ವಿಧಾನಸಭೆ ಕಲಾಪ: ಸ್ಪೀಕರ್ ಯುಟಿ ಖಾದರ್ ಸಿಟ್ಟಿಗೆ ಮೂವರು ಅಧಿಕಾರಗಳ ತಲೆದಂಡ!

ಸಿಎಂ ಸಿದ್ದರಾಮಯ್ಯ ಜೊತೆ ನಡೆದ ಸಂಧಾನದ ಬಳಿಕ ಸದನ ನಡೆಸಲು ಒಪ್ಪಿದ ಸ್ಪೀಕರ್ ಖಾದರ್ ಕಲಾಪಕ್ಕೆ ಬಂದು ಕುರ್ಚಿಯಲ್ಲಿ ಕುಳಿತುಕೊಂಡರು.
UT khader
ಯುಟಿ ಖಾದರ್online desk
Updated on

ಬೆಂಗಳೂರು: ಅಧಿವೇಶನದಲ್ಲಿ ಶಾಸಕರ ಪ್ರಶ್ನೆಗಳಿಗೆ ಉತ್ತರಿಸುವವರೇ ಇಲ್ಲ, ಸಚಿವರು, ಅಧಿಕಾರಿಗಳು ಗೈರಾಗಿದ್ದಾರೆ, ಹೀಗಾದರೆ ಸದನ ನಡೆಸುವುದು ಹೇಗೆ ಎಂದು ಹೊರನಡೆದ ಸ್ಪೀಕರ್ ಯುಟಿ ಖಾದರ್ ಆಕ್ರೋಶಕ್ಕೆ 3 ಅಧಿಕಾರಿಗಳ ತಲೆದಂಡವಾಗಿದೆ.

ವಿಧಾನಸಭೆ ಅಧಿವೇಶನಕ್ಕೆ ಸಚಿವರು ಗೈರಾಗಿದ್ದಾರೆ. ಅಲ್ಲದೇ ಶಾಸಕರ ಪ್ರಶ್ನೆಗಳಿಗೆ ಉತ್ತರ ನೀಡಲು ಸಚಿವರು ಇಲ್ಲ, ಸಂಬಂಧಪಟ್ಟ ಇಲಾಖೆ ಅಧಿಕಾರಿಗಳು ಇಲ್ಲ ಎಂದು ಸ್ಪೀಕರ್​​ ಯುಟಿ ಖಾದರ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದರು. ಬಳಿಕ ಸಿಎಂ ಸಿದ್ದರಾಮಯ್ಯ ಸ್ಪೀಕರ್ ಖಾದರ್ ಜೊತೆ ಮಾತುಕತೆ ನಡೆಸಿ ಮನವೊಲಿಕೆ ಮಾಡಿದ್ದಾರೆ. ಸ್ಪೀಕರ್ ಜೊತೆ ಮಾತನಾಡಿದ ಬಳಿಕ ಮೂವರು ಅಧಿಕಾರಿಗಳ ಸಸ್ಪೆಂಡ್‌ಗೆ ಸೂಚನೆ ನೀಡಿದ್ದಾರೆ.

ಸದನದಲ್ಲಿ ಅತಿ ಹೆಚ್ಚು ಉತ್ತರ ಬಾಕಿ ಉಳಿಸಿಕೊಂಡಿರೋ ಇಲಾಖೆ ಅಧಿಕಾರಿಗಳನ್ನು ಅಮಾನತು ಮಾಡುವಂತೆ ಸಿದ್ದರಾಮಯ್ಯ ಖಡಕ್ ಸೂಚನೆ ಕೊಟ್ಟಿದ್ದಾರೆ. ಖಾದರ್ ಸಿಟ್ಟಿಗೆ ಮೂವರು ಅಧಿಕಾರ ತಲೆದಂಡವಾಗಿದೆ.

UT khader
‘ಹೀಗಾದರೆ ಸದನ ಹೇಗೆ ನಡೆಸಬೇಕು, ಉತ್ತರ ಕೊಡಿ' ಗರಂ ಆಗಿ ಕಲಾಪದಿಂದ ಹೊರನಡೆದ ಸ್ಪೀಕರ್, ಮನವೊಲಿಸಿದ ಸಿಎಂ!

ಮತ್ತೆ ಸದನಕ್ಕೆ ಬಂದ ಸ್ಪೀಕರ್​

ಸಿಎಂ ಸಿದ್ದರಾಮಯ್ಯ ಜೊತೆ ನಡೆದ ಸಂಧಾನದ ಬಳಿಕ ಸದನ ನಡೆಸಲು ಒಪ್ಪಿದ ಸ್ಪೀಕರ್ ಖಾದರ್ ಕಲಾಪಕ್ಕೆ ಬಂದು ಕುರ್ಚಿಯಲ್ಲಿ ಕುಳಿತುಕೊಂಡರು.ಸರ್ಕಾರದ ವಿರುದ್ಧವೇ ಸಿಟ್ಟಾದ ಸ್ಪೀಕರ್​ ಖಾದರ್ ಅವರ ಮನವೊಲಿಕೆ ಮಾಡುವಲ್ಲಿ ಸಿಎಂ ಯಶಸ್ವಿಯಾಗಿದ್ದಾರೆ.

ಶಾಸಕರ ಪ್ರಶ್ನೆಗಳಿಗೆ ಸಿಗಲಿದೆ ಸೂಕ್ತ ಉತ್ತರ

ಲಿಖಿತ ಪ್ರಶ್ನೆಗಳಿಗೆ ಉತ್ತರ ಸಂಬಂಧ ಸಿಎಂ ಹಾಗೂ ಸಚಿವರು ಮತ್ತೆ ಪ್ರತಿಪಕ್ಷ ನಾಯಕರ ಜೊತೆ ಚರ್ಚಿಸಿ ತೀರ್ಮಾನ ಮಾಡಲಾಗಿದೆ. ಭೋಜನ ಸಮಯದ ಬಳಿಕ ಸರ್ಕಾರ ಅದಕ್ಕೆ ಉತ್ತರ ಕೊಡಲಿದೆ ಎಂದು ಸ್ಪೀಕರ್​ ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com