ನಟ ದರ್ಶನ್ ವಿರುದ್ಧದ 'ಮಾಧ್ಯಮ ವಿಚಾರಣೆ'ಗೆ ಹೈಕೋರ್ಟ್ ಆಕ್ಷೇಪ; ಕ್ರಮ ಕೈಗೊಳ್ಳಲು ಕೇಂದ್ರಕ್ಕೆ ಸೂಚನೆ

ಮಾಧ್ಯಮಗಳು ನ್ಯಾಯಾಧೀಶರಾಗಲು, ತೀರ್ಪುಗಾರರಾಗಲು ಅಥವಾ ಶಿಕ್ಷೆ ವಿಧಿಸಲು ಸಾಧ್ಯವಿಲ್ಲ ಎಂದು ಹೈಕೋರ್ಟ್ ಹೇಳಿದ್ದು, ನ್ಯಾಯಯುತ ವಿಚಾರಣೆಯ ಹಕ್ಕಿಗೆ ಧಕ್ಕೆ ಉಂಟುಮಾಡುವ ಮಾಧ್ಯಮ ಪ್ರಸಾರಗಳನ್ನು ಕಟ್ಟುನಿಟ್ಟಾಗಿ ತಡೆಯಬೇಕೆಂದು ಹೇಳಿದೆ.
High court
ಹೈಕೋರ್ಟ್online desk
Updated on

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದ ವಿಚಾರಣೆಯಲ್ಲಿ ನಟ ದರ್ಶನ್ ವಿರುದ್ಧದ 'ಮಾಧ್ಯಮ ವಿಚಾರಣೆ' (Media Trial) ಗಳ ಬಗ್ಗೆ ಕರ್ನಾಟಕ ಹೈಕೋರ್ಟ್ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದು, ಕ್ರಮ ಕೈಗೊಳ್ಳಲು ಕೇಂದ್ರಕ್ಕೆ ಸೂಚನೆ ನೀಡಿದೆ.

ಮಾಧ್ಯಮಗಳು ನ್ಯಾಯಾಧೀಶರಾಗಲು, ತೀರ್ಪುಗಾರರಾಗಲು ಅಥವಾ ಶಿಕ್ಷೆ ವಿಧಿಸಲು ಸಾಧ್ಯವಿಲ್ಲ ಎಂದು ಹೈಕೋರ್ಟ್ ಹೇಳಿದ್ದು, ನ್ಯಾಯಯುತ ವಿಚಾರಣೆಯ ಹಕ್ಕಿಗೆ ಧಕ್ಕೆ ಉಂಟುಮಾಡುವ ಮಾಧ್ಯಮ ಪ್ರಸಾರಗಳನ್ನು ಕಟ್ಟುನಿಟ್ಟಾಗಿ ತಡೆಯಬೇಕೆಂದು ಹೇಳಿದೆ.

ಕೋರ್ಟ್ ಎದುರಿಗಿರುವ ದಾಖಲೆಗಳು, ಪ್ರಸಾರ ಮಾಧ್ಯಮಗಳು ನ್ಯಾಯಾಲಯದ ಕಲಾಪಗಳನ್ನು ಪುನರ್ನಿರ್ಮಿಸುವ ಮಟ್ಟಿಗೆ ಹೋಗುವ ಆತಂಕಕಾರಿ ಪ್ರವೃತ್ತಿಯನ್ನು ತೋರಿಸುತ್ತಿದೆ. ಮಾಧ್ಯಮಗಳು ಕೋರ್ಟ್ ಕಲಾಪಗಳನ್ನು ಮರು ಸೃಷ್ಟಿ ಮಾಡುತ್ತಿದ್ದು, ನ್ಯಾಯಾಧೀಶರ ಮುಖವನ್ನು ಮಾತ್ರ ಮರೆಮಾಡಲಾಗುತ್ತದೆ ಮತ್ತು ಆರೋಪಿಗಳು ಮತ್ತು ವಕೀಲರ ಮುಖಗಳನ್ನು ಬಹಿರಂಗವಾಗಿ ಪ್ರದರ್ಶಿಸಲಾಗುತ್ತದೆ. ಇಂತಹ ಕಾರ್ಯಕ್ರಮಗಳನ್ನು ಪ್ರತಿ ವಿಚಾರಣೆಯ ದಿನಾಂಕದಂದು ಪ್ರಸಾರ ಮಾಡಲಾಗುತ್ತದೆ, ಬಾಕಿ ಇರುವ ನ್ಯಾಯಾಂಗ ಕಲಾಪಗಳನ್ನು ಸಾರ್ವಜನಿಕ ಪ್ರದರ್ಶನದ ರೂಪವಾಗಿ ಪರಿವರ್ತಿಸುತ್ತದೆ ಎಂದು ಕರ್ನಾಟಕ ಹೈಕೋರ್ಟ್ ಹೇಳಿದೆ.

