ಮಂಡ್ಯದಲ್ಲಿ ಹೃದಯ ವಿದ್ರಾವಕ ಘಟನೆ: ಶಾಲೆಯಲ್ಲೇ ಹಾರ್ಟ್ ಅಟ್ಯಾಕ್; 9ನೇ ತರಗತಿ ವಿದ್ಯಾರ್ಥಿ ಸಾವು

ಇಂದು ಬೆಳಗ್ಗೆ ನಗುನಗುತ್ತಾ ಶಾಲೆಗೆ ಹೋದ ಮಗ ಸಂಜೆಯ ವೇಳೆಗೆ ಶವವಾಗಿ ಮನೆಗೆ ಮರಳಿದ್ದು ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ.
9th standard student dies of heart attack in Mandya
ವೀರಮಣಿ(
Updated on

ಮಂಡ್ಯ: ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಸೋಮನಹಳ್ಳಿ ಗ್ರಾಮದಲ್ಲಿ ಬುಧವಾರ ಶಾಲೆಯಲ್ಲಿ ಮಧ್ಯಾಹ್ನದ ಬಿಸಿಯೂಟ ಸೇವಿಸುತ್ತಿದ್ದ ವೇಳೆ 9ನೇ ತರಗತಿ ವಿದ್ಯಾರ್ಥಿಯೊಬ್ಬ ಹೃದಯಾಘಾತದಿಂದ ಮೃತಪಟ್ಟಿರುವ ಹೃದಯ ವಿದ್ರಾವಕ ಘಟನೆ ನಡೆದಿದೆ.

ಇಂದು ಬೆಳಗ್ಗೆ ನಗುನಗುತ್ತಾ ಶಾಲೆಗೆ ಹೋದ ಮಗ ಸಂಜೆಯ ವೇಳೆಗೆ ಶವವಾಗಿ ಮನೆಗೆ ಮರಳಿದ್ದು ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ.

ಮೃತ ವಿದ್ಯಾರ್ಥಿಯನ್ನು ಸೋಮನಹಳ್ಳಿ ಸರ್ಕಾರಿ ಪ್ರೌಢಶಾಲೆಯಲ್ಲಿ 9ನೇ ತರಗತಿ ಓದುತ್ತಿದ್ದ ವೀರಮಣಿ(14) ಎಂದು ಗುರುತಿಸಲಾಗಿದೆ.

9th standard student dies of heart attack in Mandya
ಶಾಲೆಯಲ್ಲೇ ಕುಸಿದು ಬಿದ್ದು 12 ವರ್ಷದ ವಿದ್ಯಾರ್ಥಿ ಸಾವು: 45 ನಿಮಿಷ ಚಿಕಿತ್ಸೆ ವಿಳಂಬ ಆರೋಪ, CCTV ವಿಡಿಯೊ ವೈರಲ್

ಇಂದು ಮಧ್ಯಾಹ್ನ ಶಾಲೆಯಲ್ಲಿ ಎಂದಿನಂತೆ ಇತರ ಮಕ್ಕಳೊಂದಿಗೆ ಬಿಸಿಯೂಟ ಮಾಡುತ್ತಿದ್ದಾಗ ವೀರಮಣಿ ಏಕಾಏಕಿ ಮೂರ್ಛೆಹೋಗಿ ಕೆಳಗೆ ಬಿದ್ದಿದ್ದಾನೆ. ತಕ್ಷಣ ಎಚ್ಚೆತ್ತ ಶಿಕ್ಷಕರು ಆತನನ್ನು ಸ್ಥಳೀಯ ಮದ್ದೂರು ಸಾರ್ವಜನಿಕ ಆಸ್ಪತ್ರೆಗೆ ಕರೆದೊಯ್ದಿದ್ದಾರೆ.

ಆದರೆ ಬಾಲಕನ ಸ್ಥಿತಿ ಗಂಭೀರವಾಗಿದ್ದರಿಂದ ಹೆಚ್ಚಿನ ಚಿಕಿತ್ಸೆಗಾಗಿ ಮಂಡ್ಯದ ಮಿಮ್ಸ್ (MIMS) ಆಸ್ಪತ್ರೆಗೆ ರವಾನಿಸಲಾಯಿತು. ದುರಾದೃಷ್ಟವಶಾತ್ ಮಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡುವ ವೇಳೆ ವೀರಮಣಿ ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿರೆಳೆದಿದ್ದಾನೆ.

ವೀರಮಣಿ ಸಾವಿಗೆ ತೀವ್ರ ಹೃದಯಾಘಾತವೇ ಕಾರಣ ಎಂದು ಮಿಮ್ಸ್ ವೈದ್ಯರು ದೃಢಪಡಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com