ಮೈಸೂರಿನಲ್ಲಿ ಚಿನ್ನದ ಉಳಿತಾಯ ಯೋಜನೆ ಹೆಸರಲ್ಲಿ ಕೋಟ್ಯಂತರ ವಂಚನೆ: ಕಡಿಮೆ ಹೂಡಿಕೆಗೆ ಹೆಚ್ಚು ಚಿನ್ನದ ಆಮಿಷವೊಡ್ಡಿ ಪರಾರಿಯಾಗಿದ್ದ ಮೋಹನ್ ಜ್ಯುವೆಲರಿ ಮಾಲೀಕ ಅರೆಸ್ಟ್

ಮೈಸೂರಿನ ‘ಮೋಹನ್ ಜ್ಯುವೆಲರಿ’ ಗೋಲ್ಡ್ ಸ್ಕ್ಯಾಮ್! ಚಿನ್ನತಂಬಿ ಹಗರಣದ ಬೆನ್ನಲ್ಲೇ ಮೈಸೂರಿನಲ್ಲಿ ಮತ್ತೊಂದು ಚಿನ್ನದ ಮೋಸ: EMI ಚಿನ್ನದ ಯೋಜನೆ ಹೆಸರಿನಲ್ಲಿ ನೂರಾರು ಗ್ರಾಹಕರಿಗೆ ಕೋಟ್ಯಂತರ ರೂಪಾಯಿ ವಂಚನೆ ಪ್ರಕರಣದಲ್ಲಿ ಮೋಹನ್ ಜ್ಯುವೆಲರಿ ಮಾಲೀಕ ಬಂಧನ
Gold
ಚಿನ್ನOnline Desk
Updated on

ಮೈಸೂರು: ಸಾಂಸ್ಕೃತಿಕ ರಾಜಧಾನಿ ಮೈಸೂರಿನಲ್ಲಿ ಇತ್ತೀಚೆಗಷ್ಟೇ ನಡೆದಿದ್ದ ಚಿನ್ನತಂಬಿ ಚಿನ್ನದ ಹಗರಣದ ಬೆನ್ನಲ್ಲೇ, ನಗರದ ವಿವೇಕಾನಂದ ವೃತ್ತದ 'ಮೋಹನ್ ಜ್ಯುವೆಲರಿ' ಸಂಸ್ಥೆಯಿಂದ ನೂರಾರು ಗ್ರಾಹಕರಿಗೆ ಕೋಟ್ಯಂತರ ರೂಪಾಯಿ ವಂಚಿಸಿರುವ ಮತ್ತೊಂದು ಗೋಲ್ಡ್ ಸ್ಕ್ಯಾಮ್ ಬೆಳಕಿಗೆ ಬಂದಿದೆ. ಈ ವಂಚನೆಗೆ ಸಂಬಂಧಿಸಿದಂತೆ ಮುಖ್ಯ ಆರೋಪಿ ಹಾಗೂ ಮಳಿಗೆಯ ಮಾಲೀಕ ಮೋಹನ್ ಲಾಲ್‌ನನ್ನು ಪೊಲೀಸರು ಈಗಾಗಲೇ ಬಂಧಿಸಿ ವಿಚಾರಣೆಗೊಳಪಡಿಸಿದ್ದಾರೆ. ಆ ಕುರಿತ ವರದಿ ಇಲ್ಲಿದೆ:

ಏನಿದು ಘಟನೆ?

ಮೋಹನ್ ಜ್ಯುವೆಲರಿ ಮಾಲೀಕ ಮೋಹನ್ ಲಾಲ್ ಗ್ರಾಹಕರಿಗಾಗಿ ವಿಶೇಷ ಮಾಸಿಕ ಕಂತುಗಳ (EMI) ಚಿನ್ನದ ಉಳಿತಾಯ ಯೋಜನೆಯನ್ನು ಪರಿಚಯಿಸಿದ್ದ. 15 ತಿಂಗಳ ಕಾಲ ನಿಯಮಿತವಾಗಿ ಕಂತು ಕಟ್ಟಿದರೆ, ಜ್ಯುವೆಲರಿ ವತಿಯಿಂದ 2 ತಿಂಗಳ ಬೋನಸ್ ನೀಡುವುದಾಗಿ ಆಮಿಷ ಒಡ್ಡಿದ್ದ. ಅದರಂತೆ, ಕಳೆದ ಎರಡು ಆವೃತ್ತಿಗಳಲ್ಲಿ ಗ್ರಾಹಕರಿಂದ ನಿರಂತರ ಹಣ ಪಡೆದು, ಭರವಸೆ ನೀಡಿದಂತೆಯೇ ಚಿನ್ನದ ಆಭರಣಗಳನ್ನು ವಿತರಿಸಿ ಜನರ ಸಂಪೂರ್ಣ ನಂಬಿಕೆ ಗಳಿಸಿದ್ದ. ಈ ನಂಬಿಕೆಯನ್ನೇ ಬಂಡವಾಳವಾಗಿಸಿಕೊಂಡು ಮೂರನೇ ಬಾರಿ ನೂರಾರು ಗ್ರಾಹಕರು, ಹೆಣ್ಣುಮಕ್ಕಳ ಮದುವೆ ಹಾಗೂ ಇತರೆ ಕಾರ್ಯಗಳಿಗಾಗಿ ಲಕ್ಷಾಂತರ ರೂಪಾಯಿಗಳನ್ನು ಮಾಸಿಕ ಕಂತುಗಳ ರೂಪದಲ್ಲಿ ಜಮೆ ಮಾಡಿದ್ದರು.

