ಸಿಎಂ ಆಗಿ ಪ್ರಮಾಣವಚನ ಸ್ವೀಕರಿಸಲು ಡಿ.ಕೆ ಶಿವಕುಮಾರ್ ಜೂನ್ 3ನೇ ತಾರೀಖು ಆಯ್ಕೆ ಮಾಡಿಕೊಳ್ಳುತ್ತಿರುವುದೇಕೆ?

ಡಿ.ಕೆ. ಶಿವಕುಮಾರ್ ನೇತೃತ್ವದ ನೂತನ ಸಚಿವ ಸಂಪುಟದ ಪ್ರಮಾಣವಚನ ಸ್ವೀಕಾರ ಸಮಾರಂಭವು ಸರಳ ಮತ್ತು ಸಾಂದರ್ಭಿಕ ರೀತಿಯಲ್ಲಿ ನಡೆಯಲಿದೆ ಎಂದು ಕೂಡ ಮೂಲಗಳು ತಿಳಿಸಿವೆ.
D K Shivakumar
ಡಿ ಕೆ ಶಿವಕುಮಾರ್
Updated on

ಕರ್ನಾಟಕದ ನೂತನ ಮುಖ್ಯಮಂತ್ರಿಯಾಗುತ್ತಿರುವ ಡಿ.ಕೆ. ಶಿವಕುಮಾರ್ ಅವರು ಜೂನ್ 3ರಂದು ಅಧಿಕಾರ ಸ್ವೀಕರಿಸುವ ಸಾಧ್ಯತೆ ಇದೆ. ಡಿ ಕೆ ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ನಿಯೋಗವು ಇಂದು ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಅವರನ್ನು ಭೇಟಿ ಮಾಡಿ ಪ್ರಮಾಣವಚನ ಸಮಾರಂಭದ ಕುರಿತು ಚರ್ಚೆ ನಡೆಸಿದೆ.

ಡಿ.ಕೆ. ಶಿವಕುಮಾರ್ ನೇತೃತ್ವದ ನೂತನ ಸಚಿವ ಸಂಪುಟದ ಪ್ರಮಾಣವಚನ ಸ್ವೀಕಾರ ಸಮಾರಂಭವು ಸರಳ ಮತ್ತು ಸಾಂದರ್ಭಿಕ ರೀತಿಯಲ್ಲಿ ನಡೆಯಲಿದೆ ಎಂದು ಕೂಡ ಮೂಲಗಳು ತಿಳಿಸಿವೆ.

ನಿರ್ಗಮಿತ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗುರುವಾರ ರಾಜೀನಾಮೆ ನೀಡಿದ ಬಳಿಕ, ಪ್ರಮಾಣವಚನ ಸಮಾರಂಭದ ದಿನಾಂಕದ ಬಗ್ಗೆ ತೀವ್ರ ಊಹಾಪೋಹಗಳು ನಡೆಯುತ್ತಿವೆ.

ತೀವ್ರ ಧಾರ್ಮಿಕ ನಂಬಿಕೆ ಹೊಂದಿರುವ ಡಿ.ಕೆ. ಶಿವಕುಮಾರ್ ಅವರು ತಮ್ಮ ಜ್ಯೋತಿಷಿ ಬೆಳ್ಳೂರು ದ್ವಾರಕಾನಾಥ್ ಅವರ ಸಲಹೆಯ ಮೇರೆಗೆ ಜೂನ್ 3ರ ದಿನಾಂಕವನ್ನು ಆಯ್ಕೆ ಮಾಡಿಕೊಂಡಿದ್ದಾರೆ ಎಂದು ಮೂಲಗಳು ತಿಳಿಸಿವೆ. ಜೂನ್ 3 ನ್ನು ಪ್ರಮಾಣವಚನ ಸ್ವೀಕಾರಕ್ಕೆ “ಶುಭ ಮುಹೂರ್ತ” ಎಂದು ಜ್ಯೋತಿಷಿಗಳು ಸೂಚಿಸಿದ್ದಾರೆ ಎನ್ನಲಾಗಿದೆ.

ಜೂನ್ 3ರ ದಿನಾಂಕ ಆಯ್ಕೆಗೆ ಮತ್ತೊಂದು ಕಾರಣವೆಂದರೆ, ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಲಭ್ಯತೆ. ಅವರು ಪ್ರಮಾಣವಚನ ಸಮಾರಂಭದಲ್ಲಿ ಭಾಗವಹಿಸುವ ನಿರೀಕ್ಷೆಯಿದೆ ಎಂದು ಮೂಲಗಳು ತಿಳಿಸಿವೆ.

ಡಿ.ಕೆ. ಶಿವಕುಮಾರ್ ಅವರೊಂದಿಗೆ ಇಬ್ಬರು ಉಪ ಮುಖ್ಯಮಂತ್ರಿಗಳೂ ಪ್ರಮಾಣವಚನ ಸ್ವೀಕರಿಸುವ ಸಾಧ್ಯತೆ ಇದೆ. ಅವರಲ್ಲಿ ಒಬ್ಬರು ದಲಿತ ಸಮುದಾಯದಿಂದ ಹಾಗೂ ಮತ್ತೊಬ್ಬರು ಅಲ್ಪಸಂಖ್ಯಾತ ಸಮುದಾಯದಿಂದ ಇರಲಿದ್ದಾರೆ ಎಂದು ಹೇಳಲಾಗಿದೆ.