High court
ನಟ ದರ್ಶನ್ ಗೆ ಬಿಗ್ ಶಾಕ್: ಸದ್ಯಕ್ಕಿಲ್ಲ ಜಾಮೀನು; 1 ವರ್ಷದೊಳಗೆ ವಿಚಾರಣೆ ಮುಗಿಸಲು ಸುಪ್ರೀಂ ಕೋರ್ಟ್ ಆದೇಶ

ರೇಣುಕಸ್ವಾಮಿ ಕೊಲೆ ಪ್ರಕರಣದಲ್ಲಿ ತಡೆಯಾಜ್ಞೆ ಆದೇಶ ಮತ್ತು ಕಾರ್ಯಕ್ರಮ ಸಂಹಿತೆಯನ್ನು ಉಲ್ಲಂಘಿಸಿದ್ದಕ್ಕಾಗಿ ಕೆಲವು ಮಾಧ್ಯಮ ಸಂಸ್ಥೆಗಳ ವಿರುದ್ಧ ನಟ ದರ್ಶನ್ 'ಮಾಧ್ಯಮ ವಿಚಾರಣೆ' ಆರೋಪ ಹೊರಿಸಿ ದೂರು ಸಲ್ಲಿಸಿದ್ದರು. ಈ ಅರ್ಜಿ ವಿಚಾರಣೆ ವೇಳೆ ಹೈಕೋರ್ಟ್ "ಮಾಧ್ಯಮ ವಿಚಾರಣೆ" ಬಗ್ಗೆ ಆಕ್ಷೇಪ ವ್ಯಕ್ತಪಡಿಸಿದೆ.

ದೂರಿನ ಮೇಲೆ ಕ್ರಮ ಕೈಗೊಳ್ಳುವಂತೆ ಮಾಹಿತಿ ಮತ್ತು ಪ್ರಸಾರ ಸಚಿವಾಲಯ ಮತ್ತು ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯಕ್ಕೆ ಇದೇ ವೇಳೆ ನಿರ್ದೇಶನ ನೀಡಿದೆ. ಈ ಪ್ರಕರಣದಲ್ಲಿ ಮಾಧ್ಯಮ ವರದಿ ಮತ್ತು ಪ್ರಸಾರ, ಪ್ರಾಥಮಿಕವಾಗಿ, ಕೇಬಲ್ ಟೆಲಿವಿಷನ್ ನೆಟ್‌ವರ್ಕ್ ನಿಯಮಗಳು, 1994 ರ ಅಡಿಯಲ್ಲಿ ಕಾರ್ಯಕ್ರಮ ಸಂಹಿತೆಯ ನಿಯಮ 6 ನ್ನು ಉಲ್ಲಂಘಿಸುತ್ತದೆ ಎಂದು ನ್ಯಾಯಾಲಯ ಅಭಿಪ್ರಾಯಪಟ್ಟಿದೆ. ಜೊತೆಗೆ ನ್ಯಾಯದ ಆಡಳಿತದಲ್ಲಿ ಹಸ್ತಕ್ಷೇಪ ಮತ್ತು ಅಸ್ತಿತ್ವದಲ್ಲಿರುವ ನ್ಯಾಯಾಂಗ ಆದೇಶಗಳ ಉಲ್ಲಂಘನೆಯಾಗಿದೆ ಎಂದು ಕೋರ್ಟ್ ಹೇಳಿದೆ.

