ಬೆಂಗಳೂರಿನ 'ರಸ್ತೆ ಗುಂಡಿ'ಯಿಂದಾಗಿ ಗಾಯ; ರಸ್ತೆಗಳನ್ನು ಸರಿಪಡಿಸುವಂತೆ ಮಹಿಳೆ ಒತ್ತಾಯ; ಸರ್ಕಾರ ಬಿಜೆಪಿ ತರಾಟೆ!

ವರ್ತೂರು ರಸ್ತೆಯಲ್ಲಿನ ಗುಂಡಿಗಳಿಂದಾಗಿ ಗಾಯಗೊಂಡಿದ್ದ ಮಹಿಳೆಯೊಬ್ಬರು ತುರ್ತು ಪ್ಲಾಸ್ಟಿಕ್ ಸರ್ಜರಿ ಮಾಡಿಸಿಕೊಳ್ಳುವಂತಾಯಿತು ಎಂದು ಆರೋಪಿಸಿದ್ದು ಅಲ್ಲದೆ ತಕ್ಷಣ ರಸ್ತೆ ದುರಸ್ತಿ ಮಾಡುವಂತೆ ಅಧಿಕಾರಿಗಳನ್ನು ಒತ್ತಾಯಿಸಿದ್ದರು.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
Updated on

ಬೆಂಗಳೂರು: ವರ್ತೂರು ರಸ್ತೆಯಲ್ಲಿನ ಗುಂಡಿಗಳಿಂದಾಗಿ ಗಾಯಗೊಂಡಿದ್ದ ಮಹಿಳೆಯೊಬ್ಬರು ತುರ್ತು ಪ್ಲಾಸ್ಟಿಕ್ ಸರ್ಜರಿ ಮಾಡಿಸಿಕೊಳ್ಳುವಂತಾಯಿತು ಎಂದು ಆರೋಪಿಸಿದ್ದು ಅಲ್ಲದೆ ತಕ್ಷಣ ರಸ್ತೆ ದುರಸ್ತಿ ಮಾಡುವಂತೆ ಅಧಿಕಾರಿಗಳನ್ನು ಒತ್ತಾಯಿಸಿದ್ದರು. ಐಶಾನಿ ಖನ್ನಾ ಎಂಬುವರು ಸಾಮಾಜಿಕ ಮಾಧ್ಯಮ ವೇದಿಕೆ 'ಎಕ್ಸ್' ನಲ್ಲಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ತಮ್ಮ ಫೋಟೋವನ್ನು ಹಂಚಿಕೊಂಡಿದ್ದಾರೆ. ವರ್ತೂರು ರಸ್ತೆಯಲ್ಲಿನ ಗುಂಡಿಯಿಂದಾಗಿ ನನ್ನ ಕಾಲಿಗೆ ಗಾಯವಾಗಿದ್ದು ತುರ್ತು ಪ್ಲಾಸ್ಟಿಕ್ ಸರ್ಜರಿ ಮಾಡಿಸಿಕೊಳ್ಳಬೇಕಾಯಿತು. ಅಲ್ಲದೆ ಆಸ್ಪತ್ರೆಯಲ್ಲಿ 5 ದಿನಗಳು ಇರಬೇಕಾಗಿ ಬಂದಿದ್ದು 1.97 ಲಕ್ಷ ರೂ. ವೆಚ್ಚವಾಯಿತು ಎಂದು ಬರೆದುಕೊಂಡಿದ್ದರು. ಆಗಸ್ಟ್ 20ರಂದು ವರ್ತೂರು ಪ್ರದೇಶದಲ್ಲಿನ ರಸ್ತೆ ಗುಂಡಿಯಿಂದಾಗಿ ಅಪಘಾತ ಸಂಭವಿಸಿತ್ತು ಎಂದು ಟ್ವೀಟ್ ಮಾಡಿದ್ದ ಐಶಾನಿ, ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ಮತ್ತು ಗ್ರೇಟರ್ ಬೆಂಗಳೂರು ಅಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡ ಸೇರಿದಂತೆ ಇತರರನ್ನು ಟ್ಯಾಗ್ ಮಾಡಿದ್ದರು.

