ಬೆಂಗಳೂರು ಸುರಂಗ ರಸ್ತೆ ಟೆಂಡರ್ ಮೊತ್ತ ಶೇ.97ರಷ್ಟು ಹೆಚ್ಚಳ..! ಇಷ್ಟು ಹಣ ಬೇಕೇ..?

ಪ್ರಸ್ತಾವಿತ ಬೆಂಗಳೂರು ಸುರಂಗ ರಸ್ತೆ ಯೋಜನೆಯ ಟೆಂಡರ್ ಮೊತ್ತವನ್ನು ಶೇ.97ರಷ್ಟು ಹೆಚ್ಚಿಸಲಾಗಿದೆ, ಬೆಂಗಳೂರಿಗೆ ಸುರಂಗ ರಸ್ತೆ ಯೋಜನೆಯ ಅಗತ್ಯವಿಲ್ಲ. ನಗರದಲ್ಲಿ ಹೆಚ್ಚುತ್ತಿರುವ ಸಂಚಾರ ದಟ್ಟಣೆಗೆ ಕಾರಣವೇನು..?
File photo
ಸಂಗ್ರಹ ಚಿತ್ರ
Updated on

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಪ್ರಸ್ತಾವಿತ ಸುರಂಗ ರಸ್ತೆ ಯೋಜನೆಯ ಟೆಂಡರ್ ಮೊತ್ತ ಶೇ.97ರಷ್ಟು ಹೆಚ್ಚಾಗಿದೆ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಆರೋಪಿಸಿದ್ದು, ಸುರಂಗ ರಸ್ತೆಗೆ ಇಷ್ಟು ಹಣ ಬೇಕೇ ಎಂದು ರಾಜ್ಯ ಸರ್ಕಾರವನ್ನು ಪ್ರಶ್ನಿಸಿದ್ದಾರೆ.

ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಪ್ರಸ್ತಾವಿತ ಬೆಂಗಳೂರು ಸುರಂಗ ರಸ್ತೆ ಯೋಜನೆಯ ಟೆಂಡರ್ ಮೊತ್ತವನ್ನು ಶೇ.97ರಷ್ಟು ಹೆಚ್ಚಿಸಲಾಗಿದೆ, ಬೆಂಗಳೂರಿಗೆ ಸುರಂಗ ರಸ್ತೆ ಯೋಜನೆಯ ಅಗತ್ಯವಿಲ್ಲ. ನಗರದಲ್ಲಿ ಹೆಚ್ಚುತ್ತಿರುವ ಸಂಚಾರ ದಟ್ಟಣೆಗೆ ಕಾರಣವೇನು ಎಂಬುದರ ಕುರಿತು ಸರ್ಕಾರ ಸಮಗ್ರ ಅಧ್ಯಯನ ನಡೆಸಬೇಕು ಎಂದು ಹೇಳಿದರು.

ಕಾಂಗ್ರೆಸ್ ಸರ್ಕಾರ ಇನ್ನೂ ಒಂದು ವರ್ಷಕ್ಕೂ ಹೆಚ್ಚು ಕಾಲ ಅಧಿಕಾರದಲ್ಲಿರಲಿದೆ. ಈ ಅವಧಿಯಲ್ಲಿ ಸರ್ಕಾರ ಬೆಂಗಳೂರನ್ನು ಹಾಳು ಮಾಡಬಾರದು.

ಮೂಲಸೌಕರ್ಯ ಕಾಮಗಾರಿಗಳಿಗೆ ಉದ್ಯಾನವನದ ಜಮೀನು ಬಳಸುವ ಮಸೂದೆಯನ್ನು ರಾಜ್ಯ ಸರ್ಕಾರ ಜನರಿಂದ ತೀವ್ರ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಹಿಂಪಡೆದುಕೊಂಡಿದೆ ಎಂದು ತಿಳಿಸಿದರು.

File photo
ಬೆಂಗಳೂರಿನ 'ಸುರಂಗ ರಸ್ತೆ' ಯೋಜನೆ ಬೆಂಬಲಿಸಲು ಉದ್ಯಮಿಗಳಿಗೆ ಸಿಎಂ ಡಿ.ಕೆ ಶಿವಕುಮಾರ್ ಕರೆ!

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com