3,052 ಕೋಟಿ ರೂ. ವೆಚ್ಚದ ನೀರಾವರಿ ಯೋಜನೆಗಳಿಗೆ ಕೇಂದ್ರದ ಅನುಮೋದನೆ ಕೋರಿದ ರಾಜ್ಯ ಸರ್ಕಾರ

"ರಾಜ್ಯ ಸರ್ಕಾರವು ಈಗಾಗಲೇ ಬಜೆಟ್‌ನಲ್ಲಿ ತನ್ನ ಶೇ. 40 ರಷ್ಟು ಹಣವನ್ನು ನೀಡುವ ಬದ್ಧತೆಯನ್ನು ಪ್ರದರ್ಶಿಸಿದೆ. ಆದರೆ ಉಳಿದ ಶೇ. 60 ರಷ್ಟು ಹಣವನ್ನು ಕೇಂದ್ರದಿಂದ ನಿರೀಕ್ಷಿಸಲಾಗಿದೆ ಎಂದು ಸಚಿವರು ತಿಳಿಸಿದ್ದಾರೆ.
Karnataka seeks Centre's approval for irrigation projects worth Rs 3,052 cr
ಕೇಂದ್ರ ಸಚಿವರನ್ನು ಭೇಟಿ ಮಾಡಿದ ಡಿಸಿಎಂ ನೇತೃತ್ವದ ನಿಯೋಗ
Updated on

ನವದೆಹಲಿ/ಬೆಂಗಳೂರು: ಕೇಂದ್ರೀಯ ಪ್ರಾಯೋಜಿತ ಯೋಜನೆಗಳ ಅಡಿಯಲ್ಲಿ 3,052 ಕೋಟಿ ರೂ. ಮೌಲ್ಯದ ನೀರಾವರಿ ಯೋಜನೆಗಳಿಗೆ ಕರ್ನಾಟಕ ಸರ್ಕಾರವು ಆರಂಭಿಕ ಅನುಮೋದನೆಯನ್ನು ಕೋರಿದೆ. ಇದಕ್ಕೆ ಕೇಂದ್ರ ಸರ್ಕಾರವು ಸಕಾರಾತ್ಮಕವಾಗಿ ಸ್ಪಂದಿಸಿದೆ ಎಂದು ಸಚಿವ ಎನ್.ಎಸ್. ಬೋಸರಾಜು ಅವರು ಬುಧವಾರ ಹೇಳಿದ್ದಾರೆ.

ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಯೋಜನೆ(ಪಿಎಂಕೆಎಸ್‌ವೈ) ಮತ್ತು ದುರಸ್ತಿ, ನವೀಕರಣ ಹಾಗೂ ಪುನಃಸ್ಥಾಪನೆ (ಆರ್‌ಆರ್‌ಆರ್) ಯೋಜನೆಗಳ ಅಡಿಯಲ್ಲಿ ಸಲ್ಲಿಸಲಾದ ಪ್ರಸ್ತಾವನೆಗಳು ಪ್ರಸ್ತುತ ಕೇಂದ್ರ ಜಲಸಂಪನ್ಮೂಲ ಸಚಿವಾಲಯದಲ್ಲಿ ವಿವಿಧ ಹಂತಗಳಲ್ಲಿ ಬಾಕಿ ಉಳಿದಿವೆ ಎಂದು ಅವರು ಇಂದು ದೆಹಲಿಯಲ್ಲಿ ನಡೆದ ಸಭೆಯ ನಂತರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

"ರಾಜ್ಯ ಸರ್ಕಾರವು ಈಗಾಗಲೇ ಬಜೆಟ್‌ನಲ್ಲಿ ತನ್ನ ಶೇ. 40 ರಷ್ಟು ಹಣವನ್ನು ನೀಡುವ ಬದ್ಧತೆಯನ್ನು ಪ್ರದರ್ಶಿಸಿದೆ. ಆದರೆ ಉಳಿದ ಶೇ. 60 ರಷ್ಟು ಹಣವನ್ನು ಕೇಂದ್ರದಿಂದ ನಿರೀಕ್ಷಿಸಲಾಗಿದೆ ಎಂದು ಸಚಿವರು ತಿಳಿಸಿದ್ದಾರೆ.

