಲೆ, ನಮ್ಮ ಸರ್ಕಾರದ ಮೇಲೆ ಇರಲಿ" ಎಂದು ಮನವಿ ಮಾಡಿದರು.

"ರಂಭಾಪುರಿ, ಉಜ್ಜಯಿನಿ, ಕಾಶೀ, ಶ್ರೀಶೈಲ ಸೇರಿದಂತೆ ನಮ್ಮ ಪಂಚ ಪೀಠದ ಶ್ರೀಗಳು ಇಡೀ ದೇಶಕ್ಕೆ ಶಕ್ತಿ ನೀಡುತ್ತಾ ಬಂದಿದ್ದಾರೆ. ಇವುಗಳ ಮಾರ್ಗದರ್ಶನದಲ್ಲಿ ನಾವು ನೆಮ್ಮದಿಯಾಗಿ ಬದುಕುತ್ತಿದ್ದೇವೆ. ನಾವು ಈ ಧರ್ಮ ಪೀಠಗಳನ್ನು ಉಳಿಸಿಕೊಂಡು, ಕಾಪಾಡಿಕೊಂಡು ಹೋಗಬೇಕು. ಈ ಸಮಾಜಕ್ಕೆ ಈ ಪೀಠಗಳ ಮಾರ್ಗದರ್ಶನ ಅಗತ್ಯವಿದ್ದು, ನಾವು ಈ ಮಠಗಳಿಗೆ ಪ್ರೋತ್ಸಾಹ ನೀಡಬೇಕು ಎಂದರು.

"ಶ್ರೀಗಳು ಇಲ್ಲಿಂದ ಬೆಳೆದು, ಈ ಭಾಗದ ಅಭಿವೃದ್ಧಿ ಮಾಡಿ ಶ್ರೀಶೈಲ ಮಠಕ್ಕೆ ಹೋಗಿ ಧರ್ಮ ಉಳಿಸುವ ಪ್ರಯತ್ನ ಮಾಡುತ್ತಿರುವುದು ನಮಗೆ ಶಕ್ತಿ ತುಂಬಿದೆ. ಮನುಷ್ಯನಿಗೆ ಧರ್ಮ, ದೇವರು ಬೇಕು. ಇಲ್ಲದಿದ್ದರೆ ಜೀವನ ಹಾಗೂ ಆತ್ಮಕ್ಕೆ ಶಾಂತಿ ಸಿಗುವುದಿಲ್ಲ. ಬದುಕಿಗೆ ಅರ್ಥವು ಇರುವುದಿಲ್ಲ. ನಿಂಬೆಗಿಂತ ಶ್ರೇಷ್ಠವಾದ ಹುಳಿ, ದುಂಬಿಗಿಂತ ಶ್ರೇಷ್ಠವಾದ ಕಪ್ಪು ಬಣ್ಣ, ಶಿವನಿಗಿಂತ ಶ್ರೇಷ್ಠವಾದ ದೇವರು, ನಂಬಿಕೆಗಿಂತ ದೊಡ್ಡ ಗುಣ ಬೇರೊಂದಿಲ್ಲ. ಧರ್ಮ ಇಂದು ನಮ್ಮನ್ನೆಲ್ಲ ಇಲ್ಲಿ ಸೇರಿಸಿದೆ.

ಪಂಚ ಪೀಠಗಳಿಂದ ದೇಶಕ್ಕೆ ಶಕ್ತಿ: ಚಿಕ್ಕೋಡಿ ಪ್ರತ್ಯೇಕ ಜಿಲ್ಲೆ ಕೂಗು; ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದೇನು?
ಮುಂದಿನ CM ಡಿ.ಕೆ ಶಿವಕುಮಾರ್: ಮಾಗಡಿ ಶಾಸಕ ಬಾಲಕೃಷ್ಣ ಹೇಳಿಕೆ; ಡಿಕೆಶಿ ಪ್ರತಿಕ್ರಿಯೆ ಏನು..?

