

ಹಾಸನ: ಅಕ್ರಮ ಸಂಬಂಧ ಹೊಂದಿದ್ದ ಮಹಿಳೆ ಲೈಂಗಿಕ ಕ್ರಿಯೆಗೆ ಒಪ್ಪದಿದ್ದಕ್ಕೆ ವ್ಯಕ್ತಿಯೋರ್ವ ಮಹಿಳೆ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿ ಕೊಲೆ ಮಾಡಿರುವ ಘಟನೆ ಹಾಸನದ ಸಕಲೇಶಪುರದ ಅತ್ತಿಹಳ್ಳಿ ಗ್ರಾಮದಲ್ಲಿ ನಡೆದಿದೆ. ಕೊಲೆಯಾದ ಮಹಿಳೆಯನ್ನು 35 ವರ್ಷದ ರಮ್ಯಾ ಎಂದು ಗುರುತಿಸಲಾಗಿದೆ. ಕೊಲೆ ಆರೋಪಿ 41 ವರ್ಷದ ಚಂದ್ರ ಎಂದು ತಿಳಿದುಬಂದಿದೆ.
ವಿಧವೆಯಾಗಿದ್ದ ರಮ್ಯಾ ಬೆಂಗಳೂರಿನಲ್ಲಿ ನರ್ಸಿಂಗ್ ಕೆಲಸ ಮಾಡಿಕೊಂಡಿದ್ದು ಏಪ್ರಿಲ್ 28ರಂದು ಅತ್ತೆಯ ಅಂತ್ಯ ಸಂಸ್ಕಾರಕ್ಕೆಂದು ಸ್ವಗ್ರಾಮ ಅತ್ತಿಹಳ್ಳಿಗೆ ಬಂದಿದ್ದಾಗ ಚಂದ್ರ ಹಲ್ಲೆ ಮಾಡಿದ್ದನು.
ಎರಡು ವರ್ಷಗಳ ಹಿಂದೆ ರಮ್ಯಾಳ ಪತಿ ಉಮೇಶ್ ಮೃತಪಟ್ಟಿದ್ದರು. ಪತಿ ಸಾವಿನ ನಂತರ ರಮ್ಯಾ ಅತ್ತಿಹಳ್ಳಿಯ ಚಂದ್ರನ ಅಕ್ರಮ ಸಂಬಂಧ ಹೊಂದಿದ್ದಳು. ರಮ್ಯಾ ಊರಿಗೆ ಬಂದ ವಿಷಯ ತಿಳಿದ ಚಂದ್ರ ಆಕೆಯನ್ನು ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಾನೆ. ಇದಕ್ಕೆ ರಮ್ಯಾ ಒಪ್ಪದ್ದರಿಂದ ಸಿಟ್ಟಿಗೆದ್ದ ಚಂದ್ರ ರಮ್ಯಾಳ ಮೇಲೆ ಹಲ್ಲೆ ನಡೆಸಿ ಗುಪ್ತಾಂಗಕ್ಕೆ ಒದ್ದು ಹಲ್ಲೆ ಮಾಡಿದ್ದನು.
ರಮ್ಯಾಗೆ ತೀವ್ರ ಹೊಟ್ಟೆ ನೋವು ಕಾಣಿಸಿಕೊಂಡಿದ್ದು ಚಿಕಿತ್ಸೆಗಾಗಿ ಜಿಲ್ಲಾಸ್ಪತ್ರೆಗೆ ದಾಖಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗಿದೆ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾಳೆ. ಯಸಳೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
Advertisement