ರಾಜ್ಯದಲ್ಲಿ 16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಜಾಲತಾಣ ಬಳಕೆ ನಿಷೇಧ: ಸಿಎಂ ಸಿದ್ದರಾಮಯ್ಯ ಘೋಷಣೆ

ವಿಧಾನಸಭೆಯಲ್ಲಿ ಪ್ರಸಕ್ತ ಸಾಲಿನ ರಾಜ್ಯ ಬಜೆಟ್ ಮಂಡನೆ ಮಾಡುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, 16 ವಯಸ್ಸಿನ ಮಕ್ಕಳಿಗೆ ಸಾಮಾಜಿಕ ಜಾಲತಾಣದ ಬಳಕೆಯನ್ನು ನಿಷೇಧ ಮಾಡಿರುವುದಾಗಿ ಘೋಷಣೆ ಮಾಡಿದ್ದಾರೆ.
File photo
ಸಂಗ್ರಹ ಚಿತ್ರ
Updated on

ಬೆಂಗಳೂರು: ಹೆಚ್ಚುತ್ತಿರುವ ಮೊಬೈಲ್ ಬಳಕೆ ಮಕ್ಕಳ ಮೇಲೆ ಪರಿಣಾಮ ಬೀರುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ 16 ವಯಸ್ಸಿನ ಮಕ್ಕಳಿಗೆ ಸಾಮಾಜಿಕ ಜಾಲತಾಣದ ಬಳಕೆಯನ್ನು ನಿಷೇಧ ಮಾಡಿದೆ.

ವಿಧಾನಸಭೆಯಲ್ಲಿ ಪ್ರಸಕ್ತ ಸಾಲಿನ ರಾಜ್ಯ ಬಜೆಟ್ ಮಂಡನೆ ಮಾಡುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, 16 ವಯಸ್ಸಿನ ಮಕ್ಕಳಿಗೆ ಸಾಮಾಜಿಕ ಜಾಲತಾಣದ ಬಳಕೆಯನ್ನು ನಿಷೇಧ ಮಾಡಿರುವುದಾಗಿ ಘೋಷಣೆ ಮಾಡಿದ್ದಾರೆ.

ಪ್ರಸಕ್ತ ಸಾಲಿನ ಬಜೆಟ್ನಲ್ಲಿ ಹೆಚ್ಚುತ್ತಿರುವ ಮೊಬೈಲ್ ಬಳಕೆಯಿಂದ ಮಕ್ಕಳ ಮೇಲೆ ಬೀರುವ ಅಡ್ಡ ಪರಿಣಾಮದ ಬಗ್ಗೆ ಪ್ರಸ್ತಾಪ ಮಾಡಲಾಗಿದ್ದು,. ಅಡ್ಡ ಪರಿಣಾಮಗಳ ತಡೆಗಟ್ಟುವ ಉದ್ದೇಶದಿಂದ 16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಜಾಲತಾಣಗಳ ಬಳಕೆ ನಿಷೇಧಿಸಲಾಗುವುದು ಎಂದು ಉಲ್ಲೇಖ ಮಾಡಲಾಗಿದೆ.

ಇದು ಮಕ್ಕಳ ಆರೋಗ್ಯ, ವಿದ್ಯಾಭ್ಯಾಸ ಹಾಗೂ ಏಳಿಗೆಯ ದೃಷ್ಟಿಯಿಂದ ಒಳ್ಳೆಯ ತೀರ್ಮಾನವಾಗಿದ್ದು, ಕೇಂದ್ರ ಸರ್ಕಾರದ ಆರ್ಥೀಕ ಸಮೀಕ್ಷಾ ವರದಿಯಲ್ಲೂ ಮಕ್ಕಳಿಗೆ ಮೊಬೈಲ್ ಬಳಕೆ ನಿಷೇಧಿಸುವ ಬಗ್ಗೆ ಪ್ರಸ್ತಾಪ ಮಾಡಲಾಗಿತ್ತು.

File photo
'ಮುಖ್ಯಮಂತ್ರಿ ಕೃಷಿ ವಿಸ್ತಾರ': ಕೃಷಿ ಕ್ಷೇತ್ರಕ್ಕೆ ಬಜೆಟ್ ನಲ್ಲಿ ಸಿಎಂ ಸಿದ್ದರಾಮಯ್ಯ ಘೋಷಣೆಗಳೇನು?

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com