ಪೆಟ್ರೋಲ್ , ಡೀಸೆಲ್ ಬೆಲೆ ಏರಿಕೆ: ರಾಜಕೀಯ ಮಾಡ್ಬೇಡಿ, Vat ಕಡಿಮೆ ಮಾಡಿ- ಸಿಎಂ ಸಿದ್ದರಾಮಯ್ಯಗೆ ಆಶೋಕ್ ಒತ್ತಾಯ!

ರಾಜ್ಯ ಸರ್ಕಾರ ವಿಧಿಸಿರುವ ಹೆಚ್ಚಿನ ವ್ಯಾಟ್‌ನಿಂದಾಗಿ ಕರ್ನಾಟಕದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ದೆಹಲಿ ಸೇರಿದಂತೆ ಇತರ ಹಲವು ರಾಜ್ಯಗಳಲ್ಲಿನ ಇಂಧನ ಬೆಲೆಗಳಿಗಿಂತ ಹೆಚ್ಚಾಗಿದೆ ಎಂದು ವಿರೋಧ ಪಕ್ಷದ ನಾಯಕ ಆರ್ ಅಶೋಕ್ ಆರೋಪಿಸಿದ್ದಾರೆ.
R. Ashok
ಆರ್. ಅಶೋಕ್
Updated on

ಬೆಂಗಳೂರು: ಇಂಧನ ಬೆಲೆ ಏರಿಕೆಯನ್ನು ಕಾಂಗ್ರೆಸ್ ನಾಯಕರು ರಾಜಕೀಯಗೊಳಿಸುತ್ತಿದ್ದಾರೆ ಎಂದು ವಿರೋಧ ಪಕ್ಷ ಬಿಜೆಪಿ ಆರೋಪಿಸಿದೆ. ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಮೌಲ್ಯವರ್ಧಿತ ತೆರಿಗೆ (ವ್ಯಾಟ್) ಕಡಿಮೆ ಮಾಡಬೇಕೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಒತ್ತಾಯಿಸಿದೆ.

ರಾಜ್ಯ ಸರ್ಕಾರ ವಿಧಿಸಿರುವ ಹೆಚ್ಚಿನ ವ್ಯಾಟ್‌ನಿಂದಾಗಿ ಕರ್ನಾಟಕದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ದೆಹಲಿ ಸೇರಿದಂತೆ ಇತರ ಹಲವು ರಾಜ್ಯಗಳಲ್ಲಿನ ಇಂಧನ ಬೆಲೆಗಳಿಗಿಂತ ಹೆಚ್ಚಾಗಿದೆ ಎಂದು ವಿರೋಧ ಪಕ್ಷದ ನಾಯಕ ಆರ್ ಅಶೋಕ್ ಆರೋಪಿಸಿದ್ದಾರೆ.

ಬೆಂಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅಶೋಕ್, ಕಾಂಗ್ರೆಸ್ ಸರ್ಕಾರ ಪೆಟ್ರೋಲ್ ಬೆಲೆ ಏರಿಕೆಯಿಂದ ಹೆಚ್ಚುವರಿ ಆದಾಯ ಗಳಿಸುತ್ತಿದೆ. ವ್ಯಾಟ್ ಕಡಿಮೆ ಮಾಡುವ ಬದಲು ಅದು ಕೇಂದ್ರದ ಮೇಲೆ ಆರೋಪ ಮಾಡುತ್ತಿದೆ ಎಂದು ಅವರು ಟೀಕಿಸಿದರು. ಬೆಲೆ ಏರಿಕೆಯೂ ಕೇಂದ್ರಕ್ಕೆ ಯಾವುದೇ ಆದಾಯ ತರುವುದಿಲ್ಲ ಮತ್ತು ರಾಜ್ಯ ಸರ್ಕಾರ ವಾರ್ಷಿಕವಾಗಿ 6,000 ಕೋಟಿ ರೂ.ಗಳನ್ನು ಹೆಚ್ಚುವರಿ ಆದಾಯ ಪಡೆಯುತ್ತಿದೆ. ಇಂಧನ ಬೆಲೆ ಏರಿಕೆಯಿಂದ ಗಳಿಸಿದ ಆದಾಯವನ್ನು ಗ್ಯಾರಂಟಿ ಯೋಜನೆಗಳಿಗಾಗಿ ಬಳಸಿಕೊಳ್ಳುತ್ತಿದೆ ಎಂದು ಕಿಡಿಕಾರಿದರು.

ಸರ್ಕಾರವು ನಿಜವಾಗಿಯೂ ಜನರಿಗೆ ಸಹಾಯ ಮಾಡಲು ಬಯಸಿದರೆ, ಅದು ತನ್ನ ತೆರಿಗೆಗಳನ್ನು ಕಡಿಮೆ ಮಾಡಬೇಕು. ಇಲ್ಲದಿದ್ದರೆ, ಅದು ಗಳಿಸುತ್ತಿರುವ ಹೆಚ್ಚುವರಿ ಆದಾಯವನ್ನು ಸಾರ್ವಜನಿಕವಾಗಿ ಬಹಿರಂಗಪಡಿಸಬೇಕು. ಬೆಲೆ ಏರಿಕೆಯ ವಿರುದ್ಧ ಕಾಂಗ್ರೆಸ್ ಮಾಡುತ್ತಿರುವ ಪ್ರತಿಭಟನೆ ಜನರನ್ನು ವಂಚಿಸುವಂತಹದ್ದು, ಯುದ್ಧದ ಕಾರಣದಿಂದಾಗಿ ಹಲವಾರು ದೇಶಗಳು ಪೆಟ್ರೋಲ್ ಬಳಕೆಯನ್ನು ಕಡಿಮೆ ಮಾಡಲು ನಿರ್ಬಂಧ ವಿಧಿಸಿದ್ದರೂ, ಭಾರತವು ಅಂತಹ ಯಾವುದೇ ನಿರ್ಬಂಧಗಳನ್ನು ವಿಧಿಸಿಲ್ಲ ಎಂದು ಬಿಜೆಪಿ ನಾಯಕ ಹೇಳಿದರು.