ಈ ಪೋಸ್ಟ್ ಅನ್ನು ಹಂಚಿಕೊಂಡಿರುವ ಬಿಜೆಪಿ ಬೆಂಗಳೂರಿನ ರಸ್ತೆಗಳ ಸ್ಥಿತಿಯ ಬಗ್ಗೆ ರಾಜ್ಯದ ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿತು. ಕಾಂಗ್ರೆಸ್ ತನ್ನ ಜೇಬು ತುಂಬಿಸಿಕೊಳ್ಳುತ್ತಿದ್ದರೆ ಅಕ್ಕ ಬೆಂಗಳೂರಿನವರು ತಮ್ಮ ಮೂಳೆಗಳನ್ನು ಮುರಿದುಕೊಳ್ಳುತ್ತಿದ್ದಾರೆ ಎಂದು ಬಿಜೆಪಿ 'X' ನಲ್ಲಿ ಪೋಸ್ಟ್‌ ಮಾಡಿದೆ. ಕಳೆದ ಕೆಲವು ವರ್ಷಗಳಿಂದ ರಸ್ತೆಗಳಿಗೆ 5,500 ಕೋಟಿ ರೂ.ಗಳನ್ನು ಖರ್ಚು ಮಾಡಲಾಗಿದೆ ಎಂಬ ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ಅವರ ಹೇಳಿಕೆಯನ್ನು ಉಲ್ಲೇಖಿಸಿ, ಬೆಂಗಳೂರಿನಲ್ಲಿ ರಸ್ತೆ ಮೂಲಸೌಕರ್ಯಕ್ಕಾಗಿ ಖರ್ಚು ಮಾಡುವುದನ್ನು ಬಿಜೆಪಿ ಪ್ರಶ್ನಿಸಿದೆ.

ಸಂಗ್ರಹ ಚಿತ್ರ
ತುಂಗಭದ್ರಾ ಜಲಾಶಯದ ಹೂಳು ತೆರವು ಸಾಧ್ಯವಿಲ್ಲದಿದ್ದರೆ ಸಮಾನಾಂತರ ಜಲಾಶಯ ನಿರ್ಮಿಸಿ: ರಾಜ್ಯ ಸರ್ಕಾರಕ್ಕೆ ಬಿ.ವೈ. ವಿಜಯೇಂದ್ರ ಆಗ್ರಹ!

ಇದು ಗ್ರೇಟರ್ ಬೆಂಗಳೂರು ಅಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡ ಅವರು ರಸ್ತೆ ಕಾಮಗಾರಿಗಳಿಗೆ ಮತ್ತೊಂದು 8,000 ಕೋಟಿ ರೂ.ಗಳನ್ನು ಘೋಷಿಸಿದ್ದಾರೆ. ಈ ಹಣ ಎಲ್ಲಿಗೆ ಹೋಗುತ್ತಿದೆ? ಈ ಹಣವು ನಿಮ್ಮ ಲೂಟಿ ಸರ್ಕಾರದ ಭಾಗವಾಗಿದೆಯೇ ಎಂದು ಬಿಜೆಪಿ ಕೇಳಿದೆ. ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಶನಿವಾರ, ರಾಜ್ಯ ಸರ್ಕಾರ ಕಳೆದ ಕೆಲವು ವರ್ಷಗಳಿಂದ ಬೆಂಗಳೂರಿನ ರಸ್ತೆಗಳಿಗೆ ಸುಮಾರು 5,500 ಕೋಟಿ ರೂ.ಗಳನ್ನು ಖರ್ಚು ಮಾಡಿದೆ. ಆದರೂ, ನಮ್ಮ ರಸ್ತೆಗಳ ಸ್ಥಿತಿಯನ್ನು ಎಲ್ಲರೂ ನೋಡಬಹುದು. ಈಗ, ಸಚಿವ ಕೃಷ್ಣ ಬೈರೇಗೌಡ ಅವರು ನಗರದ ರಸ್ತೆಗಳನ್ನು ಸರಿಪಡಿಸಲು ಮತ್ತೊಂದು 8,000 ಕೋಟಿ ರೂ.ಗಳನ್ನು ಘೋಷಿಸಿದ್ದಾರೆ ಎಂದು ಅವರು 'X' ನಲ್ಲಿ ಪೋಸ್ಟ್‌ನಲ್ಲಿ ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com