ಸಂಪತ್ತು- ಆಡಳಿತ ಎಲ್ಲರಿಗೂ ಸಮಾನವಾಗಿ ಹಂಚಿಕೆಯಾಗಬೇಕು: ಸಾಮಾಜಿಕ ನ್ಯಾಯಕ್ಕೆ ಸರ್ಕಾರ ಬದ್ಧ- ಸಿದ್ದರಾಮಯ್ಯ

ಬಸವಣ್ಣನವರು ಬೋಧಿಸಿದಂತೆ ಸಾಮಾಜಿಕ ನ್ಯಾಯದಲ್ಲಿ ನಾನು ನಂಬಿಕೆಯಿರಿಸಿದ್ದೇನೆ. ರಾಜಕೀಯ ಸ್ವಾತಂತ್ರ್ಯ ಆರ್ಥಿಕ ಹಾಗೂ ಸಾಮಾಜಿಕ ಸ್ವಾತಂತ್ರ್ಯದ ತಳಹದಿಯ ಮೇಲೆ ನಿಂತಿದೆ. ಶಿಕ್ಷಣ ಪಡೆದಾಗ ಮಾತ್ರ ಸಾಮಾಜಿಕ ಆರ್ಥಿಕ ಶಕ್ತಿ ದೊರಕಲು ಸಾಧ್ಯ ಎಂದು ಹೇಳಿದರು.
CM Siddaramaiah
ಸಿಎಂ ಸಿದ್ದರಾಮಯ್ಯ
Updated on

ಮೈಸೂರು: ಆರ್ಥಿಕ ಹಾಗೂ ಸಾಮಾಜಿಕ ಶಕ್ತಿಗಾಗಿ ಶಿಕ್ಷಣ ಅಗತ್ಯವಾಗಿದ್ದು, ಭೋವಿ ಜನಾಂಗದವರು ಶಿಕ್ಷಣಕ್ಕೆ ಒತ್ತು ನೀಡಬೇಕೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಮೈಸೂರು ಜಿಲ್ಲಾಡಳಿತದಿಂದ ಆಯೋಜಿಸಿದ್ದ ಸಿದ್ದರಾಮೇಶ್ವರ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಮುಖ್ಯಮಂತ್ರಿ, ರಾಜ್ಯದಲ್ಲಿ ಸಮಸಮಾಜ ನಿರ್ಮಿಸುವ ಸಂಕಲ್ಪವನ್ನು ಸರ್ಕಾರ ಹೊಂದಿದೆ. ಉತ್ಪಾದಿಸಿದ ಸಂಪತ್ತು ಸಮಾನವಾಗಿ ಹಂಚಿಕೆಯಾಗಿಬೇಕು. ರಾಜ್ಯದ ಸರ್ವರಿಗೂ ಸಮಪಾಲು, ಸಮಬಾಳು ಸಿಗಬೇಕೆಂಬುದೇ ಸರ್ಕಾರದ ಉದ್ದೇಶ ಎಂದರು.

ಸಿದ್ದರಾಮೇಶ್ವವರೂ ಸೇರಿದಂತೆ ಸಂತಮಹಾಶಯರು, ಸಮಾಜದಲ್ಲಿ ಜಾತಿವರ್ಗಗಳ ವ್ಯವಸ್ಥೆಗಳು ತೊಲಗಬೇಕು ಎಂದು ಬಯಸಿದ್ದರು. ಬಸವಾದಿ ಶರಣರು 12 ನೇ ಶತಮಾನದಲ್ಲಿ ಸಮಾನತೆಯ ಸಿದ್ಧಾಂತವನ್ನು ಬೋಧಿಸಿದ್ದರು. ಶೋಷಣೆಗೊಳಗಾದ ಹಾಗೂ ಅವಕಾಶವಂಚಿತ ಸಮುದಾಯಗಳು ಸಂಘಟಿತರಾಗುವ ಸಮ್ಮೇಳನಗಳು ಉತ್ತಮ ಕಾರ್ಯಗಳಾಗಿವೆ ಎಂದು ತಿಳಿಸಿದರು.

