ವಚನಾನಂದಶ್ರೀ ವಿರುದ್ಧದ Pocso ಪ್ರಕರಣ: ತನಿಖಾಧಿಕಾರಿ PSI ಮಂಜುಳಾ ದಿಢೀರ್ ವರ್ಗಾವಣೆ!

Pocso ಪ್ರಕರಣ ಎದುರಿಸುತ್ತಿರುವ ಹರಿಹರ ಪಂಚಮಸಾಲಿ ಪೀಠದ ವಚನಾನಂದ ಶ್ರೀಗಳನ್ನು ಎರಡು ಬಾರಿ ವಿಚಾರಣೆಗೂ ಒಳಪಡಿಸಲಾಗಿದೆ.
Vachanananda swamiji, PSI Manjula
ವಚನಾನಂದ ಸ್ವಾಮೀಜಿ, ಪಿಎಸ್ ಐ ಮಂಜುಳಾ
Updated on

ದಾವಣಗೆರೆ: Pocso ಪ್ರಕರಣ ಎದುರಿಸುತ್ತಿರುವ ಹರಿಹರ ಪಂಚಮಸಾಲಿ ಪೀಠದ ವಚನಾನಂದ ಶ್ರೀಗಳನ್ನು ಎರಡು ಬಾರಿ ವಿಚಾರಣೆಗೂ ಒಳಪಡಿಸಲಾಗಿದೆ. ಇನ್ನು ಪ್ರಕರಣದ ತನಿಖೆ ಚುರುಕುಗೊಳ್ಳುತ್ತಿದ್ದಂತೆ ತನಿಖಾಧಿಕಾರಿಯನ್ನು ದಿಢೀರ್ ವರ್ಗಾವಣೆ ಮಾಡಿ ದಾವಣಗೆರೆ ಎಸ್‌ಪಿ ಎಚ್ ಟಿ ಶೇಖರ್ ಆದೇಶ ಹೊರಡಿಸಿದ್ದಾರೆ.

ಪಂಚಮಸಾಲಿ ಪೀಠ ಟ್ರಸ್ಟ್​​ನ ಪದಾಧಿಕಾರಿಗಳು ಪ್ರಕರಣದ ತನಿಖೆ ಸರಿಯಾಗಿ ಮಾಡುತ್ತಿಲ್ಲ ಎಂದು ಪೂರ್ವ ವಲಯ ಐಜಿಪಿ ಬಿ.ಆರ್.ರವಿಕಾಂತೇಗೌಡ ಅವರಿಗೆ ದೂರು ನೀಡಿದ್ದರು. ಈ ದೂರಿನ ಮೇರೆಗೆ ತನಿಖಾಧಿಕಾರಿಯನ್ನು ಬದಲಾಯಿಸುವಂತೆ ಎಸ್ಪಿಗೆ ಸೂಚಿಸಿದ್ದರು. ಈ ಸೂಚನೆ ಮೇರೆಗೆ ಪಿಎಸ್‌ಐ ಮಂಜುಳಾ ಅವರನ್ನು ವರ್ಗಾವಣೆ ಮಾಡಿ ಅವರ ಜಾಗಕ್ಕೆ ದಾವಣಗೆರೆಯ ಆಜಾದ್‌ನಗರ ಠಾಣೆಯ ಪಿಎಸ್‌ಐ ಜಯರತ್ನಮ್ಮ ಅವರನ್ನ ನೇಮಕ ಮಾಡಿದ್ದಾರೆ.

Vachanananda swamiji, PSI Manjula
ಉಡುಪಿ: ಮತಾಂತರಗೊಂಡಿದ್ದ Hindu ಯುವತಿ ಮಾತು ಕೇಳಿ ಬಿಜೆಪಿಗರಿಗೆ ಉಪದೇಶ ಕೊಟ್ಟಿದ್ದ ಲಕ್ಷ್ಮೀ ಹೆಬ್ಬಾಳ್ಕರ್ ನಾಗೆಪಾಟಲು!

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

X

Advertisement

X
Kannada Prabha
www.kannadaprabha.com