Karnataka seeks Centre's approval for irrigation projects worth Rs 3,052 cr
ಭದ್ರಾ ಮೇಲ್ದಂಡೆ ನೀರಾವರಿ ಯೋಜನೆಗೆ ಹಣಕಾಸಿನ ಕೊರತೆ: ಅಮೆಗತಿಯಲ್ಲಿ ಸಾಗುತ್ತಿರುವ ಕಾಮಗಾರಿ

ಯೋಜನೆಗಳ ಅನುಷ್ಠಾನವನ್ನು ತ್ವರಿತಗೊಳಿಸಲು ನಾವು ಆರಂಭಿಕ ಅನುಮೋದನೆಗಳನ್ನು ಕೋರಿದ್ದೇವೆ ಮತ್ತು ಕೇಂದ್ರ ಸಚಿವರಿಂದ ಉತ್ತಮ ಪ್ರತಿಕ್ರಿಯೆ ಬಂದಿದೆ" ಎಂದು ಬೋಸರಾಜು ಹೇಳಿದ್ದಾರೆ.

ತಮ್ಮ ದೆಹಲಿ ಭೇಟಿಯ ಸಮಯದಲ್ಲಿ, ಬೋಸರಾಜು ಅವರು ಕೇಂದ್ರ ಜಲಶಕ್ತಿ ಖಾತೆ ರಾಜ್ಯ ಸಚಿವ ವಿ. ಸೋಮಣ್ಣ ಅವರಿಗೆ ರಾಜ್ಯಾದ್ಯಂತ ನೀರಾವರಿ ಕಾಮಗಾರಿಗಳನ್ನು ಮುಂದುವರಿಸಲು ತ್ವರಿತ ಅನುಮತಿ ಕೋರಿ ಮನವಿ ಪತ್ರ ಸಲ್ಲಿಸಿದರು.

ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರೊಂದಿಗೆ ಕೇಂದ್ರ ನಾಗರಿಕ ವಿಮಾನಯಾನ ಸಚಿವ ಕೆ ರಾಮ್ ಮೋಹನ್ ನಾಯ್ಡು ಅವರನ್ನು ಭೇಟಿ ಮಾಡಿದ ಬೋಸರಾಜು ಅವರು, ರಾಜ್ಯದ ನಾಗರಿಕ ವಿಮಾನಯಾನ ಕ್ಷೇತ್ರಕ್ಕೆ ಸಂಬಂಧಿಸಿದ ಪ್ರಮುಖ ಯೋಜನೆಗಳ ಕುರಿತು ಚರ್ಚಿಸಿದರು.

ಕಲ್ಯಾಣ ಕರ್ನಾಟಕ ಪ್ರದೇಶದಲ್ಲಿ ಆರ್ಥಿಕ ಚಟುವಟಿಕೆಗೆ ಉತ್ತೇಜನ ನೀಡಲು ರಾಯಚೂರಿನಲ್ಲಿ ವಿಮಾನ ನಿಲ್ದಾಣದ ಪ್ರಸ್ತಾವಿತ ಅಭಿವೃದ್ಧಿ ಮತ್ತು ಉಡಾನ್ ಪ್ರಾದೇಶಿಕ ಸಂಪರ್ಕ ಯೋಜನೆಯಡಿಯಲ್ಲಿ ಕಲಬುರಗಿಗೆ ವಿಮಾನ ಕಾರ್ಯಾಚರಣೆಗಳನ್ನು ಪುನರಾರಂಭಿಸುವ ಬಗ್ಗೆ ಚರ್ಚಿಸಲಾಯಿತು ಎಂದು ಸಚಿವರು ತಿಳಿಸಿದ್ದಾರೆ.

ಕಲಬುರಗಿಗೆ ವಿಮಾನ ಸೇವೆಗಳನ್ನು ಪುನರಾರಂಭಿಸಲು ಅನುಕೂಲವಾಗುವಂತೆ ವಿಮಾನಯಾನ ಸಂಸ್ಥೆಗಳೊಂದಿಗೆ ಚರ್ಚೆ ಪ್ರಾರಂಭಿಸಲಾಗುವುದು ಎಂದು ಕೇಂದ್ರ ಸಚಿವರು ಭರವಸೆ ನೀಡಿರುವುದಾಗಿ ಬೋಸರಾಜು ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com