ಕಾರ್ಡ್ ಮೂಲಕ ಹಣ ಸಂಗ್ರಹ:

ವಿಶೇಷ ಮಾಸಿಕ ಕಂತುಗಳ ಚಿನ್ನದ ಉಳಿತಾಯ ಯೋಜನೆಯ ಕಾರ್ಡ್ ಪಡೆದ ಗ್ರಾಹಕರು ಪ್ರತಿ ತಿಂಗಳು ಕನಿಷ್ಠ 500 ರೂಪಾಯಿಯಿಂದ ಹಿಡಿದು ತಮಗೆ ಸಾಧ್ಯವಾದಷ್ಟು ಹಣವನ್ನು ಜಮಾ ಮಾಡಬಹುದೆಂದು ತಿಳಿಸಲಾಗಿತ್ತು. ಇದನ್ನು ನಂಬಿದ ಕೂಲಿ ಕಾರ್ಮಿಕರು, ಮಧ್ಯಮ ವರ್ಗದ ನೂರಾರು ಜನರು ತಮ್ಮ ದುಡಿಮೆಯ ಹಣವನ್ನು ಪ್ರತಿ ತಿಂಗಳು ಪ್ರಾಮಾಣಿಕವಾಗಿ ಪಾವತಿಸುತ್ತಾ ಬಂದಿದ್ದರು.

Gold
'ಅಗತ್ಯವಿದ್ದರೆ ಚಿನ್ನ ಖರೀದಿಸಿ, ಮನರಂಜನೆಗೆ ವಿದೇಶ ಪ್ರವಾಸ, ಹೊರ ದೇಶಗಳಲ್ಲಿ ಮದುವೆ ಬೇಡ': ಪ್ರಧಾನಿ ಮೋದಿ ಸಲಹೆ; Video

ಹಾಗಾದ್ರೆ, ಪ್ರಕರಣ ಬೆಳಕಿಗೆ ಬಂದಿದ್ದು ಹೇಗೆ?

ಕಳೆದ ಒಂದು ವಾರದಿಂದ ವಿವೇಕಾನಂದ ವೃತ್ತದಲ್ಲಿರುವ ಮೋಹನ್ ಜ್ಯುವೆಲರಿ ಮಳಿಗೆ ಇದ್ದಕ್ಕಿದ್ದಂತೆ ಸಂಪೂರ್ಣವಾಗಿ ಬಂದ್ ಆಗಿತ್ತು. ಇನ್ನು, ಹಣ ಕಟ್ಟಿದ್ದ ಗ್ರಾಹಕರು ಅಂಗಡಿಗೆ ಬಂದು ವಿಚಾರಿಸಿದಾಗ ಮಾಲೀಕ ಮೋಹನ್ ಲಾಲ್ ತನ್ನ ಫೋನ್ ಸ್ವಿಚ್ ಆಫ್ ಮಾಡಿಕೊಂಡು, ರಾತ್ರೋರಾತ್ರಿ ಕುಟುಂಬದೊಂದಿಗೆ ಮನೆ ಖಾಲಿ ಮಾಡಿ ಊರು ಬಿಟ್ಟಿರುವುದು ಪತ್ತೆಯಾಗಿದೆ. ಇದಾದ ನಂತರ ವಂಚನೆಗೊಳಗಾದ ಗ್ರಾಹಕರೆಲ್ಲರೂ ಒಟ್ಟಾಗಿ ಮೈಸೂರಿನ ಕುವೆಂಪುನಗರ ಪೊಲೀಸ್ ಠಾಣೆಗೆ ಬಂದು ದೂರು ದಾಖಲಿಸಿದ್ದಾರೆ.

ಇನ್ನು, ಗ್ರಾಹಕರ ದೂರಿನ ಮೇರೆಗೆ ತಕ್ಷಣ ಕಾರ್ಯಾಚರಣೆ ನಡೆಸಿದ ಕುವೆಂಪುನಗರ ಪೊಲೀಸರು ಆರೋಪಿ ಮೋಹನ್ ಲಾಲ್‌ನನ್ನು ಸೆಪ್ಟೆಂಬರ್ 2 ರ ರಾತ್ರಿ ಜ್ಯುವೆಲರಿ ಶಾಪ್ ಸಮೀಪವೇ ವಶಕ್ಕೆ ಪಡೆದಿದ್ದಾರೆ. ಏತನ್ಮಧ್ಯೆ, ಪ್ರಕರಣದಲ್ಲಿ ಭಾಗಿಯಾಗಿರುವ ಎನ್ನಲಾದ ಈತನ ತಲೆಮರೆಸಿಕೊಂಡಿರುವ ಮಗನಿಗಾಗಿ ಪೊಲೀಸರು ತೀವ್ರ ಶೋಧ ನಡೆಸುತ್ತಿದ್ದಾರೆ.

Gold
ಬದಲಾಗುತ್ತಿದೆ ಹೂಡಿಕೆಯ ಟ್ರೆಂಡ್! ಚಿನ್ನ, ಭೂಮಿ ಅಥವಾ ಷೇರುಪೇಟೆ? ಭಾರತೀಯರ ಚಿತ್ತ ಈಗ ಎತ್ತ?

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com