

ದಾವಣಗೆರೆ: Pocso ಪ್ರಕರಣ ಎದುರಿಸುತ್ತಿರುವ ಹರಿಹರ ಪಂಚಮಸಾಲಿ ಪೀಠದ ವಚನಾನಂದ ಶ್ರೀಗಳನ್ನು ಎರಡು ಬಾರಿ ವಿಚಾರಣೆಗೂ ಒಳಪಡಿಸಲಾಗಿದೆ. ಇನ್ನು ಪ್ರಕರಣದ ತನಿಖೆ ಚುರುಕುಗೊಳ್ಳುತ್ತಿದ್ದಂತೆ ತನಿಖಾಧಿಕಾರಿಯನ್ನು ದಿಢೀರ್ ವರ್ಗಾವಣೆ ಮಾಡಿ ದಾವಣಗೆರೆ ಎಸ್ಪಿ ಎಚ್ ಟಿ ಶೇಖರ್ ಆದೇಶ ಹೊರಡಿಸಿದ್ದಾರೆ.
ಪಂಚಮಸಾಲಿ ಪೀಠ ಟ್ರಸ್ಟ್ನ ಪದಾಧಿಕಾರಿಗಳು ಪ್ರಕರಣದ ತನಿಖೆ ಸರಿಯಾಗಿ ಮಾಡುತ್ತಿಲ್ಲ ಎಂದು ಪೂರ್ವ ವಲಯ ಐಜಿಪಿ ಬಿ.ಆರ್.ರವಿಕಾಂತೇಗೌಡ ಅವರಿಗೆ ದೂರು ನೀಡಿದ್ದರು. ಈ ದೂರಿನ ಮೇರೆಗೆ ತನಿಖಾಧಿಕಾರಿಯನ್ನು ಬದಲಾಯಿಸುವಂತೆ ಎಸ್ಪಿಗೆ ಸೂಚಿಸಿದ್ದರು. ಈ ಸೂಚನೆ ಮೇರೆಗೆ ಪಿಎಸ್ಐ ಮಂಜುಳಾ ಅವರನ್ನು ವರ್ಗಾವಣೆ ಮಾಡಿ ಅವರ ಜಾಗಕ್ಕೆ ದಾವಣಗೆರೆಯ ಆಜಾದ್ನಗರ ಠಾಣೆಯ ಪಿಎಸ್ಐ ಜಯರತ್ನಮ್ಮ ಅವರನ್ನ ನೇಮಕ ಮಾಡಿದ್ದಾರೆ.
Advertisement