ಸಾಮೂಹಿಕ ವಿವಾಹ ಕಾರ್ಯಕ್ರಮದ ವೇದಿಕೆ ಬಳಿ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಅವಘಡ: ಡಿಸಿಎಂ ಡಿ.ಕೆ ಶಿವಕುಮಾರ್ ಪಾರು

ಸಿಂಧನೂರು ಪಟ್ಟಣದಲ್ಲಿ 151 ಜೋಡಿಗಳ ಸಾಮೂಹಿಕ ವಿವಾಹ ಕಾರ್ಯಕ್ರಮ ನೆರವೇರಿದೆ. ಕಾರ್ಯಕ್ರಮದಲ್ಲಿ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಪಾಲ್ಗೊಂಡಿದ್ದ ವೇದಿಕೆ ಬಳಿ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಅವಘಡ ಸಂಭವಿಸಿದ್ದು ಸಚಿವರನ್ನು ಕೂಡಲೇ ಅಲ್ಲಿಂದ ಹೊರಕರತರಲಾಯಿತು.
ಸಾಮೂಹಿಕ ವಿವಾಹ ಕಾರ್ಯಕ್ರಮದ ವೇದಿಕೆ ಬಳಿ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಅವಘಡ: ಡಿಸಿಎಂ ಡಿ.ಕೆ ಶಿವಕುಮಾರ್ ಪಾರು
Updated on

ರಾಯಚೂರು: ಸಿಂಧನೂರು ಪಟ್ಟಣದಲ್ಲಿ 151 ಜೋಡಿಗಳ ಸಾಮೂಹಿಕ ವಿವಾಹ ಕಾರ್ಯಕ್ರಮ ನೆರವೇರಿದೆ. ಕಾರ್ಯಕ್ರಮದಲ್ಲಿ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಪಾಲ್ಗೊಂಡಿದ್ದ ವೇದಿಕೆ ಬಳಿ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಅವಘಡ ಸಂಭವಿಸಿದ್ದು ಸಚಿವರನ್ನು ಕೂಡಲೇ ಅಲ್ಲಿಂದ ಹೊರಕರತರಲಾಯಿತು.

ಸಾಮೂಹಿಕ ವಿವಾಹ ಕಾರ್ಯಕ್ರಮಕ್ಕಾಗಿ ರಾಯಚೂರು ಜಿಲ್ಲೆಯ ಸಿಂಧನೂರಿನಲ್ಲಿ ಬೃಹತ್ ವೇದಿಕೆ ನಿರ್ಮಾಣ ಮಾಡಲಾಗಿತ್ತು. ಕಾರ್ಯಕ್ರಮದಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್, ಸಚಿವ ಈಶ್ವರ ಖಂಡ್ರೆ ಸೇರಿದಂತೆ ಹಲವು ಗಣ್ಯರು ಭಾಗವಹಿಸಿದ್ದರು. ನವ ಜೋಡಿಗಳಿಗೆ ಶುಭಕೋರಿದ ಬಳಿಕ ವೇದಿಕೆ ಬಳಿ ಶಿವಕುಮಾರ್ ತೆರಳುತ್ತಿದ್ದ ವೇಳೆ ವೇದಿಕೆಯ ಮೆಟ್ಟಿಲುಗಳ ಬಳಿ ಶಾರ್ಟ್ ಸರ್ಕ್ಯೂಟ್ ನಿಂದಾಗಿ ಬೆಂಕಿ ಹೊತ್ತಿಕೊಂಡಿತ್ತು. ತಕ್ಷಣ ಅಲರ್ಟ್ ಆದ ಪೊಲೀಸ್ ಸಿಬ್ಬಂದಿ ಶಿವಕುಮಾರ್ ಹಾಗೂ ಈಶ್ವರ ಖಂಡ್ರೆ ಅವರನ್ನು ಬೇರೆಡೆ ಕರೆದೊಯ್ದರು. ತಾಂತ್ರಿಕ ದೋಷದಿಂದಾಗಿ ಶಾರ್ಟ್ ಸರ್ಕ್ಯೂಟ್ ಆಗಿ ಬೆಂಕಿ ಅವಘಡ ಸಂಭವಿಸಿದ್ದು, ಯಾವುದೇ ಅನಾಹುತ ಸಂಭವಿಸಿಲ್ಲ ಎಂದು ತಿಳಿದುಬಂದಿದೆ.

ಸಾಮೂಹಿಕ ವಿವಾಹ ಕಾರ್ಯಕ್ರಮದ ವೇದಿಕೆ ಬಳಿ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಅವಘಡ: ಡಿಸಿಎಂ ಡಿ.ಕೆ ಶಿವಕುಮಾರ್ ಪಾರು
ಹೊಸಪೇಟೆ ತುಂಗಭದ್ರಾ ಜಲಾಶಯಕ್ಕೆ ಡಿಸಿಎಂ ಡಿಕೆಶಿ ಭೇಟಿ; 33 ಹೊಸ ಕ್ರಸ್ಟ್‌ಗೇಟ್‌ ಅಳವಡಿಕೆ ವೀಕ್ಷಣೆ; Video

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com