ಪೆಟ್ರೋಲ್-ಡೀಸೆಲ್ ಬೆಲೆಯಲ್ಲಿ ಏರಿಕೆ ವದಂತಿ; ಬಸ್ ಟಿಕೆಟ್‌ ದರ ಹೆಚ್ಚಾಗುತ್ತಾ? ಸಚಿವ ರಾಮಲಿಂಗಾರೆಡ್ಡಿ ಹೇಳಿದ್ದೇನು

ರಾಜ್ಯ ಸರ್ಕಾರ ಪ್ರಯಾಣ ದರ ಹೆಚ್ಚಿಸುವ ಮೂಲಕ ಜನರಿಗೆ ಹೊರೆಯಾಗಲ್ಲ. ದರ ಪರಿಷ್ಕರಣೆಯಂತಹ ಯಾವುದೇ ಪ್ರಕ್ರಿಯೆಯನ್ನು ಕೈಗೊಂಡಿಲ್ಲ ಎಂದು ಅವರು ಸ್ಪಷ್ಪಪಡಿಸಿದ್ದಾರೆ.
Ramalinga reddy casual Images
ಸಚಿವ ರಾಮಲಿಂಗಾರೆಡ್ಡಿ ಸಾಂದರ್ಭಿಕ ಚಿತ್ರ
Updated on

ಬೆಂಗಳೂರು: ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಲ್ಲಿ ಏರಿಕೆಯಾಗುವ ವದಂತಿ ಕೇಳಿಬರುತ್ತಿರುತ್ತದೆ. ಈ ನಡುವೆ ರಾಜ್ಯದಲ್ಲಿ ಬಸ್ ಟಿಕೆಟ್‌ ದರವನ್ನು ಹೆಚ್ಚಿಸುವುದಿಲ್ಲ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಹೇಳಿದ್ದಾರೆ.

ರಾಜ್ಯ ಸರ್ಕಾರ ಪ್ರಯಾಣ ದರ ಹೆಚ್ಚಿಸುವ ಮೂಲಕ ಜನರಿಗೆ ಹೊರೆಯಾಗಲ್ಲ. ದರ ಪರಿಷ್ಕರಣೆಯಂತಹ ಯಾವುದೇ ಪ್ರಕ್ರಿಯೆಯನ್ನು ಕೈಗೊಂಡಿಲ್ಲ ಎಂದು ಅವರು ಸ್ಪಷ್ಪಪಡಿಸಿದ್ದಾರೆ.

ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಡೀಸೆಲ್ ದರ ಏರಿಕೆಯಾಗುವ ಸಾಧ್ಯತೆ ಇದೆ ಎಂಬ ಕಾರಣಕ್ಕೆ ನಾವು ಟಿಕೆಟ್ ದರವನ್ನು ಹೆಚ್ಚಿಸುವುದಿಲ್ಲ. ಈಗ ದರ ಹೆಚ್ಚಳ ಮಾಡುವ ಅಧಿಕಾರ ನಮಗಿಲ್ಲ, ನಾವು ಹೆಚ್ಚಿಸುತ್ತಿಲ್ಲ ಎಂದು ತಿಳಿಸಿದರು.

ಪ್ರಯಾಣ ದರ ಪರಿಷ್ಕರಣೆಗಾಗಿ ಸಮಿತಿ ರಚಿಸಲಾಗುತ್ತದೆಯೇ ಎಂಬ ಪ್ರಶ್ನೆಗೆ ಉತ್ತರಿಸಿದ ಸಚಿವರು, ಪ್ರಸ್ತುತ ಅಂತಹ ಯಾವುದೇ ಕ್ರಮವನ್ನು ಸರ್ಕಾರ ಪರಿಗಣಿಸುತ್ತಿಲ್ಲ ಎಂದು ಹೇಳಿದರು.

ಇದೇ ಸಂದರ್ಭದಲ್ಲಿ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ ರಾಮಲಿಂಗಾರೆಡ್ಡಿ, ಹಿಂದಿನ ದಿನಗಳಲ್ಲಿ ಕಚ್ಚಾ ತೈಲದ ಬೆಲೆ ಕಡಿಮೆಯಾಗಿದ್ದಾಗಲೂ ಕೇಂದ್ರ ಸರ್ಕಾರ ಜನರಿಗೆ ಯಾವುದೇ ಪ್ರಯೋಜನವನ್ನು ತಲುಪಿಸಲಿಲ್ಲ ಎಂದು ಆರೋಪಿಸಿದರು.

Ramalinga reddy casual Images
ಭಾರತದಲ್ಲಿ ಪೆಟ್ರೋಲ್, ಡೀಸೆಲ್ ಗೆ ಅಭಾವ ಉಂಟಾಗಿದೆಯಾ? IOCL ಹೇಳಿದ್ದೇನು

ಮನಮೋಹನ್ ಸಿಂಗ್ ಪ್ರಧಾನಿಯಾಗಿದ್ದಾಗ 100-130 ಡಾಲರ್ ಇದ್ದ ಕಚ್ಚಾ ತೈಲಕ್ಕೆ ಸಬ್ಸಿಡಿ ನೀಡಲಾಗಿತ್ತು. ಆದರೆ, ಆ ನಂತರದ 10-12 ವರ್ಷಗಳ ಕಾಲ ಕಚ್ಚಾ ತೈಲ ಬೆಲೆ ಕಡಿಮೆಯಾಗಿದ್ದಾಗಲೂ ಕೇಂದ್ರ ಸರ್ಕಾರ ಲಾಭ ಮಾಡಿಕೊಂಡಿತೇ ಹೊರತು ಜನರಿಗೆ ಇದರ ಲಾಭ ಸಿಗಲಿಲ್ಲ ಎಂದು ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com