ಬಸವಣ್ಣನವರು ಬೋಧಿಸಿದಂತೆ ಸಾಮಾಜಿಕ ನ್ಯಾಯದಲ್ಲಿ ನಾನು ನಂಬಿಕೆಯಿರಿಸಿದ್ದೇನೆ. ರಾಜಕೀಯ ಸ್ವಾತಂತ್ರ್ಯ ಆರ್ಥಿಕ ಹಾಗೂ ಸಾಮಾಜಿಕ ಸ್ವಾತಂತ್ರ್ಯದ ತಳಹದಿಯ ಮೇಲೆ ನಿಂತಿದೆ. ಶಿಕ್ಷಣ ಪಡೆದಾಗ ಮಾತ್ರ ಸಾಮಾಜಿಕ ಆರ್ಥಿಕ ಶಕ್ತಿ ದೊರಕಲು ಸಾಧ್ಯ ಎಂದು ಹೇಳಿದರು.

ಗ್ಯಾರಂಟಿ ಯೋಜನೆಗಳು ಮಹಿಳಾ ಸಮೂಹಕ್ಕೆ ವರದಾನ: ಆರ್ಥಿಕವಾಗಿ ಶಕ್ತಿಯಿಲ್ಲದವರಿಗೆ ಗ್ಯಾರಂಟಿ ಯೋಜನೆಗಳನ್ನು ಸಮಾನವಾಗಿ ನೀಡಲಾಗಿದೆ. ಮಹಿಳೆಯರಿಗೆ ಶಕ್ತಿ ಹಾಗೂ ಗೃಹಲಕ್ಷ್ಮಿ ಯೋಜನೆಯನ್ನು ಯಾವುದೇ ತಾರತಮ್ಯವಿಲ್ಲದೇ ನೀಡಲಾಗುತ್ತಿದೆ. ನಮ್ಮ ಸರ್ಕಾರ ಭೋವಿ ನಿಗಮವೂ ಸೇರಿದಂತೆ ವಿವಿಧ ಸಮುದಾಯಗಳ ಅಭಿವೃದ್ಧಿ ನಿಗಮಗಳ ಸಾಲವನ್ನು ಮನ್ನಾ ಮಾಡಲಾಗಿದೆ. ಪರಿಶಿಷ್ಟ ಜಾತಿಯ ಸಮುದಾಯಗಳಲ್ಲಿನ ಅಸಮಾನತೆ ಹೋಗಲಾಡಿಸಲು ಐತಿಹಾಸಿಕ ಒಳ ಮೀಸಲಾತಿಯನ್ನು ಜಾರಿಗೊಳಿಸಿದೆ ಎಡಗೈಗೆ ಶೇ. 5.25 , ಬಲಗೈಗೆ ಶೇ.5.25 ಹಾಗೂ ಇತರ ಉಪಜಾತಿಗಳಿಗೆ ಶೇ.4.5 ರಷ್ಟು ಹಂಚಿಕೆ ಮಾಡಲಾಗಿದೆ ಎಂದರು.

ಸರ್ಕಾರ ಸಾಮಾಜಿಕ ನ್ಯಾಯಕ್ಕೆ ಬದ್ಧ: ಈಗ ಜಾತಿ ಸಮೀಕ್ಷೆ ನಡೆಯುತ್ತಿದ್ದು, ಜಾತಿ ಸಮೀಕ್ಷೆ ವರದಿ ಬಂದ ನಂತರ ಚರ್ಚೆ ಮಾಡೋಣ ಎಂದರು. ನಮ್ಮ ಸರ್ಕಾರ ಸಾಮಾಜಿಕ ನ್ಯಾಯಕ್ಕೆ ಬದ್ಧವಾಗಿದೆ. ಯಾರಿಗೂ ಅನ್ಯಾಯವಾಗಬಾರದು, ನೂರಕ್ಕೆ ನೂರು ಅಲ್ಲದಿದ್ದರೂ 99% ನ್ಯಾಯ ಒದಗಿಸಲು ಪ್ರಯತ್ನಿಸಲಾಗುವುದು ಎಂದರು.

