ಖರ್ಗೆ ಭಾಷಣ ಮಾಡಿದ ಸ್ಥಳದಲ್ಲಿ ಶುದ್ಧೀಕರಣ ಪ್ರಕರಣ: ವಿಧಾನಸೌಧ ಠಾಣೆಯಲ್ಲಿ ‘zero FIR’ ದಾಖಲು

ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಪರಿಶಿಷ್ಟ ಜಾತಿ/ಪಂಗಡ ಘಟಕದ ಮಾಜಿ ಸದಸ್ಯ ಟಿ. ರಾಮಪ್ಪ ಅವರು ನೀಡಿದ ದೂರಿನ ಆಧಾರದ ಮೇಲೆ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
Representational image
ಸಾಂದರ್ಭಿಕ ಚಿತ್ರ
Updated on

ಬೆಂಗಳೂರು: ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಉತ್ತರಾಖಂಡದಲ್ಲಿ ಜಂಟಿ ಪ್ರಚಾರ ಸಭೆ ನಡೆಸಿದ್ದ ವೇದಿಕೆಯನ್ನು ‘ಶುದ್ಧೀಕರಣ’ಗೊಳಿಸಿದ ಆರೋಪದ ಮೇಲೆ ಉತ್ತರಾಖಂಡ ಬಿಜೆಪಿ ರಾಜ್ಯಾಧ್ಯಕ್ಷ ಮಹೇಂದ್ರ ಭಟ್ ಸೇರಿದಂತೆ ಹಲವರ ವಿರುದ್ಧ ಬೆಂಗಳೂರಿನ ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ಶೂನ್ಯ ಎಫ್‌ಐಆರ್ (Zero FIR) ದಾಖಲಾಗಿದೆ.

ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಪರಿಶಿಷ್ಟ ಜಾತಿ/ಪಂಗಡ ಘಟಕದ ಮಾಜಿ ಸದಸ್ಯ ಟಿ. ರಾಮಪ್ಪ ಅವರು ನೀಡಿದ ದೂರಿನ ಆಧಾರದ ಮೇಲೆ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಖರ್ಗೆ ಅವರ ಕಾರ್ಯಕ್ರಮದ ಬಳಿಕ ನಡೆದಿದ್ದ ಎನ್ನಲಾದ ಶುದ್ಧೀಕರಣ ಕಾರ್ಯವು ಸಮುದಾಯಕ್ಕೆ ಮಾಡಿದ ಅವಮಾನವಾಗಿದೆ ಎಂದು ದೂರಿನಲ್ಲಿ ಆರೋಪಿಸಿದ್ದಾರೆ.

ಅಪರಿಚಿತ ವ್ಯಕ್ತಿಗಳ ವಿರುದ್ಧ ಶೂನ್ಯ ಎಫ್‌ಐಆರ್ ದಾಖಲಿಸಲಾಗಿದ್ದು, ಹೆಚ್ಚಿನ ತನಿಖೆಗಾಗಿ ಪ್ರಕರಣವನ್ನು ಉತ್ತರಾಖಂಡದ ಹಲ್ದ್ವಾನಿ ಪೊಲೀಸ್ ಠಾಣೆಯ ವ್ಯಾಪ್ತಿಗೆ ವರ್ಗಾಯಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.

Representational image
ಖರ್ಗೆ ಭಾಷಣ ಮಾಡಿದ ಸ್ಥಳದಲ್ಲಿ ಶುದ್ಧೀಕರಣ: ಅಟ್ರಾಸಿಟಿ ಕಾಯ್ದೆಯಡಿ FIR ದಾಖಲಿಸಲು ರಾಹುಲ್ ಗಾಂಧಿ ಒತ್ತಾಯ! Video

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಮೇಲಿನ ದೌರ್ಜನ್ಯ ತಡೆ ಕಾಯ್ದೆ, ಭಾರತೀಯ ನ್ಯಾಯ ಸಂಹಿತೆಯ ಸೆಕ್ಷನ್ 196 ಹಾಗೂ ನಾಗರಿಕ ಹಕ್ಕುಗಳ ರಕ್ಷಣಾ ಕಾಯ್ದೆಯ ಸೆಕ್ಷನ್ 7ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ವಿವಿಧ ಧಾರ್ಮಿಕ, ಜನಾಂಗೀಯ, ಭಾಷಾ ಅಥವಾ ಪ್ರಾದೇಶಿಕ ಗುಂಪುಗಳು, ಜಾತಿಗಳು ಅಥವಾ ಸಮುದಾಯಗಳ ನಡುವೆ ದ್ವೇಷ, ವೈರತ್ವ ಅಥವಾ ಅಸಹಕಾರವನ್ನು ಉತ್ತೇಜಿಸುವುದಕ್ಕೆ ಸಂಬಂಧಿಸಿದಂತೆ ಬಿಎನ್‌ಎಸ್‌ನ ಸೆಕ್ಷನ್ 196 ಅನ್ವಯಿಸಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com