ಬೋಗಸ್ ದಾಖಲೆ ಸೃಷ್ಟಿಸಿ 23 ಕೋಟಿ ರೂ ಲೂಟಿ; ಬೆಳಗಾವಿ ಕೊಳಚೆ ನಿರ್ಮೂಲನಾ ಮಂಡಳಿಗೆ ಸೇರಿದ 8 ಕಡೆ ಲೋಕಾಯುಕ್ತ ದಾಳಿ!

ಬೆಳಗಾವಿ ಕೊಳಚೆ ನಿರ್ಮೂಲನಾ ಮಂಡಳಿಗೆ ಸೇರಿದ 8 ಕಡೆ ಇಂದು ಲೋಕಾಯಕ್ತ ಅಧಿಕಾರಿಗಳು ದಾಳಿ ನಡೆಸಿದ್ದರು. 600 ಮನೆಗಳ ನಿರ್ಮಾಣಕ್ಕೆಂದು 33 ಕೋಟಿ ರೂಪಾಯಿ ಅನುದಾನ ನೀಡಲಾಗಿತ್ತು.
Karnataka Lokayukta
ಕರ್ನಾಟಕ ಲೋಕಾಯುಕ್ತ
Updated on

ಬೆಳಗಾವಿ: ಬೆಳಗಾವಿ ಕೊಳಚೆ ನಿರ್ಮೂಲನಾ ಮಂಡಳಿಗೆ ಸೇರಿದ 8 ಕಡೆ ಇಂದು ಲೋಕಾಯಕ್ತ ಅಧಿಕಾರಿಗಳು ದಾಳಿ ನಡೆಸಿದ್ದರು. 600 ಮನೆಗಳ ನಿರ್ಮಾಣಕ್ಕೆಂದು 33 ಕೋಟಿ ರೂಪಾಯಿ ಅನುದಾನ ನೀಡಲಾಗಿತ್ತು. ಮನೆಗಳನ್ನು ನಿರ್ಮಿಸದೇ ಅನುದಾನದಲ್ಲಿ 23 ಕೋಟಿ ರೂಪಾಯಿ ಗುಳುಂ ಮಾಡಿದ್ದಾರೆ ಎಂದು ದೂರು ದಾಖಲಾಗಿತ್ತು. ಈ ದೂರಿನ ಅನ್ವಯ ಬೆಳಗಾವಿ ಲೋಕಾಯುಕ್ತ ಎಸ್ಪಿ ಪ್ರಶನ್ ದೇಸಾಯಿ ನೇತೃತ್ವದಲ್ಲಿ ಬೆಂಗಳೂರು ನಗರ, ಧಾರವಾಡ, ರಾಮದುರ್ಗ, ವಿಜಯಪುರ, ಹುಬ್ಬಳ್ಳಿ ಸೇರಿದಂತೆ ಬೆಳಗಾವಿ ಕೊಳಚೆ ನಿರ್ಮೂಲನಾ ಮಂಡಳಿಗಳಿಗೆ ಸೇರಿದ 8 ಕಡೆಗಳಲ್ಲಿ ದಾಳಿ ಮಾಡಿದ್ದರು.

ದಾಳಿ ವೇಳೆ ಕೋಟ್ಯಂತರ ರೂ. ಮೌಲ್ಯದ ಬಿಲ್​​​ಗಳು ಸೇರಿ ಮಹತ್ವದ ದಾಖಲೆಗಳನ್ನ ಜಪ್ತಿ ಮಾಡಿದ್ದಾರೆ. ಕೊಳಚೆ ನಿರ್ಮೂಲನಾ ಅಭಿವೃದ್ಧಿ ಇಲಾಖೆ ನಿವೃತ್ತ ಎಇಇ ಶಂಭುಲಿಂಗಪ್ಪ, ಎಕ್ಸಿಕ್ಯೂಟಿವ್ ಇಂಜಿನಿಯರ್ ಲಮಾಣಿ, NTCC ಮ್ಯಾನೇಜರ್ ಎನ್.ಪ್ರಸಾದ್, ವಿಜಯಪುರ ಗುತ್ತಿಗೆದಾರ ಗಿರಮಲಪ್ಪ ಜೋಗೂರ ವಿರುದ್ಧ ಪ್ರಕರಣ ದಾಖಲಾಗಿದೆ.

Karnataka Lokayukta
ವಚನಾನಂದಶ್ರೀ ವಿರುದ್ಧದ Pocso ಪ್ರಕರಣ: ತನಿಖಾಧಿಕಾರಿ PSI ಮಂಜುಳಾ ದಿಢೀರ್ ವರ್ಗಾವಣೆ!

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com