

ಬೆಂಗಳೂರು: ‘ರಿಲೇಶನ್ಶಿಪ್’ ಒತ್ತಾಯವನ್ನು ನಿರಾಕರಿಸಿದ ಹಿನ್ನೆಲೆಯಲ್ಲಿ ಯುವತಿಗೆ ವ್ಯಕ್ತಿಯೊಬ್ಬ ಕಿರುಕುಳ, ದೌರ್ಜನ್ಯ ಹಾಗೂ ಹಲ್ಲೆಗೆ ಯತ್ನಿಸಿರುವ ಘಟನೆಯೊಂದು ಇಂದಿರಾನಗರ ಪ್ರದೇಶದಲ್ಲಿರುವ ಜನಪ್ರಿಯ ಹಾಸ್ಟೆಲ್ನಲ್ಲಿ ನಡೆದಿದೆ.
ಮಹಿಳೆ ಸಲ್ಲಿಸಿದ ದೂರಿನ ಪ್ರಕಾರ, ಅದೇ ಹಾಸ್ಟೆಲ್ನಲ್ಲಿ ತಂಗಿದ್ದ ಮನು ಶರ್ಮಾ ಎಂಬ ವ್ಯಕ್ತಿ ಹಲವು ದಿನಗಳಿಂದ ಕಿರುಕುಳ ನೀಡುತ್ತಿದ್ದ. ಒಟ್ಟಿಗೆ ಇರಬೇಕೆಂದು ಪದೇ ಪದೇ ಒತ್ತಾಯಿಸುತ್ತಿದ್ದ. ನಿರಾಕರಿಸಿದರೂ, ಆರೋಪಿ ಕಿರುಕುಳ ನೀಡುತ್ತಲೇ ಇದ್ದ. ನನ್ನ ಸ್ನೇಹಿತೆ ಪ್ರಿಯಾಂಕಾ ಪ್ರಸಾದ್ ಮೂಲಕ ನನ್ನನ್ನು ಸಂಪರ್ಕಿಸಲು ಪ್ರಯತ್ನಿಸಿದ್ದ.
ಮಾರ್ಚ್ 11ರ ರಾತ್ರಿ ಹಾಸ್ಟೆಲ್ ಆವರಣದಲ್ಲಿ ಕೂಗಾಡಲು ಪ್ರಾರಂಭಿಸಿದಾಗ ಪರಿಸ್ಥಿತಿ ವಿಕೋಪಕ್ಕೆ ಹೋಯಿತು ಎಂದು ತಿಳಿಸಲಾಗಿದೆ.
ನನ್ನ ಮತ್ತು ನನ್ನ ಸ್ನೇಹಿತನ ವಿರುದ್ಧ ಮನು ಶರ್ಮಾ ಅಸಭ್ಯ ಮತ್ತು ಅವಹೇಳನಕಾರಿ ಭಾಷೆಯನ್ನು ಬಳಸಿದ್ದಾನೆ. ಅಲ್ಲದೆ, ಹಾಸ್ಟೆಲ್ನಲ್ಲಿ ತಂಗಿದ್ದ ಮಹಿಳೆಯರನ್ನು ಗುರಿಯಾಗಿಸಿಕೊಂಡು ಅವರನ್ನು ನಿಂದಿಸಿದ್ದಾನೆ ಮತ್ತು ಅಶ್ಲೀಲ ಹೇಳಿಕೆಗಳನ್ನು ನೀಡಿದ್ದಾನೆ ಎಂದು ಆರೋಪಿಸಿದ್ದಾರೆ.
ವಾಗ್ವಾದದ ಸಮಯದಲ್ಲಿ ಆರೋಪಿ ನನ್ನ ಮತ್ತು ನನ್ನ ಸ್ನೇಹಿತನ ಮೇಲೆ ದೈಹಿಕವಾಗಿ ಹಲ್ಲೆಗೆ ಯತ್ನಿಸಿದ್ದಾನೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.
ಈ ಘಟನೆ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದ್ದು, ದೂರಿನ ಆಧಾರದ ಮೇಲೆ ಪೊಲೀಸರು ಮನು ಶರ್ಮಾ ವಿರುದ್ಧ ಪ್ರಕರಣ ದಾಖಲಿಸಿಕೊಂಡು ಬಂಧನಕ್ಕೊಳಪಡಿಸಿದ್ದಾರೆ.
Advertisement