ಕರ್ನಾಟಕದಲ್ಲಿ ರೈತರ ಆತ್ಮಹತ್ಯೆಗಳ ಅಂಕಿಅಂಶಗಳನ್ನು ರಾಜ್ಯ ಸರ್ಕಾರ ಮುಚ್ಚಿಟ್ಟಿದೆ: H D ಕುಮಾರಸ್ವಾಮಿ

ಮೂರು ವರ್ಷಗಳ ಆಡಳಿತೋತ್ಸವವನ್ನು ಆಚರಿಸುತ್ತಿರುವ ರಾಜ್ಯ ಸರ್ಕಾರಕ್ಕೆ ರೈತರ ಕಲ್ಯಾಣದ ಬಗ್ಗೆ ಯಾವುದೇ ಆಸಕ್ತಿ ಇರುವಂತೆ ಕಾಣುತ್ತಿಲ್ಲ ಎಂದು ಹೇಳಿದ್ದಾರೆ.
H D  Kumaraswamy and Siddaramaiah
ಹೆಚ್ ಡಿ ಕುಮಾರಸ್ವಾಮಿ, ಸಿದ್ದರಾಮಯ್ಯ
Updated on

ಬೆಂಗಳೂರು: ರಾಜ್ಯದಲ್ಲಿ ರೈತರ ಆತ್ಮಹತ್ಯೆಗಳ ಅಂಕಿಅಂಶಗಳನ್ನು ರಾಜ್ಯ ಸರ್ಕಾರ ಮುಚ್ಚಿಟ್ಟಿದೆ ಎಂದು ಕೇಂದ್ರ ಉಕ್ಕು ಮತ್ತು ಭಾರೀ ಕೈಗಾರಿಕಾ ಸಚಿವ ಹೆಚ್ ಡಿ ಕುಮಾರಸ್ವಾಮಿ ಆರೋಪಿಸಿದ್ದಾರೆ.

ಮೂರು ವರ್ಷಗಳ ಆಡಳಿತೋತ್ಸವವನ್ನು ಆಚರಿಸುತ್ತಿರುವ ರಾಜ್ಯ ಸರ್ಕಾರಕ್ಕೆ ರೈತರ ಕಲ್ಯಾಣದ ಬಗ್ಗೆ ಯಾವುದೇ ಆಸಕ್ತಿ ಇರುವಂತೆ ಕಾಣುತ್ತಿಲ್ಲ ಎಂದು ಹೇಳಿದ್ದಾರೆ.

ರಾಜ್ಯ ಸರ್ಕಾರ ರೈತರ ಜೀವಗಳ ಮೇಲೆ ಸಮಾಧಿ ಕಟ್ಟಿದೆ. ಈಗ ತುಮಕೂರಿನಲ್ಲಿ ಸಂಭ್ರಮಾಚರಣೆ ಮಾಡಿದೆ. ಜನರು ಅವರನ್ನು ಎಂದಿಗೂ ಕ್ಷಮಿಸುವುದಿಲ್ಲ. ಪ್ರತಿದಿನ ರೈತರು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ. ಆದರೆ ಸರ್ಕಾರ ಗ್ಯಾರಂಟಿಗಳ ಹೆಸರಿನಲ್ಲಿ ಹಬ್ಬ ಮಾಡುತ್ತಿದೆ. ಈ ಗ್ಯಾರಂಟಿಗಳು ನಿಜವಾಗಿಯೂ ಪರಿಣಾಮಕಾರಿ ಆಗಿದ್ದರೆ, ರೈತರು ಆತ್ಮಹತ್ಯೆ ಮಾಡಿಕೊಳ್ಳುವುದೇಕೆ ಎಂದು ಅವರು ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡುವ ವೇಳೆ ಪ್ರಶ್ನಿಸಿದರು.