ದೂರಿನ ಮೇರೆಗೆ ತನಿಖೆ ನಡೆಸಿ ಕ್ರಮ ಕೈಗೊಳ್ಳಲು ನಿರ್ದೇಶನಗಳನ್ನು ಕೋರಿ ಜನವರಿ 16, 2026 ರಂದು ದರ್ಶನ್ ಅವರು ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಸಚಿನ್ ಶಂಕರ್ ಮಗದುಮ್ ಇತ್ತೀಚೆಗೆ ಅಂಗೀಕರಿಸಿದ್ದರು. ವಿವಿಧ ಟಿವಿ ಚಾನೆಲ್‌ಗಳು ಮತ್ತು ಡಿಜಿಟಲ್ ಪ್ಲಾಟ್‌ಫಾರ್ಮ್‌ಗಳು ಮಾಧ್ಯಮ ಆಧಾರಿತ ತೀರ್ಪು ನೀಡುವಿಕೆ, ಊಹಾತ್ಮಕ ನಿರೂಪಣೆಗಳನ್ನು ಪ್ರಸಾರ ಮಾಡುವುದು, ಆಯ್ದ ಸೋರಿಕೆಯಾದ ಅಂಶಗಲು ಮತ್ತು ಪರಿಶೀಲಿಸದ ಆರೋಪಗಳಲ್ಲಿ ತೊಡಗಿವೆ. ನ್ಯಾಯಾಲಯಗಳಿಗೆ ಸಂಬಂಧಿಸಿದಂತೆ ಸಾರ್ವಜನಿಕ ಗ್ರಹಿಕೆಯನ್ನು ರೂಪಿಸುತ್ತಿವೆ ಮತ್ತು ಅರ್ಜಿದಾರರ ನ್ಯಾಯಯುತ ವಿಚಾರಣೆಯ ಹಕ್ಕನ್ನು ದುರ್ಬಲಗೊಳಿಸಿವೆ ಎಂದು ಆರೋಪಿಸಿ ದರ್ಶನ್ ಸಲ್ಲಿಸಿದ್ದ ಅರ್ಜಿಯನ್ನು ಭಾಗಶಃ ಅಂಗೀಕರಿಸಲಾಯಿತು.

ನ್ಯಾಯಾಲಯ ಇಂಥಹ ಪ್ರವೃತ್ತಿ ಮಾಧ್ಯಮ ಆಧಾರಿತ ತೀರ್ಪು, ಕೋರ್ಟ್ ಗೆ ಸಮಾನಾಂತರ ನಿರೂಪಣೆಯನ್ನು ಬೆಳೆಸುವುದು ಮತ್ತು ಪೂರ್ವಾಗ್ರಹ ಪೀಡಿತ ಪೂರ್ವ-ವಿಚಾರಣಾ ಪ್ರಚಾರವನ್ನು ಹುಟ್ಟುಹಾಕುವುದಾಗಿದೆ ಎಂದು ಹೇಳಿದೆ. ತಡೆಯಾಜ್ಞೆಯ ಆದೇಶಗಳ ಹೊರತಾಗಿಯೂ, ಅಂತಹ ವಿಷಯದ ನಿರಂತರ ಪ್ರಸಾರ ಮಾಡುವುದು ಮಾಧ್ಯಮಗಳಲ್ಲಿ ನ್ಯಾಯಾಂಗ ಅಧಿಕಾರದ ಕುರಿತು ನಿರ್ಲಕ್ಷ್ಯವನ್ನು ಪ್ರತಿಬಿಂಬಿಸುತ್ತದೆ ನ್ಯಾಯಾಂಗದಲ್ಲಿ ಹಸ್ತಕ್ಷೇಪ ಮತ್ತು ಪ್ರಾಥಮಿಕವಾಗಿ ನ್ಯಾಯಾಲಯದ ತಿರಸ್ಕಾರಕ್ಕೆ ಸಮಾನವಾಗಿದೆ" ಎಂದು ಕೋರ್ಟ್ ಎಚ್ಚರಿಕೆ ನೀಡಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

X

Advertisement

X
Kannada Prabha
www.kannadaprabha.com