ಹಾವೇರಿ ಬಳಿ ಪಲ್ಲಕ್ಕಿ ಬಸ್‌ಗೆ ಬೆಂಕಿ: ಕೂದಲೆಳೆ ಅಂತರದಲ್ಲಿ 17 ಪ್ರಯಾಣಿಕರು ಪಾರು; ಚಾಲಕನ ಸಮಯ ಪ್ರಜ್ಞೆಗೆ ಪ್ರಶಂಸೆ!

ರಾಣೆಬೆನ್ನೂರು ತಾಲ್ಲೂಕಿನ ದೇವರೂಡ ಗ್ರಾಮದ ಬಳಿಯ ರಾಜ್ಯ ಹೆದ್ದಾರಿಯಲ್ಲಿ ಈ ಘಟನೆ ಸಂಭವಿಸಿದೆ. ಬಸ್ ಬೆಂಗಳೂರಿನಿಂದ ಗದಗಕ್ಕೆ ತೆರಳುತಿತ್ತು ಎನ್ನಲಾಗಿದೆ.
Ksrtc bus driver Pakkirappa
ಧಗಧಗನೆ ಹೊತ್ತಿ ಉರಿದ ಕೆಎಸ್ ಆರ್ ಟಿಸಿ ಬಸ್ ಹಾಗೂ ಚಾಲಕ ಪಕ್ಕೀರಪ್ಪ
Updated on

ಹಾವೇರಿ: ರಾಜ್ಯ ಸಾರಿಗೆ ಸಂಸ್ಥೆಯ 'ಪಲ್ಲಕ್ಕಿ' ಬಸ್‌ಗೆ ಆಕಸ್ಮಿಕವಾಗಿ ಬೆಂಕಿ ತಗುಲಿ, ಧಗಧಗನೆ ಹೊತ್ತಿ ಉರಿದ ಘಟನೆ ಹಾವೇರಿ ಜಿಲ್ಲೆಯಲ್ಲಿ ಮಂಗಳವಾರ ನಡೆದಿದೆ. 17 ಪ್ರಯಾಣಿಕರು ಕೂದಲೆಳೆ ಅಂತರದಲ್ಲಿ ಪಾರಾಗಿದ್ದಾರೆ ಎಂದು ಅಧಿಕಾರಿಗಳು ಮಂಗಳವಾರ ತಿಳಿಸಿದ್ದಾರೆ.

ರಾಣೆಬೆನ್ನೂರು ತಾಲ್ಲೂಕಿನ ದೇವರೂಡ ಗ್ರಾಮದ ಬಳಿಯ ರಾಜ್ಯ ಹೆದ್ದಾರಿಯಲ್ಲಿ ಈ ಘಟನೆ ಸಂಭವಿಸಿದೆ. ಬಸ್ ಬೆಂಗಳೂರಿನಿಂದ ಗದಗಕ್ಕೆ ತೆರಳುತಿತ್ತು ಎನ್ನಲಾಗಿದೆ.

ಬೆಂಗಳೂರಿನಿಂದ ಗದಗ ಹೊರಟಿದ್ದ (KA-57-F6680) ಸಂಖ್ಯೆಯ ಪಲ್ಲಕ್ಕಿ ಬಸ್‌ನಲ್ಲಿ ಸುಮಾರು 17 ಹೆಚ್ಚು ಪ್ರಯಾಣಿಕರು ಗದಗ ಕಡೆಗೆ ಪ್ರಯಾಣಿಸುತ್ತಿದ್ದರು. ಬ್ರೇಕ್ ಲೈನ್ ದೋಷದಿಂದ ಬೆಂಕಿ ಅವಘಡ ಸಂಭವಿಸಿದ್ದು ಎನ್ನಲಾಗಿದೆ.

ಕೂಡಲೇ ಎಚ್ಚೆತ್ತುಕೊಂಡ ಚಾಲಕ ಪಕ್ಕೀರಪ್ಪ ಬಸ್ ನ್ನು ನಿಲ್ಲಿಸಿದ್ದಾರೆ. ಅವರ ಸಮಯ ಪ್ರಜ್ಞೆಯಿಂದ ಎಲ್ಲಾ 17 ಪ್ರಯಾಣಿಕರ ಜೀವ ಉಳಿದಿದೆ.

ರಾಣೆಬೆನ್ನೂರು ಗ್ರಾಮೀಣ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ರಾಣೆಬೆನ್ನೂರು ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಹೆಚ್ಚಿನ ತನಿಖೆ ನಡೆಯುತ್ತಿದೆ.

Ksrtc bus driver Pakkirappa
ಬೆಂಗಳೂರು–ಮೈಸೂರು ಎಕ್ಸ್‌ಪ್ರೆಸ್‌ವೇ ಅಪಘಾತ: ಬಸ್'ಗೆ ಡಿಕ್ಕಿಯಾಗಿ ಕಾರು ಪಲ್ಟಿ; ಸೀಟ್‌ ಬೆಲ್ಟ್‌'ನಿಂದ ಬದುಕುಳಿದ ವೃದ್ದ ದಂಪತಿ..!

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

X

Advertisement

X
Kannada Prabha
www.kannadaprabha.com