ಕಾಂಗ್ರೆಸ್ ಪಕ್ಷದ ಕಚೇರಿಗಳಿಗೆ ಅತಿ ಕಡಿಮೆ ಬೆಲೆಗೆ ಜಾಗ ಹಂಚಿಕೆ: ರಾಜ್ಯ ಸರ್ಕಾರ ವಿರುದ್ಧ ಬಿಜೆಪಿ ಆರೋಪ

ನಗರಾಭಿವೃದ್ಧಿ ಮತ್ತು ಪಟ್ಟಣ ಯೋಜನೆ ಸಚಿವ ಭೈರತಿ ಸುರೇಶ್ ಅವರು ಈ ನಿರ್ಧಾರವನ್ನು ಸಮರ್ಥಿಸಿಕೊಂಡರು. ಈ ನಿರ್ಧಾರವನ್ನು ಸಚಿವ ಸಂಪುಟದ ಅನುಮೋದನೆಯ ನಂತರ ತೆಗೆದುಕೊಳ್ಳಲಾಗಿದೆ ಎಂದು ಹೇಳಿದರು.
The Karnataka Legislative Council in session
ಕರ್ನಾಟಕ ವಿಧಾನ ಪರಿಷತ್ ಅಧಿವೇಶನದಲ್ಲಿ
Updated on

ಬೆಂಗಳೂರು: ಕಾಂಗ್ರೆಸ್ ಪಕ್ಷದ ಕಚೇರಿಗಳಿಗಾಗಿ ಅತಿ ಕಡಿಮೆ ದರದಲ್ಲಿ ಜಾಗಗಳನ್ನು ನೀಡಲಾಗಿದೆ ಎಂದು ಬಿಜೆಪಿ ಆರೋಪಿಸಿದ ಹಿನ್ನೆಲೆಯಲ್ಲಿ ವಿಧಾನ ಪರಿಷತ್ತಿನಲ್ಲಿ ಆಡಳಿತ ಮತ್ತು ವಿಪಕ್ಷಗಳ ನಡುವೆ ಗದ್ದಲ, ಕೋಲಾಹಲ ಉಂಟಾಯಿತು.

ಬಿಜೆಪಿ ವಿಧಾನ ಪರಿಷತ್ ಸದಸ್ಯ ಡಿ.ಎಸ್. ಅರುಣ್ ಅವರು, ಸರ್ಕಾರವು ಆಸ್ತಿಗಳ ಮಾರ್ಗಸೂಚಿ ಮೌಲ್ಯದ ಕೇವಲ 5% ದರದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಜಾಗಗಳನ್ನು ಹಂಚಿಕೆ ಮಾಡಿದೆ ಎಂದು ಆರೋಪಿಸಿದರು. ಅಲ್ಲದೆ, ರಾಜ್ಯ ಸರ್ಕಾರವು ಕಾಂಗ್ರೆಸ್ ಪಕ್ಷಕ್ಕೆ ನಾಗರಿಕ ಸೌಲಭ್ಯ (CA) ಜಾಗಗಳನ್ನೂ ನೀಡಿದೆ ಎಂದು ಅವರು ಹೇಳಿದರು.

ನಗರಾಭಿವೃದ್ಧಿ ಮತ್ತು ಪಟ್ಟಣ ಯೋಜನೆ ಸಚಿವ ಭೈರತಿ ಸುರೇಶ್ ಅವರು ಈ ನಿರ್ಧಾರವನ್ನು ಸಮರ್ಥಿಸಿಕೊಂಡರು. ಈ ನಿರ್ಧಾರವನ್ನು ಸಚಿವ ಸಂಪುಟದ ಅನುಮೋದನೆಯ ನಂತರ ತೆಗೆದುಕೊಳ್ಳಲಾಗಿದೆ ಎಂದು ಹೇಳಿದರು.

