ರಸ್ತೆ ಅಗಲೀಕರಣ: ಬೆಂಗಳೂರು ಪೂರ್ವ ಮಹಾನಗರ ಪಾಲಿಕೆಯಿಂದ 14 ಎಕರೆ ಭೂಮಿ ಸ್ವಾಧೀನ!

ಐಟಿಪಿಎಲ್ ಮುಖ್ಯ ರಸ್ತೆ, ವೈಟ್‌ಫೀಲ್ಡ್ ಮುಖ್ಯ ರಸ್ತೆ ಮತ್ತು ದೊಡ್ಡನೆಕ್ಕುಂಡಿಯಲ್ಲಿ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳಲಾಗಿದೆ, ಅಲ್ಲಿ ಹೊರ ವರ್ತುಲ ರಸ್ತೆ ಮತ್ತು ಪೆರಿಫೆರಲ್ ರಿಂಗ್ ರಸ್ತೆಯನ್ನು ಸಂಪರ್ಕಿಸುವ ಪ್ರಸ್ತಾವಿತ ರಸ್ತೆಗಾಗಿ ಭೂಮಿಯನ್ನು ಕಾಯ್ದಿರಿಸಲಾಗಿದೆ.
Representational image
ಸಾಂದರ್ಭಿಕ ಚಿತ್ರ
Updated on

ಬೆಂಗಳೂರು: ಪ್ರಮುಖ ಮತ್ತು ಉಪ-ಅರ್ಟೀರಿಯಲ್ ರಸ್ತೆಗಳ ಅಗಲೀಕರಣಕ್ಕಾಗಿ 510 ಕೋಟಿ ರೂ. ಮೌಲ್ಯದ 14 ಎಕರೆ ಭೂಮಿಯನ್ನು ಬೆಂಗಳೂರು ಪೂರ್ವ ನಗರ ನಿಗಮ (ಬಿಇಸಿಸಿ) ಸ್ವಾಧೀನಪಡಿಸಿಕೊಂಡಿದೆ ಎಂದು ಬಿಇಸಿಸಿ ಆಯುಕ್ತ ಡಿ.ಎಸ್. ರಮೇಶ್ ತಿಳಿಸಿದ್ದಾರೆ.

ಇಲ್ಲಿಯವರೆಗೆ, ಬಿಇಸಿಸಿ ವ್ಯಾಪ್ತಿಯಲ್ಲಿ ನಡೆಯುತ್ತಿರುವ ಕಾರ್ಯಾಚರಣೆಯ ಭಾಗವಾಗಿ 52 ಆಸ್ತಿಗಳನ್ನು ಸ್ವಾಧೀನಪಡಿಸಿಕೊಳ್ಳಲಾಗಿದೆ ಎಂದು ಅವರು ಹೇಳಿದರು. ಐಟಿಪಿಎಲ್ ಮುಖ್ಯ ರಸ್ತೆ, ವೈಟ್‌ಫೀಲ್ಡ್ ಮುಖ್ಯ ರಸ್ತೆ ಮತ್ತು ದೊಡ್ಡನೆಕ್ಕುಂಡಿಯಲ್ಲಿ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳಲಾಗಿದೆ, ಅಲ್ಲಿ ಹೊರ ವರ್ತುಲ ರಸ್ತೆ ಮತ್ತು ಪೆರಿಫೆರಲ್ ರಿಂಗ್ ರಸ್ತೆಯನ್ನು ಸಂಪರ್ಕಿಸುವ ಪ್ರಸ್ತಾವಿತ ರಸ್ತೆಗಾಗಿ ಭೂಮಿಯನ್ನು ಕಾಯ್ದಿರಿಸಲಾಗಿದೆ.

2015 ರ ಪರಿಷ್ಕೃತ ಮಾಸ್ಟರ್ ಪ್ಲಾನ್ (ಆರ್‌ಎಂಪಿ) ಅಡಿಯಲ್ಲಿ ರಸ್ತೆ ಅಗಲೀಕರಣಕ್ಕಾಗಿ ಮತ್ತು ನಗರದ ಮೂಲಸೌಕರ್ಯವನ್ನು ಬಲಪಡಿಸುವುದು. ಭವಿಷ್ಯದ ಸಂಚಾರದ ಅವಶ್ಯಕತೆಗಳನ್ನು ಗಮನದಲ್ಲಿಟ್ಟುಕೊಂಡು ವಿವಿಧ ಪ್ರಮುಖ ರಸ್ತೆಗಳು ಹಾಗೂ ಉಪ ಮುಖ್ಯರಸ್ತೆಗಳ ರಸ್ತೆ ವಿಸ್ತರಣೆಗೆ ಅಗತ್ಯವಿರುವ ಪರಿತ್ಯಜಿಸಲಾದ (ಯಾರು ಬಳಕೆ ಮಾಡದ) ಭೂಮಿಯನ್ನು ಬೆಂಗಳೂರು ಪೂರ್ವ ನಗರ ಪಾಲಿಕೆ ವಶಕ್ಕೆ ಪಡೆಯುವ ಮೂಲಕ ಮಹತ್ವದ ಕ್ರಮವನ್ನು ಕೈಗೊಳ್ಳಲಾಗಿದೆ ಎಂದು ಪೂರ್ವ ನಗರ ಪಾಲಿಕೆ ಆಯುಕ್ತರಾದ ಡಿ.ಎಸ್.‌ರಮೇಶ್‌ ಅವರು ತಿಳಿಸಿದ್ದಾರೆ.