ಕಾಂಗ್ರೆಸ್‌ನಲ್ಲಿ ಸಿಎಂ ಹುದ್ದೆಗಾಗಿ ಆಂತರಿಕ ಸಂಘರ್ಷ ಕುರಿತು ಪ್ರತಿಕ್ರಿಯಿಸಿದ ಅಶೋಕ್, ಮುಖ್ಯಮಂತ್ರಿ ಹುದ್ದೆಗೆ ಅಧಿಕಾರಕ್ಕಾಗಿ ಹೋರಾಟ ನಡೆಯುತ್ತಿದೆ. ಡಿಸಿಎಂ ಡಿ.ಕೆ. ಶಿವಕುಮಾರ್ ತಮ್ಮ ಭವಿಷ್ಯವನ್ನು ಭದ್ರಪಡಿಸಿಕೊಳ್ಳುತ್ತಿದ್ದಾರೆಯೇ ಅಥವಾ ಬೇರೆ ಪಕ್ಷಕ್ಕೆ ಸೇರಲು ಯೋಜಿಸುತ್ತಿದ್ದಾರೆಯೇ ಎಂಬುದು ಸ್ಪಷ್ಟವಾಗಿಲ್ಲ. ಸಿದ್ದರಾಮಯ್ಯ ತಮ್ಮ ಸಚಿವರ ತಂಡದೊಂದಿಗೆ ನವದೆಹಲಿಗೆ ಹೋಗುತ್ತಿದ್ದಾರೆ ಮತ್ತು ಅವರು ಸಿಎಂ ಕುರ್ಚಿಯನ್ನು ಖಾಲಿ ಮಾಡುವುದಿಲ್ಲ ಎಂದು ಅಶೋಕ ಹೇಳಿದರು.

R. Ashok
'ಮೆಹಂಗೈ ಮಾನವ್ ಮತ್ತೆ ದಾಳಿ': ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ವಿರುದ್ಧ ರಾಹುಲ್ ವಾಗ್ದಾಳಿ!

ಕೆಲವು ಮುಸ್ಲಿಂ ಮತಾಂಧರು ಭಟ್ಕಳದಲ್ಲಿ ಹಿಂದೂಗಳು ನಿರ್ಮಿಸಿದ್ದ ವೇದಿಕೆಯನ್ನು (ಮೂರಿನಕಟ್ಟೆ) ಕೆಡವಿದ್ದಾರೆ. ಆದರೆ ಪೊಲೀಸರು ಅವರ ವಿರುದ್ಧ ಯಾವುದೇ ಕ್ರಮ ಕೈಗೊಂಡಿಲ್ಲ. ಕಲಬುರ್ಗಿ ಜಿಲ್ಲೆಯ ಆಳಂದದಲ್ಲಿ ಕೋಮು ಹಿಂಸಾಚಾರದಲ್ಲಿ ಭಾಗಿಯಾಗಿರುವವರ ವಿರುದ್ಧದ ಪ್ರಕರಣಗಳನ್ನು ರಾಜ್ಯ ಸರ್ಕಾರ ಹಿಂತೆಗೆದುಕೊಂಡ ನಂತರ ಭಟ್ಕಳದಲ್ಲಿ ಈ ಘಟನೆ ನಡೆದಿದೆ ಮತ್ತು ಇದೆಲ್ಲವೂ ಮತಬ್ಯಾಂಕ್ ರಾಜಕೀಯದಿಂದಾಗಿ ನಡೆಯುತ್ತಿದೆ.ಪೊಲೀಸರ ಮೇಲೆ ದಾಳಿ ಮಾಡಿದವರ ವಿರುದ್ಧ ಗೂಂಡಾ ಕಾಯ್ದೆಯಡಿ ಪ್ರಕರಣ ದಾಖಲಿಸಬೇಕು ಮತ್ತು ಗೃಹ ಸಚಿವ ಡಾ. ಜಿ. ಪರಮೇಶ್ವರ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕು ಎಂದು ಅವರು ಹೇಳಿದರು.

'ಕಾಕ್ರೋಚ್ ಜನತಾ ಪಾರ್ಟಿ' ಮೂಲಕ ದೇಶ ವಿರೋಧಿ ಅಂಶಗಳು ದೇಶವನ್ನು ಒಡೆಯಲು ಪ್ರಯತ್ನಿಸುತ್ತಿವೆ."ಇದರಲ್ಲಿ ಪಾಕಿಸ್ತಾನಿಗಳು ಮತ್ತು ಬಾಂಗ್ಲಾದೇಶಿಯರು ಕೂಡ ಭಾಗಿಯಾಗಿದ್ದಾರೆ. ಜನರು ಇಂತಹ ಟೂಲ್‌ಕಿಟ್‌ಗಳನ್ನು ನಂಬಬಾರದು. ಕಾಂಗ್ರೆಸ್ ಜಿರಳೆ ಪಕ್ಷವಾಗಿ ಮಾರ್ಪಟ್ಟಿದೆ. ರಾಹುಲ್ ಗಾಂಧಿ ಮತ್ತು ಅರವಿಂದ್ ಕೇಜ್ರಿವಾಲ್ ಜಿರಳೆ ಜನತಾ ಪಕ್ಷದ ಹಿಂದೆ ಇದ್ದಾರೆ" ಎಂದು ಅವರು ಆರೋಪಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

X

Advertisement

X
Kannada Prabha
www.kannadaprabha.com