ಸಿದ್ದರಾಮಯ್ಯ ಅವರ ನಿರ್ಗಮನದ ಬಳಿಕ, ವಿವಿಧ ಜಾತಿ, ಸಮುದಾಯಗಳು ಹಾಗೂ ಪಕ್ಷದ ವಿವಿಧ ಬಣಗಳಿಗೆ ಸಮತೋಲನ ಕಲ್ಪಿಸುವ ಉದ್ದೇಶದಿಂದ ಕಾಂಗ್ರೆಸ್ ಹೊಸ ಸಚಿವ ಸಂಪುಟವನ್ನು ರಚಿಸುವ ಸಾಧ್ಯತೆ ಇದೆ. ಈ ನಡುವೆ ಸಿದ್ದರಾಮಯ್ಯ ಅವರ ಪುತ್ರ ಯತೀಂದ್ರ ಸಿದ್ದರಾಮಯ್ಯ ಅವರಿಗೆ ಹೊಸ ಸರ್ಕಾರದಲ್ಲಿ ಮಹತ್ವದ ಖಾತೆ ಸಿಗುವ ಸಾಧ್ಯತೆ ಇದೆ ಎಂದು ಮೂಲಗಳು ಸೂಚಿಸಿವೆ.

D K Shivakumar
ಡಿ.ಕೆ ಶಿವಕುಮಾರ್ ಸಿಎಂ ಆಗಲೆಂದು 3 ವರ್ಷಗಳಿಂದ ಗಡ್ಡ ಕೂದಲು ಬಿಟ್ಟಿದ್ದ ಅಭಿಮಾನಿ; ಕಡೆಗೂ ಪ್ರಯಾಗ್ ರಾಜ್ ತ್ರಿವೇಣಿ ಸಂಗಮದಲ್ಲಿ ಸ್ನಾನ; Video

ಕಳೆದ ಕೆಲವು ತಿಂಗಳುಗಳಿಂದ ಸಿದ್ದರಾಮಯ್ಯ ಮತ್ತು ಡಿ.ಕೆ. ಶಿವಕುಮಾರ್ ನಡುವೆ ನಾಯಕತ್ವದ ವಿಚಾರವಾಗಿ ನಡೆಯುತ್ತಿದ್ದ ಅಧಿಕಾರ ಪೈಪೋಟಿಯ ಬಳಿಕ, ಕಳೆದ ವಾರ ಕಾಂಗ್ರೆಸ್ ಹೈಕಮಾಂಡ್ ಡಿ ಕೆ ಶಿವಕುಮಾರ್ ಪರವಾಗಿ ತೀರ್ಮಾನ ಕೈಗೊಂಡು ಸಿದ್ದರಾಮಯ್ಯ ಅವರಿಗೆ ರಾಜೀನಾಮೆ ನೀಡುವಂತೆ ಸೂಚಿಸಿತ್ತು.

ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಡಿ ಕೆ ಶಿವಕುಮಾರ್ ನೇತೃತ್ವದ ಹೊಸ ಸರ್ಕಾರದ ರೂಪುರೇಷೆಗಳ ಬಗ್ಗೆ ಪ್ರಮುಖ ನಿರ್ದೇಶನಗಳನ್ನು ನೀಡಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಹೊಸ ಸಚಿವ ಸಂಪುಟದಲ್ಲಿ ದಲಿತರು, ಹಿಂದುಳಿದ ವರ್ಗಗಳು (OBC) ಮತ್ತು ಅಲ್ಪಸಂಖ್ಯಾತರಿಗೆ ಹೆಚ್ಚಿನ ಪ್ರಾತಿನಿಧ್ಯ ನೀಡಬೇಕು ಎಂಬುದು ರಾಹುಲ್ ಗಾಂಧಿ ಅವರ ಆಶಯವಾಗಿದೆ. ಸಾಮಾಜಿಕ ನ್ಯಾಯದ ತಮ್ಮ ರಾಜಕೀಯ ಅಜೆಂಡಾದ ಭಾಗವಾಗಿ ಅವರು ಈ ವಿಷಯಕ್ಕೆ ಒತ್ತು ನೀಡುತ್ತಿದ್ದಾರೆ ಎಂದು ಹೇಳಲಾಗಿದೆ.

ಇದಲ್ಲದೆ, ಯುವ ನಾಯಕರಿಗೂ ಸಚಿವ ಸಂಪುಟದಲ್ಲಿ ಅವಕಾಶ ನೀಡುವ ಬಗ್ಗೆ ರಾಹುಲ್ ಗಾಂಧಿ ಆಸಕ್ತಿ ಹೊಂದಿದ್ದಾರೆ ಎಂದು ಮೂಲಗಳು ತಿಳಿಸಿವೆ. 2028ರ ವಿಧಾನಸಭೆ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು, ಹೊಸ ಬದಲಾವಣೆಯ ಸಂದೇಶ ನೀಡುವ ಮತ್ತು ಯುವ ಮತದಾರರನ್ನು ಸೆಳೆಯುವ ಉದ್ದೇಶದಿಂದ ಈ ಕ್ರಮ ಮಹತ್ವದ್ದಾಗಿದೆ ಎಂದು ವಿಶ್ಲೇಷಿಸಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

X

Advertisement

X
Kannada Prabha
www.kannadaprabha.com