

ಕೋಲಾರ: ಕೃಷಿ ಹೊಂಡದಲ್ಲಿ ಈಜಾಡಲು ತೆರಳಿದ್ದಾಗ ತಂದೆ ಹಾಗೂ ಇಬ್ಬರು ಮಕ್ಕಳು ಜಲಸಮಾಧಿಯಾಗಿರುವ ದಾರುಣ ಘಟನೆ ಮಾಲೂರಿನ ನಕ್ಕನಹಳ್ಳಿ ಗ್ರಾಮದಲ್ಲಿ ನಡೆದಿದೆ. ಮೃತರನ್ನು 40 ವರ್ಷದ ತಂದೆ ಶ್ರೀನಿವಾಸ್, ಮಕ್ಕಳಾದ 13 ವರ್ಷದ ಚೇತನ್ ಮತ್ತು 8 ವರ್ಷದ ರಾಜೇಶ್ ಎಂದು ಗುರುತಿಸಲಾಗಿದೆ. ಭೈರಪ್ಪ ಎಂಬುವರಿಗೆ ಸೇರಿದ ಕೃಷಿ ಹೊಂಡದಲ್ಲಿ ಮಕ್ಕಳಿಗೆ ಈಜು ಕಳಿಸಲು ಕರೆದುಕೊಂಡು ಹೋಗುತ್ತಿದ್ದಾಗ ಕಾಲು ಜಾರಿ ಮೂವರು ನೀರಿಗೆ ಬಿದ್ದಿದ್ದಾರೆ. ಮೇಲೆ ಬರಲು ಆಗದೇ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ. ಮಾಸ್ತಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
Advertisement