

ಹಾಸನ: ನೇಣುಬಿಗಿದುಕೊಂಡು ಉಪತಹಶೀಲ್ದಾರ್ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹಾಸನ ನಗರದ ರಸ್ತೆಯಲ್ಲಿರುವ ಲಾಡ್ಜ್ನಲ್ಲಿ ನಡೆದಿದೆ.
ತಿಮ್ಮಯ್ಯ (52) ಆತ್ಮಹತ್ಯೆಗೆ ಶರಣಾದ ಉಪತಹಶೀಲ್ದಾರ್. ಮೈಸೂರು ಜಿಲ್ಲೆ, ಸಾಲಿಗ್ರಾಮದಲ್ಲಿ ಉಪತಹಶೀಲ್ದಾರ್ ಆಗಿದ್ದ ತಿಮ್ಮಯ್ಯ,
ಮೂರು ವರ್ಷಗಳ ಹಿಂದೆ ಹಾಸನದಲ್ಲಿ ಕರ್ತವ್ಯ ನಿರ್ವಹಿಸಿದ್ದರು. ಮೇ 30 ಲಾಡ್ಜ್ನಲ್ಲಿ 4 ಪುಟದ ಡೆತ್ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಶರಣಾಗಿದ್ದಾರೆ.
ಮೂಲತಃ ಕೊಡಗು ಜಿಲ್ಲೆಯವರಾದ ತಿಮ್ಮಯ್ಯ ಹಾಸನ ನಗರದ ಚನ್ನಪಟ್ಟಣದ ದ್ಯಾವಮ್ಮ ಬಡಾವಣೆಯಲ್ಲಿ ಕುಟುಂಬಸ್ಥರೊಂದಿಗೆ ವಾಸವಿದ್ದರು. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು ಬಡಾವಣೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
Advertisement