ಕಾರವಾರ: ಕೆಎಸ್‌ಆರ್‌ಟಿಸಿ ಬಸ್-ಕಾರು ಡಿಕ್ಕಿ; ಭೀಕರ ಅಪಘಾತದಲ್ಲಿ ವೆಬ್ ಡೆವಲಪರ್ ಸಾವು

ಮೃತ ವ್ಯಕ್ತಿಯನ್ನು ವೆಬ್ ಡೆವಲಪರ್ ಮತ್ತು ಮ್ಯಾಕ್ಸ್ ಇನ್ಫೋಟೆಕ್‌ ಸಂಸ್ಥಾಪಕ ಮುಖೇಶ್ ಕೃಷ್ಣ ಶೆಟ್ಟಿ ಎಂದು ಗುರುತಿಸಲಾಗಿದೆ.
Web developer killed in KSRTC bus-car collision in Karwar
ಸಾಂದರ್ಭಿಕ ಚಿತ್ರ
Updated on

ಕಾರವಾರ: ಉತ್ತರ ಕನ್ನಡ ಜಿಲ್ಲೆಯಲ್ಲಿ ಕೆಎಸ್‌ಆರ್‌ಟಿಸಿ ಬಸ್‌ ಮತ್ತು ಕಾರಿನ ನಡುವೆ ಡಿಕ್ಕಿ ಸಂಭವಿಸಿದ್ದು, ಭೀಕರ ಅಪಘಾತದಲ್ಲಿ 39 ವರ್ಷದ ವ್ಯಕ್ತಿಯೊಬ್ಬರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ.

ಮೃತ ವ್ಯಕ್ತಿಯನ್ನು ವೆಬ್ ಡೆವಲಪರ್ ಮತ್ತು ಮ್ಯಾಕ್ಸ್ ಇನ್ಫೋಟೆಕ್‌ ಸಂಸ್ಥಾಪಕ ಮುಖೇಶ್ ಕೃಷ್ಣ ಶೆಟ್ಟಿ ಎಂದು ಗುರುತಿಸಲಾಗಿದೆ. ಮಾರ್ಚ್ 5 ರಂದು ಕುಂದಾಪುರದಿಂದ ಹುಬ್ಬಳ್ಳಿಗೆ ಪ್ರಯಾಣಿಸುತ್ತಿದ್ದ ಶೆಟ್ಟಿ ಅವರ ಕಾರು ಯಲ್ಲಾಪುರ ತಾಲ್ಲೂಕಿನ ಮಳಲಗಾವ್ ಗ್ರಾಮದ ಬಳಿ ಅಪಘಾತಕ್ಕೀಡಾಗಿದೆ.

ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಶೆಟ್ಟಿ ಅವರನ್ನು ಯಲ್ಲಾಪುರದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ ಚಿಕಿತ್ಸೆಯ ಸಮಯದಲ್ಲಿ ಅವರು ಸಾವನ್ನಪ್ಪಿದರು ಎಂದು ಪೊಲೀಸರು ತಿಳಿಸಿದ್ದಾರೆ.

Web developer killed in KSRTC bus-car collision in Karwar
ಚಿತ್ತೂರು ಬಳಿ ಭೀಕರ ರಸ್ತೆ ಅಪಘಾತ: ಲಾರಿಗೆ ಹಿಂಬದಿಯಿಂದ ಕಾರು ಡಿಕ್ಕಿ; ತಿರುಪತಿಗೆ ಹೊರಟಿದ್ದ ಬೆಂಗಳೂರಿನ ಐವರು ದುರ್ಮರಣ; Video

ಅಪಘಾತದಲ್ಲಿ ಕಾರಿನ ಮುಂಭಾಗ ಸಂಪೂರ್ಣವಾಗಿ ನಜ್ಜುಗುಜ್ಜಾಗಿದ್ದರೂ, ಕಾರಿನಲ್ಲಿದ್ದ ಏರ್‌ಬ್ಯಾಗ್ ಓಪನ್ ಆಗಿದ್ದರಿಂದ ಶೆಟ್ಟಿ ಅವರ ಕಾಲುಗಳು ಮತ್ತು ಕೈಗಳಿಗೆ ಮಾತ್ರ ಸಣ್ಣಪುಟ್ಟ ಗಾಯಗಳಾಗಿದ್ದವು ಎಂದು ವರದಿಯಾಗಿದೆ.

ಅಪಘಾತದ ಸಮಯದಲ್ಲಿ ಶೆಟ್ಟಿ ಸೀಟ್ ಬೆಲ್ಟ್ ಧರಿಸಿದ್ದರು, ಹೀಗಾಗಿ ಏರ್ ಬ್ಯಾಗ್ ಓಪನ್ ಆಗಿದೆ. ಆದರೆ, ನಂತರ ಏರ್‌ಬ್ಯಾಗ್ ಹರಿದಿರುವುದು ಕಂಡುಬಂದಿದ್ದು, ಡಿಕ್ಕಿಯ ಸಮಯದಲ್ಲಿ ಏರ್ ಬ್ಯಾಗ್ ಸಿಡಿದಿರಬಹುದು ಎಂಬ ಅನುಮಾನ ವ್ಯಕ್ತವಾಗಿದೆ.

ಶೆಟ್ಟಿ ಅವರು ಪತ್ನಿ, ತಾಯಿ ಮತ್ತು ಇಬ್ಬರು ಸಹೋದರರನ್ನು ಅಗಲಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com