Kempegowda International Airport, Bengaluru
ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣ, ಬೆಂಗಳೂರು

'ವಿಮಾನದಲ್ಲಿ ಬಾಂಬ್ ಇದ್ದರೆ ನಿಲ್ಲಲ್ವಾ..': ಪಶ್ಚಿಮ ಬಂಗಾಳದ DJ ಹೇಳಿಕೆ; ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಆತಂಕ ಸೃಷ್ಟಿ, ವ್ಯಕ್ತಿ ಬಂಧನ

"ಬಾಂಬ್" ಎಂಬ ಪದದ ಉಲ್ಲೇಖವು ಭದ್ರತಾ ಕಾಳಜಿಯನ್ನು ಹುಟ್ಟುಹಾಕಿತು. ಹೀಗಾಗಿ ಅವರನ್ನು ಬಂಧಿಸಿ ಪೊಲೀಸರಿಗೆ ಹಸ್ತಾಂತರಿಸಲಾಯಿತು.
Published on

ಬೆಂಗಳೂರು: ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ (KIA) ಬಾಂಬ್ ಬೆದರಿಕೆ ಹಾಕಿದ ಆರೋಪದ ಮೇಲೆ ಡಿಸ್ಕ್ ಜಾಕಿ (DJ) ಒಬ್ಬರನ್ನು ಪೊಲೀಸರು ಬಂಧನಕ್ಕೊಳಪಡಿಸಿದ್ದಾರೆ.

ಪಶ್ಚಿಮ ಬಂಗಾಳ ಮೂಲಕ ಡಿಜೆ ರಜತೇಶ್ ಬೇರಾ ಬಂಧಿತ ವ್ಯಕ್ತಿ. ಮಾರ್ಚ್ 11ರಂದು ಬೆಂಗಳೂರಿನಿಂದ ರಾಯ್‌ಪುರಕ್ಕೆ ಹೋಗಬೇಕಿದ್ದ ಇಂಡಿಗೋ ವಿಮಾನ ಏರಲು ರಜತೇಶ್ ವಿಮಾನ ನಿಲ್ದಾಣಕ್ಕೆ ತಡವಾಗಿ ಬಂದಿದ್ದರು. ಹೀಗಾಗಿ ವಿಮಾನ ನಿಲ್ದಾಣದ ಸಿಬ್ಬಂದಿ ಇವರನ್ನು ಒಳಗೆ ಬಿಡಲು ನಿರಾಕರಿಸಿದಾಗ ಮಾತಿನ ಚಕಮಕಿ ನಡೆಸಿದ್ದಾರೆ.

ವಾಗ್ವಾದ ವೇಳೆ 'ವಿಮಾನದೊಳಗೆ ಬಾಂಬ್ ಇದ್ದರೆ ವಿಮಾನ ನಿಲ್ಲಲ್ವಾ..' ಎಂದು ಅವರು ಹೇಳಿದ್ದಾಗಿ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

"ಬಾಂಬ್" ಎಂಬ ಪದದ ಉಲ್ಲೇಖವು ಭದ್ರತಾ ಕಾಳಜಿಯನ್ನು ಹುಟ್ಟುಹಾಕಿತು. ಹೀಗಾಗಿ ಅವರನ್ನು ಬಂಧಿಸಿ ಪೊಲೀಸರಿಗೆ ಹಸ್ತಾಂತರಿಸಲಾಯಿತು ಎಂದು ಹೇಳಿದ್ದಾರೆ.

Kempegowda International Airport, Bengaluru
ಮಧ್ಯಪ್ರಾಚ್ಯ ಸಂಘರ್ಷ: ಬೆಂಗಳೂರು ವಿಮಾನ ನಿಲ್ದಾಣದಲ್ಲಿ 34 ಅಂತರರಾಷ್ಟ್ರೀಯ ವಿಮಾನಗಳು ರದ್ದು

ನಂತರ ನಿಯಮಾನುಸಾರ ಬಾಂಬ್ ಬೆದರಿಕೆ ಮೌಲ್ಯಮಾಪನ ಸಮಿತಿಯನ್ನು ರಚಿಸಿ ಹೇಳಿಕೆಯ ಗಂಭೀರತೆಯನ್ನು ಪರಿಶೀಲಿಸಲಾಯಿತು ಎಂದು ಪೊಲೀಸರು ತಿಳಿಸಿದ್ದಾರೆ.

ವಿಮಾನ ಸಿಬ್ಬಂದಿ ನೀಡಿದ ದೂರಿನ ಆಧಾರದಲ್ಲಿ ಭಾರತೀಯ ನ್ಯಾಯ ಸಂಹಿತೆಯ ಕಲಂ 125 (ಇತರರ ಜೀವ ಅಥವಾ ಸುರಕ್ಷತೆಗೆ ಅಪಾಯ ಉಂಟುಮಾಡುವ ಕೃತ್ಯ) ಮತ್ತು 353 (ಸಾರ್ವಜನಿಕ ಅಶಾಂತಿಗೆ ಕಾರಣವಾಗುವ ಹೇಳಿಕೆ) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ವಿಚಾರಣೆಯಲ್ಲಿ ವೇಳೆ ವ್ಯಕ್ತಿ ತಂದೆ ಅಸ್ವಸ್ಥರಾಗಿದ್ದರಿಂದ ತುರ್ತಾಗಿ ವಿಮಾನಕ್ಕೆ ಹತ್ತಲು ಪ್ರಯತ್ನಿಸಿದ್ದಾಗಿ ತಿಳಿಸಿದ್ದಾನೆ. ಬಳಿಕ ಆತನಿಗೆ ಜಾಮೀನು ನೀಡಲಾಗಿದ್ದು, ತನಿಖೆ ಮುಂದುವರಿದಿದೆ ಎಂದು ಪೊಲೀಸರು ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

X

Advertisement

X
Kannada Prabha
www.kannadaprabha.com