ಭಕ್ತ ಹಾಗೂ ಭಗವಂತ ನಡುವೆ ವ್ಯವಹಾರ ನಡೆಯುವ ಜಾಗ ದೇವಾಲಯ. ನಾವು ಇಂತಹ ದೇವಾಲಯದಲ್ಲಿ ಕೂತು ಪವಿತ್ರವಾದ ಕಾರ್ಯಕ್ರಮದಲ್ಲಿ ಭಾಗಿಯಾಗಿರುವುದು ನಮ್ಮ ನಿಮ್ಮ ಭಾಗ್ಯ. ಸಚಿವ ಸಂಪುಟ ಸಭೆ ಇದ್ದರೂ ಅದನ್ನು ಸಂಜೆಗೆ ನಿಗದಿ ಮಾಡಿ ಎಂದು ಹೇಳಿ ಈ ಕಾರ್ಯಕ್ರಮಕ್ಕೆ ಬಂದಿರುವೆ" ಎಂದು ಹೇಳಿದರು.

ಪ್ರಭಾಕರ್ ಕೊರೆ ಅವರು ಕೂಡ ರಾಜ್ಯದಲ್ಲಿ ಸಾಮಾಜಿಕವಾಗಿ, ಧಾರ್ಮಿಕವಾಗಿ, ಶೈಕ್ಷಣಿಕವಾಗಿ ಶಕ್ತಿ ನೀಡುತ್ತಿದ್ದಾರೆ. ಶಿಕ್ಷಣ ಕ್ಷೇತ್ರದಲ್ಲಿ ದೊಡ್ಡ ಕ್ರಾಂತಿ ಮಾಡಿದ್ದಾರೆ. ನಾನು ಇಲ್ಲಿಗೆ ಮಂತ್ರಿಯಾಗಿ, ಉಪಮುಖ್ಯಮಂತ್ರಿಯಾಗಿ ಬಂದಿಲ್ಲ. ಶ್ರೀಗಳು ಈ ಕ್ಷೇತ್ರದಲ್ಲಿ ಮಾಡುತ್ತಿರುವ ಕೆಲಸ ತಿಳಿದು ಬಂದಿದ್ದೇನೆ. ಅವರು ಹೇಳಿದಂತೆ ನಾನು ವೀರ ಗಂಗಾಧರೇಶ್ವರ ಅಜ್ಜಯ್ಯ ಅವರ ಪರಮ ಭಕ್ತ. ಅವರ ಮಾರ್ಗದರ್ಶನದಲ್ಲಿ ನಾನು ಹೆಜ್ಜೆ ಹಾಕುತ್ತಿದ್ದೇನೆ. ಮಾನವ ಧರ್ಮಕ್ಕೆ ಜಯವಾಗಲಿ, ಧರ್ಮದಿಂದಲೇ ವಿಶ್ವಕ್ಕೆ ಶಾಂತಿ ಎಂದು ಅವರು ಸಂದೇಶ ನೀಡಿದ್ದಾರೆ. ನಾವು ಅದೇ ತತ್ವದಲ್ಲಿ ಕೆಲಸ ಮಾಡಿಕೊಂಡು ಹೋಗುತ್ತಿದ್ದೇವೆ" ಎಂದರು.

"ಈ ಮಠ ಒಂದು ಜಾತಿ, ಧರ್ಮಕ್ಕೆ ಸೀಮಿತವಲ್ಲ. ನಾವು ಹುಟ್ಟುವಾಗ ಇಂತಹುದೆ ಜಾತಿಯಲ್ಲಿ ಹುಟ್ಟಬೇಕು ಎಂದು ಅರ್ಜಿ ಹಾಕಿ ಹುಟ್ಟುವುದಿಲ್ಲ. ಧರ್ಮ ಯಾವುದಾದರೂ ತತ್ವವೊಂದೇ, ಪೂಜೆ ಯಾವುದಾದರೂ ಭಕ್ತಿಯೊಂದೆ, ಕರ್ಮ ಹಲವಾದರೂ ನಿಷ್ಠೆಯೊಂದೆ, ದೇವನೊಬ್ಬ ನಾಮ ಹಲವು. ನಾವು ಇದರಲ್ಲಿ ನಂಬಿಕೆ ಇಟ್ಟಿದ್ದೇವೆ. ಎಲ್ಲಾ ಧರ್ಮಗಳು ಒಂದೇ ಆಚಾರ ವಿಚಾರ ಸಾರುತ್ತವೆ. ಮಠಗಳು ಅವುಗಳನ್ನು ಕಾಪಾಡಿಕೊಂಡು ಬರುತ್ತಿವೆ" ಎಂದು ತಿಳಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com