ಅವಕಾಶಗಳಿಂದ ಯಾರೂ ವಂಚಿತರಾಗಬಾರದು: ಸಮುದಾಯದವರು ಇಟ್ಟಿರುವ ಬೇಡಿಕೆಗಳನ್ನು ಈಡೇರಿಸುವ ಬಗ್ಗೆ ಭರವಸೆ ನೀಡಿದ ಮುಖ್ಯಮಂತ್ರಿಗಳು ಸಮುದಾಯದವರಿಗೆ ಕುಲಪತಿ, ವಿಧಾನ ಪರಿಷತ್ ಸದಸ್ಯ ಸ್ಥಾನ ನೀಡುವ ಬಗ್ಗೆ ಪರಿಶೀಲಿಸಲಾಗುವುದು ಎಂದರು.

CM Siddaramaiah
ಸಿಎಂ ಹುದ್ದೆ ತ್ಯಾಗಕ್ಕೆ ಸಿದ್ದರಾಮಯ್ಯ ಸಿದ್ದ: ಹೈಕಮಾಂಡ್ ಆದೇಶಕ್ಕೆ ಪರಮೇಶ್ವರ್ ಬದ್ಧ; ಮುಖ್ಯಮಂತ್ರಿ ಸ್ಥಾನ ಒಲ್ಲೆ ಎಂದಿದ್ದೇಕೆ ಖರ್ಗೆ?

ಏಳು ಕೋಟಿ ಜನರಿಗೂ ನ್ಯಾಯ ಸಿಗಬೇಕು ಹಾಗೂ ಯಾರೂ ಅವಕಾಶಗಳಿಂದ ವಂಚಿತರಾಗಬಾರದು ಎಂದರು. ಸಂವಿಧಾನ ರಚನೆಯಾದ ನಂತರ ಸಮಾನತೆಯನ್ನು ಸಾಧಿಸುವತ್ತ ದೇಶ ಸಾಗಿದ್ದು, ಸಂವಿಧಾನ ಹೇಳುವಂತೆಯೇ ನಡೆದುಕೊಳ್ಳುತ್ತೇವೆ ಎಂದು ತಿಳಿಸಿದರು.

ಸಹಿಷ್ಣುತೆಯನ್ನು ರೂಡಿಸಿಕೊಳ್ಳಬೇಕು: ಸ್ವಾತಂತ್ರ್ಯ ಸಮಾನತೆ ಮತ್ತು ಭ್ರಾತೃತ್ವ ಸಂವಿಧಾನದ ಮೂಲ ತತ್ವಗಳು. ಜಡತ್ವದಿಂದ ಕೂಡಿರುವ ಜಾತಿ ವ್ಯವಸ್ಥೆಯನ್ನು ಸುಧಾರಿಸಬೇಕಿದೆ. ಎಲ್ಲಾ ಜಾತಿಗಳನ್ನು ಪ್ರೀತಿಸಿ, ಅವರೂ ನಮ್ಮನ್ನು ಪ್ರೀತಿಸುವಂತೆ ಮಾಡಬೇಕು ಹಾಗೂ ಸಹಿಷ್ಣುತೆಯನ್ನು ರೂಡಿಸಿಕೊಳ್ಳಬೇಕು. ಉತ್ಪಾದನೆಯಲ್ಲಿ ಎಲ್ಲರೂ ಭಾಗವಹಿ ಉತ್ಪನ್ನವನ್ನು ಸಮಾನವಾಗಿ ಹಂಚಿಕೊಳ್ಳಬೇಕು ಎಂದು ಸಿದ್ಧರಾಮೇಶ್ವರರು ನಮಗೆ ಬೋಧಿಸಿದ್ದರು. ಅವರು ನಡೆದ ಹಾದಿಯಲ್ಲಿಯೇ ನಮ್ಮ ಸರ್ಕಾರವೂ ನಡೆಯುತ್ತಿದೆ ಎಂದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

X

Advertisement

X
Kannada Prabha
www.kannadaprabha.com