ಸರ್ಕಾರದ ಮಾರ್ಗಸೂಚಿ ಮೌಲ್ಯದ ಪ್ರಕಾರ, ಸುಮಾರು 510 ಕೋಟಿ ರೂ. ಮೌಲ್ಯದ ಸುಮಾರು 14 ಎಕರೆ (56,722.6 ಚದರ ಮೀ) ಭೂಮಿಯನ್ನು ರಸ್ತೆ ಮತ್ತು ಮೂಲಸೌಕರ್ಯ ಅಭಿವೃದ್ಧಿಗಾಗಿ ಪಡೆಯಲಾಗಿದೆ. ಅತಿಕ್ರಮಣವನ್ನು ತಡೆಗಟ್ಟಲು, ಭೂಮಿಯನ್ನು ರಸ್ತೆ ವಿಸ್ತರಣೆಗೆ ಕಾಯ್ದಿರಿಸಲಾಗಿದೆ ಮತ್ತು ನಗರ ನಿಗಮಕ್ಕೆ ಸೇರಿದೆ ಎಂದು ಹೇಳುವ ಫಲಕಗಳನ್ನು ಅಳವಡಿಸಲಾಗುವುದು ಎಂದು ರಮೇಶ್ ಹೇಳಿದರು.

Representational image
ಮೇಲ್ಸೇತುವೆ ಕಾಮಗಾರಿ ವಿಳಂಬ: ಮಾಗಡಿ-ಮೈಸೂರು ಮೇಜರ್ ಆರ್ಟಿರಿಯಲ್ ರಸ್ತೆ ಉದ್ಘಾಟನೆ ಮತ್ತಷ್ಟು ತಡ!

ಪಾಲಿಕೆ ವಶಕ್ಕೆ ಪಡೆದಿರುವ ಈ ಭೂಮಿಯನ್ನು ಬಳಸಿಕೊಂಡು ವಿವಿಧ ಪ್ರಮುಖ ಆರ್ಟೀರಿಯಲ್ ಹಾಗೂ ಸಬ್-ಆರ್ಟೀರಿಯಲ್ ರಸ್ತೆಗಳ ವಿಸ್ತರಣೆ, ಪಾದಚಾರಿ ಮಾರ್ಗಗಳ ಅಭಿವೃದ್ಧಿ, ಅಗತ್ಯವಿರುವ ಕಡೆ ಸೈಕಲ್‌ ಪಾಥ್‌ ನಿರ್ಮಾಣ ಸೇರಿದಂತೆ ಇನ್ನಿತರೆ ಮೂಲಸೌಕರ್ಯ ಸೌಲಭ್ಯಗಳನ್ನು ಅಭಿವೃದ್ಧಿಪಡಿಸುವ ಯೋಜನೆ ರೂಪಿಸಲಾಗುತ್ತಿದೆ.

ಪ್ರಮುಖ ರಸ್ತೆಗಳನ್ನು ಅಗಲಗೊಳಿಸುವ ಮೂಲಕ ಸಂಚಾರ ದಟ್ಟಣೆಯನ್ನು ಕಡಿಮೆ ಮಾಡುವುದು, ಸಂಚಾರ ಸುಗಮಗೊಳಿಸುವುದು ಹಾಗೂ ಸಾರ್ವಜನಿಕರಿಗೆ ಉತ್ತಮ ರಸ್ತೆ ಮೂಲಸೌಕರ್ಯ ಒದಗಿಸುವುದರೊಂದಿಗೆ ಭವಿಷ್ಯದ ನಗರ ಅಭಿವೃದ್ಧಿಗೆ ಅಗತ್ಯವಾದ ಮೂಲಸೌಕರ್ಯ ವ್ಯವಸ್ಥೆಗಳನ್ನು ಬಲಪಡಿಸಲು ಸಾಧ್ಯವಾಗಲಿದೆ ಎಂದು ಹೇಳಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com