H D  Kumaraswamy and Siddaramaiah
Karnataka: ರಾಜ್ಯದಲ್ಲಿ 16 ತಿಂಗಳಲ್ಲಿ 981 ರೈತರ ಆತ್ಮಹತ್ಯೆ! ಆರೋಪ, ಪ್ರತ್ಯಾರೋಪದಲ್ಲಿ ಬಿಜೆಪಿ, ಕಾಂಗ್ರೆಸ್

ರಾಷ್ಟ್ರೀಯ ಅಪರಾಧ ದಾಖಲೆ ಬ್ಯೂರೋ (NCRB) ಅಂಕಿಅಂಶಗಳನ್ನು ಉಲ್ಲೇಖಿಸಿದ ಜೆಡಿಎಸ್ ನಾಯಕರು, ಕರ್ನಾಟಕದಲ್ಲಿ 2023ರಲ್ಲಿ 2,423 ರೈತರು ಆತ್ಮಹತ್ಯೆ ಮಾಡಿಕೊಂಡಿದ್ದು, 2024ರಲ್ಲಿ ಈ ಸಂಖ್ಯೆ 2,971ಕ್ಕೆ ಏರಿಕೆಯಾಗಿದೆ. ಈ ಮೂಲಕ ರಾಜ್ಯ ದೇಶದಲ್ಲಿ ಎರಡನೇ ಸ್ಥಾನದಲ್ಲಿದೆ ಎಂದು ಹೇಳಿದರು.

ತುಮಕೂರಿನ ಸಮಾವೇಶಕ್ಕಾಗಿ ಕೋಟ್ಯಂತರ ರೂಪಾಯಿ ವೆಚ್ಚ ಮಾಡಲಾಗುತ್ತಿದೆ. ಕಾರ್ಯಕ್ರಮಕ್ಕೆ ನಿಗದಿತ ಸಂಖ್ಯೆಯ ಜನರನ್ನು ಕರೆತರಲು ಅಧಿಕಾರಿಗಳಿಗೆ ಗುರಿ ನೀಡಲಾಗಿದೆ. ಕಾಂಗ್ರೆಸ್ ತನ್ನ ಲಾಭಕ್ಕಾಗಿ ಸರ್ಕಾರಿ ಅಧಿಕಾರಿಗಳನ್ನು ದುರುಪಯೋಗಪಡಿಸಿಕೊಳ್ಳುತ್ತಿದೆ ಎಂದು ಆರೋಪಿಸಿದರು.

ಕಂದಾಯ ಇಲಾಖೆಗೆ ಸಂಬಂಧಿಸಿದ ಹಲವು ವಿಷಯಗಳನ್ನು ಸರ್ಕಾರ ಅತಿಯಾಗಿ ಪ್ರಚಾರ ಮಾಡುತ್ತಿದೆ ಎಂದು ಟೀಕಿಸಿದರು. ಕಳೆದ ವರ್ಷವೂ ಸರ್ಕಾರ ಮುಖ್ಯವಾಗಿ ಹಕ್ಕುಪತ್ರಗಳ ವಿಷಯವನ್ನೇ ಚರ್ಚಿಸಿತು. ನಮ್ಮನ್ನು ಸಂಪರ್ಕಿಸುವ ರೈತರು ಕಂದಾಯ ಇಲಾಖೆಯ ಸಮಸ್ಯೆಗಳ ಬಗ್ಗೆ ಪದೇಪದೇ ದೂರು ನೀಡುತ್ತಿದ್ದಾರೆ. ಸರ್ಕಾರ ಈಗ ‘ಭೂ ಗ್ಯಾರಂಟಿ’ಯನ್ನು ಆರನೇ ಗ್ಯಾರಂಟಿ ಯೋಜನೆ ಎಂದು ಘೋಷಿಸಿ ಉಚಿತ ಪ್ರಚಾರ ಪಡೆಯುತ್ತಿದೆ. ಆದರೆ ರಾಜ್ಯದಲ್ಲಿ ನಿರಂತರವಾಗಿ ನಡೆಯುತ್ತಿರುವ ರೈತರ ಆತ್ಮಹತ್ಯೆಗಳ ಸರಣಿ ಈ ಸರ್ಕಾರದ ನಿಜವಾದ ಸಾಮರ್ಥ್ಯವನ್ನು ಬಯಲಿಗೆಳೆಯುತ್ತಿದೆ ಎಂದು ಅವರು ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

X

Advertisement

X
Kannada Prabha
www.kannadaprabha.com