The Karnataka Legislative Council in session
1998-2025ರವರೆಗೆ ಕರ್ನಾಟಕದ ಮುಖ್ಯಮಂತ್ರಿಗಳಲ್ಲಿ ಸಿದ್ದರಾಮಯ್ಯನೇ ಹೆಚ್ಚು ಸಾಲ ಮಾಡಿದ್ದಾರೆ: ಆರ್.ಅಶೋಕ್

ಇದಕ್ಕೆ ಪ್ರತಿಯಾಗಿ ಸುರೇಶ್, ಬಿಜೆಪಿ ಆಡಳಿತದಲ್ಲಿದ್ದಾಗ ರಾಷ್ಟ್ರೀಯ ಸ್ವಯಂಸೇವಕ ಸಂಘ (RSS)ಕ್ಕೆ ಸಂಬಂಧಿಸಿದ ಟ್ರಸ್ಟ್ ನಡೆಸುವ ಚಾಣಕ್ಯ ವಿಶ್ವವಿದ್ಯಾಲಯದ ಕ್ಯಾಂಪಸ್‌ಗಾಗಿ 100 ಎಕರೆ ಜಮೀನನ್ನು ನೀಡಲಾಗಿತ್ತು ಎಂದು ನೆನಪಿಸಿದರು.

ರಾಜಕೀಯ ಪಕ್ಷಗಳು ಹಾಗೂ ಇತರ ಸಂಸ್ಥೆಗಳಿಗೆ ನಾಗರಿಕ ಸೌಲಭ್ಯ ಜಾಗಗಳನ್ನು ನೀಡುವುದು ಇದೇ ಮೊದಲ ಸಲ ಅಲ್ಲ ಎಂದು ಹೇಳಿದ ಸಚಿವ ಭೈರತಿ ಸುರೇಶ್, ಈ ವಿಷಯವನ್ನು ಎತ್ತಿದ ಸದಸ್ಯರು 30 ವರ್ಷಗಳ ಹಿಂದೆ ಒಂದು ಟ್ರಸ್ಟ್‌ಗೆ ಎರಡು CA ಜಾಗಗಳನ್ನು ಪಡೆದಿದ್ದರು ಎಂದು ಹೇಳಿದರು.

ಈ ಆರೋಪವನ್ನು ತಳ್ಳಿಹಾಕಿದ ಅರುಣ್, ಬಿಜೆಪಿ ಯಾವುದೇ ಜಾಗವನ್ನು ಮಾರ್ಗಸೂಚಿ ಮೌಲ್ಯದ 5% ದರದಲ್ಲಿ ಪಡೆದಿಲ್ಲ ಎಂದು ಹೇಳಿದರು. ಮಂತ್ರಿಗಳು ಸದನಕ್ಕೆ ನೀಡುತ್ತಿರುವ ಮಾಹಿತಿ ತಪ್ಪಾಗಿದೆ ಎಂದು ಅರುಣ್ ಹೇಳಿದರು.

ಬಿಜೆಪಿ ಸದಸ್ಯರು, ಸಚಿವ ಸಂಪುಟದ ನಿರ್ಧಾರ ಆಧಾರದಲ್ಲಿ ಜಾಗ ಹಂಚಿಕೆ ಮಾಡಿರುವುದು ನಿಯಮಗಳಿಗೆ ವಿರುದ್ಧವಾಗಿದೆ ಎಂದು ಆರೋಪಿಸಿದರು. ವಿಧಾನ ಪರಿಷತ್ತಿನ ವಿರೋಧ ಪಕ್ಷದ ನಾಯಕ ಚಲವಾದಿ ನಾರಾಯಣಸ್ವಾಮಿ ಅವರು, ಕಾಂಗ್ರೆಸ್ ಪಕ್ಷದ ಕಚೇರಿಗಳಿಗೆ ನೀಡಿರುವ ಜಾಗಗಳ ಹಂಚಿಕೆಯನ್ನು ರದ್ದುಗೊಳಿಸಬೇಕು, ಏಕೆಂದರೆ ಈ ಜಾಗಗಳನ್ನು ಶಾಶ್ವತವಾಗಿ ಪಕ್ಷಕ್ಕೆ ನೀಡಲಾಗುತ್ತಿದೆ ಎಂದು ಹೇಳಿದರು.

ಚರ್ಚೆ ತೀವ್ರಗೊಂಡು ಸದಸ್ಯರು ಪರಸ್ಪರ ವೈಯಕ್ತಿಕ ಆರೋಪಗಳಿಗೆ ಇಳಿದಾಗ, ವಿಧಾನ ಪರಿಷತ್ ಅಧ್ಯಕ್ಷ ಬಸವರಾಜ ಹೊರಟ್ಟಿ ಮಧ್ಯಪ್ರವೇಶಿಸಿ ಸದನದಲ್ಲಿ ವಿವೇಕದಿಂದ ವರ್ತಿಸಿ ಎಂದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com