ಬೆಂಗಳೂರು: 16 ವರ್ಷಗಳಿಂದ ಹುಡುಕುತ್ತಿದ್ದ ಮೋಸ್ಟ್ ವಾಂಟೆಂಡ್ ಕಳ್ಳಿ ಬಂಧನ; ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಿ ಮತ್ತೆ ಪರಾರಿ!

ತಮಿಳುನಾಡು ಮೂಲದ ಮಾಲಾ ಪರಾರಿಯಾದ ಕಳ್ಳಿ. ಮಾಲಾ ಪರಾರಿ ಸಂಬಂಧ ರಾಮನಗರ ಟೌನ್ ಠಾಣೆಯಲ್ಲಿ ಕೇಸ್​​​​ ದಾಲಾಗಿದ್ದು, ಕುಖ್ಯಾತ ಕಳ್ಳಿಗಾಗಿ ಪೊಲೀಸರು ಶೋಧ ಕಾರ್ಯ ನಡೆಸಿದ್ದಾರೆ.
AI Image
ಎಐ ಚಿತ್ರ
Updated on

ರಾಮನಗರ: ಪೊಲೀಸ್ ಕಸ್ಟಡಿಯಲ್ಲಿದ್ದ ಕುಖ್ಯಾತ ಕಳ್ಳಿ ಜಿಲ್ಲಾಸ್ಪತ್ರೆಯ ಸಖಿ ಕೇಂದ್ರದಿಂದ ಪರಾರಿ ಆಗಿರುವಂತಹ ಘಟನೆ ಬೆಂಗಳೂರು ದಕ್ಷಿಣ ಜಿಲ್ಲೆಯ ರಾಮನಗರದಲ್ಲಿರುವ ಜಿಲ್ಲಾಸ್ಪತ್ರೆಯ ಸಖಿ ಕೇಂದ್ರದಲ್ಲಿ ನಡೆದಿದೆ.

ತಮಿಳುನಾಡು ಮೂಲದ ಮಾಲಾ ಪರಾರಿಯಾದ ಕಳ್ಳಿ. ಮಾಲಾ ಪರಾರಿ ಸಂಬಂಧ ರಾಮನಗರ ಟೌನ್ ಠಾಣೆಯಲ್ಲಿ ಕೇಸ್​​​​ ದಾಲಾಗಿದ್ದು, ಕುಖ್ಯಾತ ಕಳ್ಳಿಗಾಗಿ ಪೊಲೀಸರು ಶೋಧ ಕಾರ್ಯ ನಡೆಸಿದ್ದಾರೆ.

ಕಳೆದ 16 ವರ್ಷಗಳಿಂದ ಪೊಲೀಸರಿಂದ ಬೇಕಾಗಿದ್ದ 40 ವರ್ಷದ ಮಾಲಾ ಎಂಬಾಕೆಯನ್ನು ಇತ್ತೀಚೆಗೆ ಮಾಗಡಿ ಪೊಲೀಸರು ಆಕೆಯ ಇಬ್ಬರು ಸಹಚರರೊಂದಿಗೆ ಬಂಧಿಸಿದ್ದರು.

ಸೂರ್ಯಾಸ್ತದ ನಂತರ ಮಹಿಳಾ ಆರೋಪಿಗಳನ್ನು ಪೊಲೀಸ್ ಠಾಣೆಯಲ್ಲಿ ಬಂಧಿಸಲು ಸಾಧ್ಯವಾಗದ ಕಾರಣ, ಆಕೆಯನ್ನು ರಾಮನಗರ ಜಿಲ್ಲಾ ಆಸ್ಪತ್ರೆಯ ಸಖಿ ಕೇಂದ್ರಕ್ಕೆ ಸ್ಥಳಾಂತರಿಸಲಾಯಿತು. ಶುಕ್ರವಾರ ಮಧ್ಯರಾತ್ರಿ 12.30 ರ ಸುಮಾರಿಗೆ ಆಕೆ ತಪ್ಪಿಸಿಕೊಂಡಿದ್ದಾಳೆ.

AI Image
ಕಳ್ಳತನಕ್ಕೆ ಬಂದು ಮನೆಯಲ್ಲಿ ಕಂಬಳಿ ಹೊದ್ದು ಮಲಗಿದ ಖತರ್ನಾಕ್ ಕಳ್ಳ!

ಬೆಂಗಳೂರಿನ ಕಮ್ಮಸಂದ್ರ ನಿವಾಸಿಯಾಗಿರುವ ಆರೋಪಿ ಮಾಲಾ ತಮಿಳುನಾಡಿನ ಹೊಸೂರಿನವಳು. ಮಾಲಾ ಮತ್ತು ಆಕೆಯ ಇಬ್ಬರು ಸಹಚರರನ್ನು ಬಂಧಿಸಿದ ನಂತರ, ಕದ್ದ ಸೊತ್ತುಗಳನ್ನು ವಶಪಡಿಸಿಕೊಳ್ಳಲು ಪೊಲೀಸರು ಮಾರ್ಚ್ 23 ರವರೆಗೆ ಆರೋಪಿಗಳನ್ನು ತಮ್ಮ ವಶಕ್ಕೆ ತೆಗೆದುಕೊಂಡಿದ್ದರು.

ಮಾಲಾ ಪರಾರಿಯಾಗುವಾಗ ಇಬ್ಬರು ಮಹಿಳಾ ಪೊಲೀಸ್ ಸಿಬ್ಬಂದಿ ಆಸ್ಪತ್ರೆಯಲ್ಲಿ ಕಾವಲು ಕಾಯುತ್ತಿದ್ದರು. ಆಕೆ ಓಡಿಹೋಗಿದ್ದಾಳೆಂದು ಅರಿತುಕೊಂಡ ಪೊಲೀಸರು ಬಸ್ ನಿಲ್ದಾಣಗಳು, ರೈಲ್ವೆ ನಿಲ್ದಾಣ ಮತ್ತು ಇತರ ಸ್ಥಳಗಳಲ್ಲಿ ಆಕೆಗಾಗಿ ಹುಡುಕಾಟ ನಡೆಸಿದರು, ಆದರೆ ಆಕೆಯನ್ನು ಪತ್ತೆಹಚ್ಚಲು ಸಾಧ್ಯವಾಗಲಿಲ್ಲ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com